ಜಿಲ್ಲೆಯಲ್ಲಿ ಕೊರೊನಾ ಗೆದ್ದವರೇ ಹೆಚ್ಚು


Team Udayavani, May 10, 2021, 10:12 PM IST

10-13

„ತಿಪ್ಪೇಸ್ವಾಮಿ ನಾಕೀಕೆರೆ

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿಗೆ ತುತ್ತಾಗಿ ಗುಣಮುಖರಾಗುವವರ ಸರಾಸರಿ ಪ್ರಮಾಣ ಶೇ.90.22 ಕ್ಕೆ ತಲುಪಿದೆ. ಎಲ್ಲೆಲ್ಲೂ ಕೋವಿಡ್‌ 19 ಎರಡನೇ ಅಲೆ ಅಪಾಯದ ಸುದ್ದಿಗಳೇ ಚರ್ಚೆಯಾಗುತ್ತಿರುವ ಸಂದರ್ಭದಲ್ಲಿ ಗುಣಮುಖರಾಗುವವರ ಸಂಖ್ಯೆ ಶೇ.90ರಷ್ಟಿರುವುದು ಜನರಲ್ಲಿ ಭರವಸೆ ಮೂಡಿಸಿದೆ. ಇನ್ನೂ ಸೋಂಕಿಗೆ ತುತ್ತಾಗುವವರ ಸರಾಸರಿ (ಪಾಸಿಟಿವಿಟಿ ರೇಟ್‌) ಶೇ.5ರಷ್ಟಿದ್ದರೆ, ಸಾವಿನ ಸರಾಸರಿ ಶೇ.1ರಷ್ಟಿದೆ. ಏಕಾಏಕಿ ಆರಂಭವಾದ ಎರಡನೇ ಅಲೆ ಬಹಳ ಅಪಾಯಕಾರಿ ಎನ್ನುವುದು ಹಂತಹಂತವಾಗಿ ಮನವರಿಕೆಯಾಗುತ್ತಿದೆ.

ಇದು ಗೊತ್ತಾಗುತ್ತಲೇ ಸಾರ್ವಜನಿಕರು ಕೂಡಾ ಎಚ್ಚೆತ್ತುಕೊಳ್ಳುತ್ತಿದ್ದಾರೆ. ಇದರೊಟ್ಟಿಗೆ ಸರ್ಕಾರ ಹಾಗೂ ಆಸ್ಪತ್ರೆಗಳು, ವೈದ್ಯಾ  ಧಿಕಾರಿಗಳು ಕೂಡಾ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿವೆ.

21 ಆಸ್ಪತ್ರೆ, 1267 ಬೆಡ್‌ ಕೋವಿಡ್‌ಗೆ ಮೀಸಲು: ಕೋವಿಡ್‌ ಆಪತ್ತು ಎದುರಿಸಲು ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಸಾಕಷ್ಟು ಸಿದ್ಧತೆ ಮಾಡಿಕೊಂಡಿದೆ. ಕಳೆದ ವರ್ಷ ಬಂದ ಕೊರೊನಾ ಮೊದಲ ಅಲೆ ಎದುರಿದ ಅನುಭವವನ್ನು ಆಧಾರವಾಗಿಟ್ಟುಕೊಂಡು, ಈ ವರ್ಷ ಮತ್ತಷ್ಟು ಗುಣಮಟ್ಟದ ಸೇವೆ ಹಾಗೂ ರೋಗಿಗಳ ಜೀವ ಉಳಿಸಲು ಸಾಕಷ್ಟು ಪರಿಶ್ರಮ ಹಾಕುತ್ತಿದ್ದಾರೆ. ಇದೆಲ್ಲದರ ಪರಿಣಾಮವಾಗಿ ಸದ್ಯ ಜಿಲ್ಲೆಯಲ್ಲಿ 16 ಸರ್ಕಾರಿ ಆಸ್ಪತ್ರೆಗಳು, 5 ಖಾಸಗಿ ಆಸ್ಪತ್ರೆಗಳಲ್ಲಿ 1267 ಬೆಡ್‌ಗಳನ್ನು ಕೋವಿಡ್‌ ರೋಗಿಗಳಿಗೆ ಮೀಸಲಿಡಲಾಗಿದೆ. ಕೆಪಿಎಂಇ ಅಡಿ ನೊಂದಣಿ ಮಾಡಿಸಿಕೊಂಡು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ಖಾಸಗಿ ಆಸ್ಪತ್ರೆಗಳಿಗೆ ರೆಮ್‌ಡೆಸಿವಿರ್‌ ಇಂಜಕ್ಷನ್‌ ನೀಡಲಾಗುತ್ತಿದೆ.

ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ಪ್ರತಿ ದಿನ 250 ರೆಮ್‌ಡೆಸಿವಿರ್‌ ಬರುತ್ತಿದ್ದು, ಇದರಲ್ಲೇ ಸಾರ್ವಜನಿಕ ಆಸ್ಪತ್ರೆಗಳಿಗೂ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 45 ಖಾಸಗಿ ಆಸ್ಪತ್ರೆಗಳಿದ್ದರೂ, ಬೆಡ್‌ ಗಳ ಸಂಖ್ಯೆ 50ಕ್ಕಿಂತ ಕಡಿಮೆ ಇರುವವರೇ ಹೆಚ್ಚು. 50ಕ್ಕಿಂತ ಹೆಚ್ಚು ಬೆಡ್‌ಗಳ ಆಸ್ಪತ್ರೆಯಾದರೆ ಅದರಲ್ಲಿ ಶೇ.50ರಷ್ಟು ಬೆಡ್‌ ಬಿಡಿಸಿಕೊಳ್ಳಬಹುದು. ಕಡಿಮೆ ಇರುವುದರಿಂದ ಇರುವ ವ್ಯವಸ್ಥೆಯಲ್ಲೇ ನಿರ್ವಹಣೆ ಮಾಡಲಾಗುತ್ತಿದೆ.

ಆಕ್ಸಿಜನ್‌ ಬೆಡ್‌ಗಳದ್ದೇ ಕೊರತೆ: ಸದ್ಯ ಸಮಸ್ಯೆ ಇರುವುದು ಆಕ್ಸಿಜನ್‌ ಹಾಗೂ ಆಕ್ಸಿಜನ್‌ಯುಕ್ತ ಬೆಡ್‌ ಗಳದ್ದು. ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಕೋವಿಡ್‌ ಆಸ್ಪತ್ರೆಯಲ್ಲಿ 175 ಆಕ್ಸಿನೇಟೆಡ್‌ ಬೆಡ್‌ಗಳಿವೆ. ಸದ್ಯ ಎಲ್ಲವೂ ಭರ್ತಿಯಾಗಿವೆ. ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ತಲಾ 50 ಬೆಡ್‌ಗಳಿವೆ. ಇದರೊಟ್ಟಿಗೆ 11 ಸಮುದಾಯ ಆರೋಗ್ಯ ಕೇಂದ್ರಗಳನ್ನು 11 ಸಮುದಾಯ ಆರೋಗ್ಯ ಕೇಂದ್ರಗಳನ್ನೂ ಕೋವಿಡ್‌ ಕೇರ್‌ ಸೆಂಟರ್‌ ಆಗಿ ಪರಿವರ್ತಿಸಿ ಅಲ್ಲಿಗೂ ರೋಗಿಗಳನ್ನು ಕಳಿಸಲಾಗುತ್ತಿದೆ. ಹೋಂ ಐಸೋಲೇಶನ್‌ ಬ್ಯಾನ್‌ಗೆ ಚಿಂತನೆ: ಜಿಲ್ಲೆಯಲ್ಲಿ ಒಟ್ಟು 1644 ಕೊರೊನಾ ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ 737 ಸೋಂಕಿತರು ಹೋಂ ಐಸೋಲೇಶನ್‌ ನಲ್ಲಿದ್ದಾರೆ. ಮನೆಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿರುವವರು ಶಿಸ್ತಿನಿಂದ ಮನೆಯಲ್ಲೇ ಇರದೆ ಹೊರಗೆ ಓಡಾಡುವುದು ಮಾಡುತ್ತಿದ್ದಾರೆ. ಇದರಿಂದ ಸೋಂಕು ಹರಡುತ್ತಿದೆ ಎಂದು ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರು ನಡೆಸಿದ್ದ ಸಭೆಯಲ್ಲಿ ಚರ್ಚೆಯಾಗಿತ್ತು. ಅದೇ ಸಭೆಯಲ್ಲಿ ಸಚಿವ ಶ್ರೀರಾಮುಲು ಅವರು ಮನೆಯಲ್ಲಿ ಚಿಕಿತ್ಸೆ ಪಡೆಯುವುದನ್ನು ರದ್ದು ಮಾಡಿ, ಎಲ್ಲರಿಗೂ ಹಾಸ್ಟೆಲ್‌ಗ‌ಳಲ್ಲಿ ವ್ಯವಸ್ಥೆ ಮಾಡಿ ಚಿಕಿತ್ಸೆ ನೀಡಲು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತ 22 ಹಾಸ್ಟೆಲ್‌ಗ‌ಳಲ್ಲಿ ಕೋವಿಡ್‌ ಸೋಂಕಿತರನ್ನು ಇಟ್ಟು ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಿದೆ.

ಮನೆಯಲ್ಲಿ ಸಂಪೂರ್ಣ ವ್ಯವಸ್ಥೆ ಇಲ್ಲದವರಿಗೆ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ದಾಖಲಾಗುವಂತೆ ಸೂಚನೆ ನೀಡಲಾಗಿದೆ. ಹೋಂ ಐಸೋಲೇಶನ್‌ ಬ್ಯಾನ್‌ ಮಾಡುವ ಸಿದ್ಧತೆಯೂ ನಡೆಯುತ್ತಿದೆ. ಈಗಾಗಲೇ ಆರೋಗ್ಯ ಇಲಾಖೆ ಹೋಂ ಐಸೋಲೇಶನ್‌ನಲ್ಲಿ ಇರುವವರು ಕೋವಿಡ್‌ ಕೇರ್‌ ಸೆಂಟರ್‌ಗೆ ಬರುವಂತೆ ನೀಡಿದ ಸೂಚನೆಗೆ ಕೇವಲ 3 ಜನ ಮಾತ್ರ ಸ್ಪಂದಿಸಿದ್ದಾರೆ. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.