ವಲಸಿಗರ ಮೇಲೆ ಆಡಳಿತದ ಕಣ್ಣು

ಜಿಲ್ಲೆಗೆ ಮರಳಿದ 5249 ವಲಸಿಗರು­! 431 ಜನರಿಗೆ ಕೊರೊನಾ ಪಾಸಿಟಿವ್‌ !­ಹಳ್ಳಿಗೆ ಕಾಲಿಟ್ಟ ಕೊರೊನಾ

Team Udayavani, May 15, 2021, 3:14 PM IST

14 bgk-2a

ಶ್ರೀಶೈಲ ಕೆ. ಬಿರಾದಾರ

ಬಾಗಲಕೋಟೆ: ಕೊರೊನಾ 2ನೇ ಅಲೆ ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ. ಹೀಗಾಗಿ ವಲಸೆ ಹೋದವರು ಹಾಗೂ ಬೇರೆ ಬೇರೆ ನಗರ-ಪಟ್ಟಣಗಳಿಂದ ಹಳ್ಳಿಗೆ ಮರಳಿ ಬಂದವರ ಮೇಲೆ ಆಡಳಿತದ ಕಣ್ಣಿದ್ದು, ಅವರ ಮೇಲೆ ಹೆಚ್ಚು ನಿಗಾ ಇಡುವ ಜತೆಗೆ ಕೊರೊನಾ ತಪಾಸಣೆಗೆ ಸೂಚನೆ ನೀಡಲಾಗಿದೆ.

ಹೌದು, ಬಾಗಲಕೋಟೆ ತಾಲೂಕಿನಲ್ಲಿ 20ದಿನಗಳಿಂದ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲಿ ನವನಗರ, ವಿದ್ಯಾಗಿರಿ ಹಾಗೂ ಹಳೆಯ ನಗರದಲ್ಲಿ ಹೆಚ್ಚು ಕಂಡುಬಂದರೆ, ಗ್ರಾಮೀಣ ಭಾಗದ ಕೆಲ ಗ್ರಾಮಗಳಲ್ಲೂ ಸೋಂಕಿತರು ಹೆಚ್ಚುತ್ತಿದ್ದಾರೆ. ಹೀಗಾಗಿ ತಾಲೂಕು ಆಡಳಿತ, ಎಲ್ಲಾ ಗ್ರಾಪಂ ವ್ಯಾಪ್ತಿಯಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸುವ ಜತೆಗೆ ವಲಸೆ ಬಂದವರು, ಕಡ್ಡಾಯವಾಗಿ ಕ್ವಾರಂಟೈನ್‌ ಆಗಿರಲು ಸೂಚನೆ ನೀಡಿದೆ.

ಜಿಲ್ಲೆಗೆ ಮರಳಿದ ವಲಸಿಗರು: ಜಿಲ್ಲೆಯಿಂದ ದೂರದ ಮಂಗಳೂರು, ಬೆಂಗಳೂರು, ಗೋವಾ, ಮಹಾರಾಷ್ಟ್ರ ಸೇರಿದಂತೆ ಹಲವೆಡೆ ದುಡಿಯಲು ವಲಸೆ ಹೋಗಿದ್ದವರು ಕೊರೊನಾ ಕರ್ಫ್ಯೂ ಹಿನ್ನೆಲೆಯಲ್ಲಿ ಮರಳಿ ಊರಿಗೆ ಬಂದಿದ್ದಾರೆ. ಸಧ್ಯದ ಲೆಕ್ಕದ ಪ್ರಕಾರ 5488 ಜನ ವಲಸಿಗರು ತಮ್ಮ ತಮ್ಮ ಊರುಗಳಿಗೆ ಬಂದಿದ್ದು, ಅದರಲ್ಲಿ 5249 ಜನರಿಗೆ ಕೊರೊನಾ ತಪಾಸಣೆ ಮಾಡಲಾಗಿದೆ. ಅದರಲ್ಲಿ 431 ಜನರಿಗೆ ಪಾಸಿಟಿವ್‌ ಬಂದಿದ್ದು, ಅತಿಹೆಚ್ಚು ಸೋಂಕಿನ ಲಕ್ಷಣ ಹಾಗೂ ಬೇರೆ ಬೇರೆ ಇತರೆ ಕಾಯಿಲೆ ಹೊಂದಿದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ಹೋಂ ಐಸೋಲೇಶನ್‌ನಲ್ಲಿಡಲಾಗಿದೆ.

ಮಾದರಿಯಾದ ಸಿಸಿಸಿ ಕೇಂದ್ರ: ಜಿಲ್ಲೆಯ ಹುನಗುಂದದ ಸರಕಾರಿ ಬಾಲಕರ ವಸತಿ ನಿಲಯದಲ್ಲಿ ಸ್ಥಾಪಿಸಲಾದ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಕೋವಿಡ್‌ ರೋಗಿಗಳಿಗೆ ಚಿಕಿತ್ಸೆಯ ಜತೆಗೆ ಯೋಗ ಮತ್ತು ಪ್ರಾಣಾಯಾಮ ಹೇಳಿ ಕೊಟ್ಟು ಬೇಗ ಗುಣಮುಖರನ್ನಾಗಿ ಮಾಡುತ್ತಿರುವ ಕಮ್ಯುನಿಟಿ ಹೆಲ್ತ್‌ ಅಧಿಕಾರಿಗಳ ತಂಡ ಗಮನ ಸೆಳೆದಿದೆ. ಕೋವಿಡ್‌ ಎರಡನೇ ಅಲೆಯಿಂದ ಹೆಚ್ಚಾಗುತ್ತಿರುವ ಪ್ರಕರಣ ಕಂಡು ಜನರಲ್ಲಿ ಭಯದ ವಾತಾವರಣ ಮೂಡಿಸಿದೆ. ಇನ್ನು ಭಯದಿಂದಲೇ ಕೆಲವೊಂದಿಷ್ಟು ಜನ ಮೃತಪಡುತ್ತಿದ್ದಾರೆ. ಪ್ರತಿದಿನ ಬೆಡ್‌ ಸಿಗುತ್ತಿಲ್ಲ. ಆಕ್ಸಿಜನ್‌ ಕೊರತೆಯಿಂದ ರೋಗಿಗಳಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಕೇಳುತ್ತಿದ್ದೇವೆ. ಆದರೆ, ಹುನಗುಂದ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಕೋವಿಡ್‌ ರೋಗಿಗಳಿಗೆ ಚಿಕಿತ್ಸೆಯ ಜೊತೆಗೆ ಯೋಗ ಮತ್ತು ಪ್ರಾಣಾಯಾಮ ಹೇಳಿಕೊಡುವ ಮೂಲಕ ದೇಹದ ಆಕ್ಸಿಜನ್‌ ಪ್ರಮಾಣವನ್ನು ಹೆಚ್ಚಿಸುವ ಪ್ರಾಣಾಯಾಮ ತರಗತಿ ನಡೆಸಲಾಗುತ್ತಿದೆ.

ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಪ್ರತಿದಿನ ದೇಹದಲ್ಲಿರುವ ಆಕ್ಸಿಜನ್‌ ಪ್ರಮಾಣ ಹೆಚ್ಚಿಸುವ ಆಸನ ಹೇಳಲಾಗುತ್ತಿದೆ. ಇಂತಹ ಕಾರ್ಯದಲ್ಲಿ ತೊಡಗಿದ ಕಮ್ಯುನಿಟಿ ಹೆಲ್ತ್‌ ಅಧಿಕಾರಿ ಸಾಬು ಮನ್ನಿಕೇರಿ, ನರ್ಸ್‌ ಪ್ರೀತಿ ಅವರ ಬಗ್ಗೆ ಹುನಗುಂದ ಪ್ರಭಾರಿ ತಹಶೀಲ್ದಾರ್‌ ಶ್ವೇತಾ ಬಿಡಿಕರ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇದು ಉಳಿದ ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಮಾದರಿಯಾಗಿದೆ ¡

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.