ರಾಜ್ಯದಿಂದ ಕೇಂದ್ರಕ್ಕೆ 12 ಐಎಸ್‌ಒ ಕಂಟೈನರ್‌ಗಳಿಗೆ ಬೇಡಿಕೆ


Team Udayavani, May 10, 2021, 3:17 PM IST

covid effect

ಬೆಂಗಳೂರು: ರಾಜ್ಯದಲ್ಲಿ ಆಮ್ಲಜನಕ ಉತ್ಪಾದನೆಯಾಗುತ್ತಿದ್ದರೂ, ಅದರ ಪೂರೈಕೆಯಲ್ಲಿ ತುಸು ವಿಳಂಬವಾಗುತ್ತಿರುವುದರಿಂದ ರೈಲುಮಾರ್ಗಗಳ ಮೂಲಕ ಸರಬರಾಜು ಮಾಡಲುಸರ್ಕಾರ ಚಿಂತನೆ ನಡೆಸಿದೆ.

ಈ ಸಂಬಂಧ ವಿಶಿಷ್ಟ ಮಾದರಿಯ ಅಂದರೆಐಎಸ್‌ಒ  ಮಾದರಿಯ 12ಕಂಟೈನರ್‌ಗಳಿಗಾಗಿ ಕೇಂದ್ರಕ್ಕೆ ಬೇಡಿಕೆ ಸಲ್ಲಿಸಿದ್ದು,ಮಂಜೂರು ಮಾಡುವ ನಿರೀಕ್ಷೆ ಇದೆ. ಒಂದು ವೇಳೆ ಈ ಐಎಸ್‌ಒ ಟ್ಯಾಂಕರ್‌ಗಳುಮಂಜೂರಾದರೆ, ಈಗ ಸರಬರಾಜು ಆಗುತ್ತಿರುವಸಮಯಕ್ಕಿಂತ ದುಪ್ಪಟ್ಟು ವೇಗದಲ್ಲಿ ಆಮ್ಲಜನಕಸಾಗಿಸಲು ಸಾಧ್ಯವಾಗಲಿದೆ. ಉದಾಹರಣೆಗೆ ಕಳಿಂಗದಿಂದ ನಿತ್ಯ ಸುಮಾರು 60 ಟನ್‌ ಆಮ್ಲಜನಕ ರಾಜ್ಯಕ್ಕೆ ಮಂಜೂರಾಗಿದೆ.

ಇದು ರಸ್ತೆ ಮೂಲಕ ತಲುಪಲು ಮೂರು ದಿನಗಳು ಹಿಡಿಯುತ್ತದೆ. ಆದರೆ, ರೈಲು ಮಾರ್ಗವಾಗಿ ರಾತ್ರೋರಾತ್ರಿ ಬಂದುಬಿಡುತ್ತದೆ ಎಂದು ಆಮ್ಲಜನಕ ಪೂರೈಕೆ ಉಸ್ತುವಾರಿ ತಂಡದಲ್ಲಿರುವ ಉನ್ನತ ಅಧಿಕಾರಿಯೊಬ್ಬರು ಉದಯವಾಣಿಗೆ ಮಾಹಿತಿನೀಡಿದರು. ಐಎಸ್‌ಒ ಕಂಟೈನರ್‌ನಲ್ಲಿ ಬರುವ ಆಮ್ಲಜನಕವನ್ನು ನಂತರ ಕ್ರಯೋಜನಿಕ್‌ ಟ್ಯಾಂಕರ್‌ಗಳಿಗೆ ಶಿಫ್ಟ್ ಮಾಡಲಾಗುತ್ತದೆ. ಆ ಮೂಲಕ ನಾನಾ ಭಾಗಗಳಿಗೆ ಪೂರೈಸಲಾಗುತ್ತದೆ.

ಐಎಸ್‌ಒ ಟ್ಯಾಂಕರ್‌ ಮೊರೆ ಯಾಕೆ?

ಸಾಮಾನ್ಯವಾಗಿ ರಸ್ತೆ ಮೂಲಕ ಪೂರೈಸ ಲಾಗುವ ಆಮ್ಲಜನಕ ಟ್ಯಾಂಕರ್‌ಗಳು ಸುರಕ್ಷತೆ ದೃಷ್ಟಿಯಿಂದ ಗಂಟೆಗೆ ಗರಿಷ್ಠ 50 ಕಿ.ಮೀ. ವೇಗದಲ್ಲಿ ಸಂಚರಿಸುತ್ತವೆ. ‌ ಅಲ್ಲದೆ,ರಾತ್ರಿ 11ರಿಂದ ಬೆಳಗಿನಜಾವ 5ರವರೆಗೆ ಕಡ್ಡಾಯವಾಗಿ ಕಾರ್ಯಾಚರಣೆ ನಿಷಿದ್ಧ. ಯಾಕೆಂದರೆ, ಅದು ಮಲಗುವ ಸಮಯ.ಆದರೆ, ಐಎಸ್‌ಒ ಟ್ಯಾಂಕರ್‌ಗಳು ರೈಲು ಎಂಜಿನ್‌ಗೆ ಜೋಡಣೆ ಮಾಡಲಾಗಿರುತ್ತದೆ. ಗಂಟೆಗೆ ಸರಾಸರಿ 100 ಕಿ.ಮೀ. ವೇಗದಲ್ಲಿ ಪೂರೈಕೆ ಆಗುತ್ತವೆ. ಈ ವೇಗದಲ್ಲಿ ಕಂಟೈನರ್‌ಗಳು ಬರುವುದರಿಂದ ಹೆಚ್ಚು ಒತ್ತಡ ಉಂಟಾಗುತ್ತದೆ. ಪರಿಣಾಮ ಆಮ್ಲಜನಕ ಗುಣಮಟ್ಟವೂ ಉತ್ತಮವಾಗಿರುತ್ತದೆ ಎಂದು ತಜ್ಞರು ಹೇಳುತ್ತಾರೆ.

ಜತೆಗೆ ಹೆಚ್ಚಿನ ಪ್ರಮಾಣದಲ್ಲಿ ಕಡಿಮೆ ಅವಧಿಯಲ್ಲಿ ಸರಬರಾಜು ಆಗುತ್ತದೆ. ಸದ್ಯ ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಹಾಹಾಕಾರ ಉಂಟಾಗಿರುವುದರಿಂದ ಹೆಚ್ಚು ಉಪಯುಕ್ತ ಆಗಲಿದೆ ಎಂದೂ ತಜ್ಞರು ತಿಳಿಸಿದರು.

ಈಚೆಗೆ ಬಹ್ರೆನ್‌ನಿಂದ 80 ಮೆಟ್ರಿಕ್‌ ಟನ್‌ ಆಮ್ಲಜನಕ ರಾಜ್ಯದ ಕರಾವಳಿ ಮೂಲಕ ಬಂದಿಳಿಯಿತು. ಇಲ್ಲಿ ಆಮ್ಲಜನಕಕ್ಕಿಂತ ಹೆಚ್ಚಾಗಿ ನಾಲ್ಕು ಕಂಟೈನರ್‌ಗಳು ಬಂದಿವೆ. ಇದು ನಮಗೆ ಪ್ರಸ್ತುತ ಸಂದರ್ಭದಲ್ಲಿ ಅತಿ ಮುಖ್ಯವಾಗಿದೆ.ಇದರೊಂದಿಗೆ ಕೇಂದ್ರದಿಂದಲೂ 12 ಕಂಟೈನರ್‌ಗಳು ಮಂಜೂರಾದರೆ ಇನ್ನಷ್ಟು ಅನುಕೂಲ ಆಗಲಿದೆ ಎಂದು ಅಧಿಕಾರಿಗಳು ವಿವರಿಸಿದರು.

730ಮೆ.ಟ. ರಾಜ್ಯಕ್ಕೆ ಹಂಚಿಕೆ

ರಾಜ್ಯದಲ್ಲಿ ಜಿಂದಾಲ್‌ನ 1,400 ಮೆ.ಟ. ಸೇರಿ ಒಟ್ಟಾರೆ ಸುಮಾರು 1,830 ಮೆ.ಟ. ಆಮ್ಲಜನಕಉತ್ಪಾದನೆಯಾಗುತ್ತಿದ್ದು, ಇದು ದಕ್ಷಿಣ ಏಷಿಯಾದಲ್ಲಿ ಅತ್ಯಧಿಕ ಉತ್ಪಾದನೆಯಾಗಿದೆ. ಈಪೈಕಿ 730 ಮೆ.ಟ. ರಾಜ್ಯಕ್ಕೆ ಹಂಚಿಕೆಯಾಗಿದೆ.ಉಳಿದಿದ್ದರಲ್ಲಿ ನೆರೆಯ ರಾಜ್ಯಗಳಿಗೆ ಪೂರೈಕೆ ಆಗುತ್ತಿದೆ.

ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.