‘ಕಿಸಾನ್‌ ಸಮ್ಮಾನ್‌’ ನಿಧಿ ಯೋಜನೆಯಡಿ 9.5 ಕೋಟಿ ರೈತರಿಗೆ ಮೊದಲ ಕಂತಿನ ಹಣ ಬಿಡುಗಡೆ


Team Udayavani, May 14, 2021, 8:57 PM IST

‘ಕಿಸಾನ್‌ ಸಮ್ಮಾನ್‌’ ನಿಧಿ ಯೋಜನೆಯಡಿ 9.5 ಕೋಟಿ ರೈತರಿಗೆ ಮೊದಲ ಕಂತಿನ ಹಣ ಬಿಡುಗಡೆ

ಹೊಸದಿಲ್ಲಿ/ಬೆಂಗಳೂರು: ನಿರೀಕ್ಷಿಸಿದಂತೆಯೇ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ಪ್ರಸಕ್ತ ವರ್ಷದ ಮೊದಲ ಕಂತಿನ ಹಣವನ್ನು ಶುಕ್ರವಾರ ಪ್ರಧಾನಿ ಮೋದಿ ಬಿಡುಗಡೆ ಮಾಡಿದ್ದಾರೆ. ದೇಶದ ಒಟ್ಟು 9.5 ಕೋಟಿ ರೈತರಿಗೆ 20,667 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕದ 55.36 ಲಕ್ಷ ರೈತ ಕುಟುಂಬಗಳಿಗೆ ಒಟ್ಟು 985.61 ಕೋಟಿ ರೂ. ಲಭಿಸಲಿದೆ.

ಮೊದಲ ಕಂತಿನ ಹಣ ಬಿಡುಗಡೆ ಮಾಡಿ ಮಾತನಾಡಿದ ಪ್ರಧಾನಿ, ಇದುವರೆಗೆ ಪಿಎಂ-ಕಿಸಾನ್‌ ಯೋಜನೆ ಅಡಿಯಲ್ಲಿ 1,35,000 ಕೋಟಿ ರೂ.ಗಳನ್ನು ರೈತರ ಬ್ಯಾಂಕ್‌ ಖಾತೆಗಳಿಗೆ ವರ್ಗಾಯಿಸಲಾಗಿದೆ. ಶುಕ್ರವಾರ ಬಿಡುಗಡೆಗೊಳಿಸಿರುವುದು ಯೋಜನೆಯ 8ನೇ ಕಂತು ಎಂದರು.

ಕಳೆದ ವರ್ಷ ಕೊರೊನಾ ಕಾಲದಲ್ಲಿ 60,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿತ್ತು. ಈ ಯೋಜನೆಯಂತೆ ವರ್ಷಕ್ಕೆ ಪ್ರತೀ ರೈತರಿಗೆ 6,000 ರೂ. ನೀಡಲಾಗುತ್ತಿದೆ. ಇದನ್ನು ಮೂರು ಭಾಗಗಳಾಗಿ ವಿಂಗಡಿಸಿ ತಲಾ 2,000 ರೂ. ಹಾಕಲಾಗುತ್ತಿದೆ. ಇದೇ ಮೊದಲ ಬಾರಿಗೆ ಪಶ್ಚಿಮ ಬಂಗಾಲದ ರೈತರೂ ಯೋಜನೆಯಡಿ ಹಣ ಪಡೆದಿದ್ದಾರೆ ಎಂದರು.

ಇದನ್ನೂ ಓದಿ :ಪುಣೆಯಲ್ಲಿ ಲಸಿಕೆ ಉತ್ಪಾದಿಸಲಿದೆ  ಭಾರತ್ ಬಯೋಟೆಕ್ ಇಂಟರ್ ನ್ಯಾಷನಲ್ ಲಿಮಿಟೆಡ್..!

ಅಜ್ಞಾತ ಶತ್ರುವಿನ ಜತೆ ಹೋರಾಟ
ದೇಶ ಇಂದು ಎದುರಿಸುತ್ತಿರುವ ಕೊರೊನಾ ಕಷ್ಟಕಾಲವನ್ನು ತನ್ನ ಮಾತಿನ ನಡುವೆ ಮೋದಿ ನೆನೆದರು. ನಾವಿಂದು ಕಣ್ಣಿಗೆ ಕಾಣದ ಶತ್ರುವಿನ ವಿರುದ್ಧ ಹೋರಾಟ ನಡೆಸುತ್ತಿದ್ದೇವೆ. ನಾವು ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ. ಕಳೆದ 100 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಈ ಸಾಂಕ್ರಾಮಿಕ ರೋಗ ಇಡೀ ಜಗತ್ತನ್ನು ಹೆಜ್ಜೆ ಹೆಜ್ಜೆಗೂ ಪರೀಕ್ಷಿಸುತ್ತಿದೆ. ಕೊರೊನಾದಿಂದ ಸಾವನ್ನಪ್ಪಿದವರ ಕುಟುಂಬದವರ ನೋವಿನಲ್ಲಿ ನಾನೂ ಭಾಗಿಯಾಗಿದ್ದೇನೆ. ಪ್ರತಿಯೊಬ್ಬರು ಲಸಿಕೆ ಹಾಕಿಸಿಕೊಳ್ಳಿ. ಈ ಹೋರಾಟದಲ್ಲಿ ಅದೊಂದೇ ನಮ್ಮ ಮುಂದಿರುವ ಅಸ್ತ್ರ ಎಂದರು.

ರಾಜ್ಯಕ್ಕೆ 985 ಕೋ.ರೂ. ಬಿಡುಗಡೆ
ಪಿಎಂ-ಕಿಸಾನ್‌ ಯೋಜನೆಯಡಿ ರಾಜ್ಯದ 55.36 ಲಕ್ಷ ರೈತರು ಮೊದಲ ಕಂತಾಗಿ 2 ಸಾವಿರ ರೂ.ಗಳನ್ನು ಪಡೆದರು. ಇದಕ್ಕಾಗಿ ಕೇಂದ್ರ ಸರಕಾರ 985 ಕೋಟಿ ರೂ. ನೀಡಿದೆ. ವೀಡಿಯೊ ಕಾನ್ಫರೆನ್ಸ್‌ನಲ್ಲಿ ಸಿಎಂ ಯಡಿಯೂರಪ್ಪ ಅವರು ಭಾಗಿಯಾಗಿದ್ದರು. 2019ರ ಮಾರ್ಚ್‌ನಿಂದ 2021ರ ಮಾರ್ಚ್‌ವರೆಗೆ ರಾಜ್ಯದ 55.06 ಲಕ್ಷ ರೈತ ಕುಟುಂಬಗಳಿಗೆ ಕೇಂದ್ರ ಸರಕಾರವು ಒಟ್ಟು 6936.98 ಕೋಟಿ ರೂ. ಸಹಾಯಧನ ವರ್ಗಾಯಿಸಿದೆ.

ಟಾಪ್ ನ್ಯೂಸ್

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Untitled-1

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ

Untitled-1

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

Jaishankar

Nehru ಕಾಲದಲ್ಲಿ ಕಬಳಿಸಿದ್ದ ಹಳ್ಳಿಯಲ್ಲಿ ಚೀನ ಗ್ರಾಮ: ಸಚಿವ ಜೈಶಂಕರ್‌ ತಿರುಗೇಟು

covid

BHU; ಕೊವ್ಯಾಕ್ಸಿನ್‌ನಿಂದ ಶೇ. 33 ಜನರಿಗೆ ಅಡ್ಡಪರಿಣಾಮ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Untitled-1

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.