ಮಾಸ್ಕ್ ಧಾರಣೆ; ಜನಜಾಗೃತಿ ಅಭಿಯಾನ


Team Udayavani, May 12, 2021, 11:21 AM IST

hhhhhhhhhhhhhhhhhhhh

ಮುದ್ದೇಬಿಹಾಳ: ಪಟ್ಟಣದ ಪೀಲೇಕಮ್ಮ ನಗರ ಬಡಾವಣೆಯಲ್ಲಿ ಅಲ್ಲಿನ ಯುವ ಬಳಗದ ವತಿಯಿಂದ ಕಿರುತೆರೆ ಹಾಸ್ಯ ಕಲಾವಿದ ಗೋಪಾಲ ಹೂಗಾರ ನೇತೃತ್ವದ ಕಲಾ ಸಿಂಚನ ಕಲಾವಿದರ ಬಳಗದವರ ಯಮ-ಚಿತ್ರಗುಪ್ತ-ಕಿಂಕರರಿಂದ ಮಾಸ್ಕ್ ಧರಿಸುವ ಕುರಿತು ಜನಜಾಗೃತಿ ಅಭಿಯಾನ ನಡೆಯಿತು.

ಈ ವೇಳೆ ಕಲಾ ತಂಡದ ಸದಸ್ಯರು ಬಡಾವಣೆಯ ಬೀದಿ ಬೀದಿಗಳಲ್ಲಿ ಸಂಚರಿಸಿ ಕೊರೊನಾ ಎರಡನೇ ಅಲೆಯಿಂದ ನಮ್ಮ ಪ್ರಾಣ ಕಾಪಾಡಿಕೊಳ್ಳಲು ಮಾಸ್ಕ್ ಧರಿಸುವ, ಸಾಮಾಜಿಕ ಅಂತರ ಪಾಲಿಸುವ ಹಾಗೂ ಆಗಾಗ ಹ್ಯಾಂಡ್‌ ಸ್ಯಾನಿಟೈಸ್‌ ಮಾಡಿಕೊಳ್ಳುವ ಅಗತ್ಯದ ಕುರಿತು ಪ್ರದರ್ಶನ ನೀಡಿ ಗಮನ ಸೆಳೆದರು.

ಯಮನ ಪಾತ್ರಧಾರಿ ಗೋಪಾಲ ಹೂಗಾರ ಅವರು ಅಬ್ಬರದ ಡೈಲಾಗ್‌ ಹೊಡೆಯುತ್ತ, ಯಮನಂತೆ ಹೂಂಕರಿಸುತ್ತ ಸಂಚರಿಸಿ ಮಾಸ್ಕ್ ಧರಿಸದಿದ್ದರೆ ಮುಂದಾಗುವ ಭಯಂಕರ ಪರಿಣಾಮವನ್ನು ಮನ ಮುಟ್ಟುವಂತೆ ವಿವರಿಸಿ ಜಾಗೃತಿ ಮೂಡಿಸಿದರು. ಸಮಾಜ ಸೇವಕ ಸೀತಾರಾಂ ರಾಠೊಡ ಅವರ ನೇತೃತ್ವದಲ್ಲಿ ನಡೆದ ಅಭಿಯಾನದುದ್ದಕ್ಕೂ ಪಿಲೇಕಮ್ಮ ನಗರ ಬಡಾವಣೆಯ ಜನತೆ ಜಾಗೃತರಾಗಿದ್ದು ಮಾಸ್ಕ್ ಧರಿಸಿಯೇ ಹೊರಗೆ ಬರುವಂತೆ ಮನವೊಲಿಸಿ ಜನತೆಗೆ ನೂರಾರು ಮಾಸ್ಕ್ಗಳನ್ನು ಉಚಿತವಾಗಿ ವಿತರಿಸಿದರು. ಅಭಿಯಾನ ಸಂಘಟಕರಾದ ಜಿಲಾನಿ ಮಕಾನದಾರ, ಪವನ ಝಿಂಗಾಡೆ, ಶಫಿಕ್‌ ನಿಡಗುಂದಿ, ರಫಿಕ್‌ ನಿಡಗುಂದಿ, ಕಾಶೀನಾಥ್‌ ಚಬ್ಬಿ, ಯೂನುಸ್‌, ಜಮೀರ ನದಾಫ್‌, ರಾಜು ಭೋವಿ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಚಿತ್ರಗುಪ್ತನಾಗಿ ದಾದಾಪೀರ ಹಡಲಗೇರಿ, ಕೊರೊನಾ ವೈರಸ್‌ ಪಾತ್ರಧಾರಿಯಾಗಿ ಸಂದೀಪ ಹಿರೇಮಠ, ಯಮನ ಕಿಂಕರರಾಗಿ ವೀರೇಶ ಲಮಾಣಿ (ಕೌದಿ ವೀರೇಶ), ಪ್ರಶಾಂತ ಕುಂದರಗಿ, ಮಾಸ್ಕ್ ವಿತರಿಸಿ ಜನರ ಪ್ರಾಣ ಕಾಪಾಡುವ ಶರಣರ ಪಾತ್ರಧಾರಿಯಾಗಿ ಕಿರುತೆರೆ ಹಾಸ್ಯ ಕಲಾವಿದ ಮುನೀರ ಅವಟಿಗೇರ, ಸೂಕ್ತ ಚಿಕಿತ್ಸೆ ನೀಡಿ ರೋಗಿಗಳನ್ನು ಪ್ರಾಣಾಪಾಯದಿಂದ ಪಾರು ಮಾಡುವ ವೈದ್ಯರ ಪಾತ್ರಧಾರಿಯಾಗಿ ಗಣೇಶ ಝಿಂಗಾಡೆ ಜನಮೆಚ್ಚುವ ಪ್ರದರ್ಶನ ನೀಡಿದರು.

ರಾಜ್ಯದಲ್ಲೇ ವಿನೂತನ: ಈ ಹಿಂದೆ ಮುದ್ದೇಬಿಹಾಳ ಠಾಣೆಯಲ್ಲೇ ಪಿಎಸೈ ಆಗಿ ಸದ್ಯ ಬೇರೆಡೆ ವರ್ಗಾವಣೆಗೊಂಡಿರುವ ಮಲ್ಲಪ್ಪ ಮಡ್ಡಿ ಮಾತನಾಡಿ, ಇಂತಹ ಪ್ರಾಯೋಗಿಕ, ರೂಪಣಾತ್ಮಕ ಜಾಗೃತಿ ಅಭಿಯಾನಗಳು ಜನರ ಮನಸ್ಸಿನ ಮೇಲೆ ತಕ್ಷಣ ಪರಿಣಾಮ ಬೀರಿ ಹೆಚ್ಚು ಉಪಯುಕ್ತ ಎನ್ನಿಸಿಕೊಳ್ಳುತ್ತವೆ. ಇಡಿ ರಾಜ್ಯದಲ್ಲಿ ಇಂಥದ್ದೊಂದು ವಿನೂತನ ಜಾಗೃತಿ ಕಾರ್ಯಕ್ರಮ ಮುದ್ದೇಬಿಹಾಳದಲ್ಲಿ ನಡೆಯುತ್ತಿರುವುದು ಮೆಚ್ಚುವಂಥದ್ದು. ಕಲಾವಿದರ ನೈಜ ಅಭಿನಯ ಮನಮುಟ್ಟುವಂಥದ್ದು. ಜನರು ಇದರಿಂದ ಜಾಗೃತರಾಗಿ ನಿಯಮ ಪಾಲಿಸಿ ಕೊರೊನಾದಿಂದ ತಮ್ಮನ್ನು ಕಾಪಾಡಿಕೊಳ್ಳಬೇಕು ಎಂದರು.

ಟಾಪ್ ನ್ಯೂಸ್

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

5-

Krishna: ಯಾರು ಈ  ಕೃಷ್ಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.