ನಿವೃತ್ತ ಪೊಲೀಸ್ ಅಧಿಕಾರಿ ರವೀಂದ್ರನಾಥ ಕೋವಿಡ್ ಸೋಂಕಿಗೆ ಬಲಿ
Team Udayavani, May 12, 2021, 2:21 PM IST
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಇಂದು ದೇಶದಲ್ಲಿ ಕೋವಿಡ್ ಸೋಂಕಿಗೆ ನಾಲ್ಕು ಸಾವಿರಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ.
ಇನ್ನು ಕರ್ನಾಟಕ ಪೋಲಿಸ್ ಇಲಾಖೆಯಲ್ಲಿ ಉನ್ನತ ಮಟ್ಟದಲ್ಲಿ ಸೇವೆ ಸಲ್ಲಿಸಿ, ನಿವೃತ್ತ ಜೀವನದಲ್ಲೂ ಸಾಮಾಜಿಕ ಸೇವೆಸಲ್ಲಿಸುತ್ತಿದ್ದಂತಹ ರವೀಂದ್ರನಾಥ ಠಾಗೋರ್ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಇವರ ಅಗಲಿಕೆಯು ಕುಟುಂಬದವರಿಗೆ ದುಃಖ ತರಿಸಿದೆ.