ಎರಡನೇ ಡೋಸ್‌ ಯಾವಾಗ? ಆಗದಿದ್ದರೆ ಹಾಗೇ ಹೇಳಿ : ಸರಕಾರದ ವಿರುದ್ಧ ಹೈಕೋರ್ಟ್‌ ಗರಂ


Team Udayavani, May 14, 2021, 8:00 AM IST

ಎರಡನೇ ಡೋಸ್‌ ಯಾವಾಗ? ಆಗದಿದ್ದರೆ ಹಾಗೇ ಹೇಳಿ : ಸರಕಾರದ ವಿರುದ್ಧ ಹೈಕೋರ್ಟ್‌ ಗರಂ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆಯ ಅಭಾವ, 2ನೇ ಡೋಸ್‌ನ ಕೊರತೆ, ವ್ಯಾಕ್ಸಿನೇಶನ್‌ ಅನಿಶ್ಚಿತತೆ ವಿಚಾರ ವಾಗಿ ಕೇಂದ್ರ ಮತ್ತು ರಾಜ್ಯ ಸರಕಾರ ಗಳನ್ನು ಹೈಕೋರ್ಟ್‌ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ಕೋವಿಡ್‌ ನಿರ್ವಹಣೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಸಂಬಂಧ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕಾ ಮತ್ತು ನ್ಯಾ| ಆರವಿಂದ ಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಜನರಿಗೆ ಸತ್ಯವನ್ನೇ ಹೇಳಿ
ನಿಮ್ಮಿಂದ ಆಗದು ಎಂದಾದರೆ ಅದನ್ನೇ ಹೇಳಿ, ಆದೇಶ ದಲ್ಲಿ ಹಾಗೇ ಉಲ್ಲೇಖೀ ಸಲಾಗುತ್ತದೆ. ಸಚಿವರು, ಅಧಿಕಾರಿಗಳು ಜನರಿಗೆ ಸತ್ಯವನ್ನು ಹೇಳಬೇಕು. ಮನ ಬಂದಂತೆ ಹೇಳಿಕೆ ನೀಡುವು ದನ್ನು ಬಿಡಬೇಕು ಎಂದು ಹೈಕೋರ್ಟ್‌ ತಾಕೀತು ಮಾಡಿದೆ.
ರಾಜ್ಯ ಸರಕಾರದ ಅಂಕಿ-ಅಂಶಗಳನ್ನು ಪರಿ ಶೀಲಿಸಿದ ನ್ಯಾಯಪೀಠ, ಕೊವಿಶೀಲ್ಡ್‌, ಕೊವ್ಯಾಕ್ಸಿನ್‌ ಮೊದಲ ಡೋಸ್‌ ಪಡೆದು, 2ನೇ ಡೋಸ್‌ ಪಡೆಯುವ ಅವಧಿ ಮುಗಿ ಯುವ ಹಂತದಲ್ಲಿರುವ ಮತ್ತು ಮುಗಿ ದಿರುವ 19.97 ಲಕ್ಷ ಮಂದಿಗೆ ತತ್‌ಕ್ಷಣ 2ನೇ ಡೋಸ್‌ ನೀಡಬೇಕಾಗಿದೆ. ಆದರೆ ಸರಕಾರದ ಬಳಿ ಸದ್ಯ ಇರುವುದು 11.24 ಲಕ್ಷ ಲಸಿಕೆಗಳು ಮಾತ್ರ. ಕೇಂದ್ರ ಸರಕಾರ ಪೂರೈಸುವ ಲಸಿಕೆ ಗಳಲ್ಲಿ ಶೇ.70ರಷ್ಟನ್ನು 2ನೇ ಡೋಸ್‌ಗೆ ಮೀಸಲಿಡಬೇಕು ಎಂಬ ಮಾರ್ಗಸೂಚಿ ಪಾಲನೆ ಯಾಗಿಲ್ಲ ಏಕೆ? ಇದುವೆಯಾ ವ್ಯಾಕ್ಸಿನೇಶನ್‌ ನಡೆಸುವ ರೀತಿ ಎಂದು ತರಾಟೆಗೆ ತೆಗೆದುಕೊಂಡಿತು.

ಕೇಂದ್ರಕ್ಕೂ ಚಾಟಿ
ಕೇಂದ್ರ ಸರಕಾರಕ್ಕೂ ಚಾಟಿ ಬೀಸಿದ ಹೈಕೋರ್ಟ್‌, 19 ಲಕ್ಷ ಜನರಿಗೆ ತತ್‌ಕ್ಷಣ ಲಸಿಕೆಯ ಕೊರತೆಯಿದ್ದು, ಅದನ್ನು ಹೇಗೆ ನೀಗಿಸುತ್ತೀರಿ ಎಂದು ಕೇಂದ್ರದ ಪರ ವಕೀಲರನ್ನು ಪ್ರಶ್ನಿಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದಿನ ಮೇ 19ಕ್ಕೆ ಮುಂದೂಡಿತು.

3 ಕೋಟಿ ಲಸಿಕೆಗೆ ಗ್ಲೋಬಲ್‌ ಟೆಂಡರ್‌
ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ಆರ್‌. ಸುಬ್ರಹ್ಮಣ್ಯ ಪ್ರತಿಕ್ರಿಯಿಸಿ, ಸದ್ಯಕ್ಕೆ ಮೊದಲ ಡೋಸ್‌ ನೀಡಿಕೆ ಸ್ಥಗಿತ ಗೊಳಿಸ ಲಾಗಿದ್ದು, 2ನೇ ಡೋಸ್‌ಗೆ ಆದ್ಯತೆ ನೀಡ ಲಾಗುವುದು ಎಂದರು. ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ್‌ ಕೆ. ನಾವದಗಿ, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ವ್ಯಾಕ್ಸಿನೇಶನ್‌ ವಿಚಾರದಲ್ಲಿ ಕರ್ನಾಟಕ ಉತ್ತಮ ಸ್ಥಿತಿಯಲ್ಲಿದೆ. 3 ಕೋಟಿ ಲಸಿಕೆ ಖರೀದಿಗೆ ರಾಜ್ಯದಿಂದ ಗ್ಲೋಬಲ್‌ ಟೆಂಡರ್‌ ಕರೆಯಲಾಗಿದೆ ಎಂದರು.

ಟಾಪ್ ನ್ಯೂಸ್

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.