ರಾಜ್ಯದಲ್ಲಿ ಲಾಕ್‌ಡೌನ್‌ ಆರಂಭ, ವಾಣಿಜ್ಯ ವಹಿವಾಟು ಪೂರ್ಣ ಸ್ತಬ್ಧ : ಲಾಠಿ ಬಳಕೆಗೆ ಕಡಿವಾಣ


Team Udayavani, May 11, 2021, 7:30 AM IST

ರಾಜ್ಯದಲ್ಲಿ ಲಾಕ್‌ಡೌನ್‌ ಆರಂಭ, ವಾಣಿಜ್ಯ ವಹಿವಾಟು ಪೂರ್ಣ ಸ್ತಬ್ಧ : ಲಾಠಿ ಬಳಕೆಗೆ ಕಡಿವಾಣ

ಬೆಂಗಳೂರು: ಬೆಳಗ್ಗೆ 6ರಿಂದ 10ರ ವರೆಗೆ ಅಗತ್ಯ ವಸ್ತುಗಳನ್ನು ತರಲು ವಾಹನ ಕೊಂಡೊಯ್ಯಬೇಕೇ ಅಥವಾ ಬೇಡವೇ ಎಂಬ ಗೊಂದಲಗಳ ಮಧ್ಯೆ ರಾಜ್ಯದಲ್ಲಿ 14 ದಿನಗಳ ಕಠಿನ ಕರ್ಫ್ಯೂ ಆರಂಭವಾಗಿದೆ.

ತರಕಾರಿ, ದಿನಸಿ ತರಲು ವಾಹನದಲ್ಲಿ ಬಂದವರಿಗೆ ಪೊಲೀಸರು ಲಾಠಿ ಏಟು ಕೊಟ್ಟದ್ದಷ್ಟೇ ಅಲ್ಲ, ವಾಹನಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ವಾಹನಗಳ ಓಡಾಟಕ್ಕೆ ಗ್ರಾಮೀಣ ಪ್ರದೇಶದಲ್ಲೂ ಅಡ್ಡಿ ಮಾಡಿದ್ದು, ಭಾರೀ ಸಮಸ್ಯೆಯುಂಟಾಗಿದೆ. ಮೂರ್ನಾಲ್ಕು ಕಿ.ಮೀ. ನಡೆದು ದಿನಸಿ ವಸ್ತುಗಳು, ತರಕಾರಿ ಮತ್ತಿತರ ಅಗತ್ಯ ವಸ್ತುಗಳನ್ನು ತರಲು ಸಾಧ್ಯವೇ, ಹೈನುಗಾರರು ಡೇರಿಗಳಿಗೆ ಹಾಲು ಹಾಕಲು ಸಾಧ್ಯವೇ ಎಂದು ಜನರು ಪ್ರಶ್ನಿಸಿದ್ದಾರೆ.
ಅಗತ್ಯ ವಸ್ತು ತರಲು ವಾಹನ ಬಳಸಬಹುದು: ಡಿಜಿಪಿ

ವಾಹನಗಳ ಮುಟ್ಟುಗೋಲು, ಚಾಲಕರಿಗೆ ಲಾಠಿ ಏಟು ಕೊಟ್ಟಿರುವುದು ವಿವಾದಕ್ಕೀಡಾದ ಕಾರಣ ನಿಗದಿತ ಅವಧಿಯಲ್ಲಿ ಅಗತ್ಯ ವಸ್ತುಗಳನ್ನು ತರಲು ವಾಹನ ಬಳಕೆ ಮಾಡಬಹುದು ಎಂದು ಡಿಜಿಪಿ ಪ್ರವೀಣ್‌ ಸೂದ್‌ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ನಗರ ಪ್ರದೇಶಗಳಲ್ಲಿ ಹತ್ತಿರದಲ್ಲೇ ಇರುವ ಅಂಗಡಿಗಳಿಗೆ ತೆರಳಿ ವಸ್ತುಗಳನ್ನು ತರಬಹುದು. ಗ್ರಾಮೀಣ ಪ್ರದೇಶಗಳಲ್ಲಿ ಹತ್ತಿರದ ಸ್ಥಳಗಳಿಗೆ ಹೋಗಿ ತೆಗೆದುಕೊಂಡು ಬರಬಹುದು ಎಂದಿದ್ದಾರೆ. ಆದರೆ ಸುಮ್ಮಸುಮ್ಮನೆ ರಸ್ತೆಗಿಳಿಯಬೇಡಿ ಎಂದು ಸಲಹೆ ನೀಡಿದ್ದಾರೆ.

ಲಾಕ್‌… ಲಾಠಿ…
ವಾಹನ ರಸ್ತೆಗಿಳಿಯಬಾರದು ಎಂದು ಸರಕಾರ ಹೇಳಿದ್ದರಿಂದ ಜನ ಬಹಳಷ್ಟು ಸಮಸ್ಯೆ ಎದುರಿಸಬೇಕಾಯಿತು. ವಾಹನದಲ್ಲಿ ಬಂದವರಿಗೆ ಪೊಲೀಸರು ಲಾಠಿ ಪರಾಕ್ರಮ ತೋರಿಸಿದರು.

ಕಠಿನ ಕರ್ಫ್ಯೂನಿಂದಾಗಿ ರಾಜ್ಯ ಹೆಚ್ಚು ಕಡಿಮೆ ಸಂಪೂರ್ಣ ಸ್ತಬ್ಧವಾಗಿತ್ತು. ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಕೊಂಚ ಓಡಾಟ ಕಂಡುಬಂದಿತು. ತುರ್ತು ಹೊರತುಪಡಿಸಿ ವಾಹನ ಸಂಚಾರ ಬಂದ್‌ ಆಗಿತ್ತು. ಅನುಮತಿ ಹೊಂದಿರುವ ಕೈಗಾರಿಕೆ ಬಿಟ್ಟರೆ ಉಳಿದೆಲ್ಲವೂ ಬಾಗಿಲು ಮುಚ್ಚಿತ್ತು.

ಅಗತ್ಯ ವಸ್ತುಗಳ ಖರೀದಿಗೆ ನೀಡಿದ್ದ ಸಮಯಾವಕಾಶ ಮುಗಿಯುತ್ತಲೇ ರಸ್ತೆಗಿಳಿದ ಪೊಲೀಸರು ಅಂಗಡಿಗಳನ್ನು ಮುಚ್ಚಿಸಿದರು. ವಾಹನಗಳನ್ನು ಅಡ್ಡಗಟ್ಟಿ ಅನಗತ್ಯ ಸಂಚರಿಸು ತ್ತಿದ್ದವರ ಮೇಲೆ ಲಾಠಿ ಪ್ರಹಾರ ಮಾಡಿದರು. ನೂರಾರು ಕಾರು, ಬೈಕ್‌ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದರು.

ಲಾಠಿ ಏಟಿಗೆ ಆಕ್ರೋಶ
ಜನರು ಮತ್ತು ವ್ಯಾಪಾರಿಗಳ ಮೇಲೆ ನಡೆಸಿದ ಲಾಠಿ ಚಾರ್ಜ್‌ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳ ಮಹಾಪೂರವೇ ಹರಿದು ಬಂದಿತು. ಸಾರ್ವಜನಿಕರ ಮೇಲೆ ಲಾಠಿ ಚಾರ್ಜ್‌ ಮಾಡುವ ಅಧಿಕಾರ ಪೊಲೀಸರಿಗೆ ಇದೆಯೇ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ಗೃಹ ಸಚಿವರನ್ನು ಪ್ರಶ್ನಿಸಲಾಯಿತು. ಈ ಹಿನ್ನೆಲೆಯಲ್ಲಿ ಮಧ್ಯಾಹ್ನದ ಬಳಿಕ ಲಾಠಿ ಚಾರ್ಜ್‌ ಮಾಡಬೇಡಿ, ಪ್ರಕರಣ ದಾಖಲಿಸಿ, ವಾಹನ ವಶಕ್ಕೆ ಪಡೆಯಿರಿ ಎಂಬ ಸೂಚನೆಯನ್ನು ಜಿಲ್ಲಾ ಎಸ್‌ಪಿಗಳು ಮತ್ತು ಮಹಾ ನಗರದ ಡಿಸಿಪಿಗಳು ನೀಡಿದರು. ಆದರೆ ಅಷ್ಟು ಹೊತ್ತಿಗೆ ಹಲವೆಡೆ ಲಾಠಿ ರುಚಿ ಉಂಡ ಸಾರ್ವಜನಿಕರು ಹೈರಾಣಾಗಿದ್ದರು.

ಜಿಲ್ಲಾಡಳಿತಕ್ಕೆ ಅಧಿಕಾರ ಕೊಡಿ
ಒಂದು ಜಿಲ್ಲೆಯಲ್ಲಿ ಹೆಚ್ಚು, ಮತ್ತೂಂದು ಜಿಲ್ಲೆಯಲ್ಲಿ ಕಡಿಮೆ ಕೊರೊನಾ ಪ್ರಕರಣಗಳು ಕಂಡು ಬರುತ್ತಿವೆ. ಹೀಗಾಗಿ ಇಡೀ ರಾಜ್ಯಕ್ಕೆ ಒಂದೇ ರೀತಿಯ ನಿರ್ಬಂಧ ಬೇಡ ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ. ನಿರ್ಬಂಧ ನಿರ್ಧಾರಗಳನ್ನು ಆಯಾ ಜಿಲ್ಲಾಡಳಿತಗಳೇ ತೆಗೆದುಕೊಳ್ಳಲಿ ಎಂಬ ಸಲಹೆಗಳೂ ಇವೆ. ಬೆಂಗಳೂರಿಗೆ ಇರುವಂಥ ನಿಯಮವು ಅತ್ಯಂತ ಕಡಿಮೆ ಪ್ರಕರಣ ಇರುವ ಪ್ರದೇಶಕ್ಕೆ ಏಕೆ ಎಂಬುದು ಜನರ ಪ್ರಶ್ನೆ. ಹೀಗಾಗಿ, ಎಲ್ಲೆಡೆ ಒಂದೇ ನಿಯಮದ ಬದಲು ಆಯಾ ಪ್ರದೇಶಕ್ಕೆ ಅನುಗುಣವಾಗಿ ನಿರ್ಬಂಧ ವಿಧಿಸುವ ಅಧಿಕಾರವನ್ನು ಜಿಲ್ಲಾಡಳಿತಗಳಿಗೆ ನೀಡಲಿ ಎಂಬುದು ಉದಯವಾಣಿಯ ಆಶಯವೂ ಆಗಿದೆ.

ಟಾಪ್ ನ್ಯೂಸ್

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.