ಚಿನ್ನಾಭರಣ-ಜವಳಿ ಉದ್ಯಮಕ್ಕೆ ಕೋವಿಡ್ ಕೊಕ್ಕೆ

ಅಟೋಮೊಬೈಲ್‌-ರಿಯಲ್‌ ಎಸ್ಟೇಟ್‌ ಮೇಲೂ ಕರಿನೆರಳು! ­ಹಬ್ಬ-ಹರಿದಿನ-ಶುಭ ಸಮಾರಂಭಗಳು ಸಪ್ಪೆ ಸಪ್ಪೆ

Team Udayavani, May 15, 2021, 8:46 PM IST

14hvr01

ವೀರೇಶ ಮಡ್ಲೂ

ಹಾವೇರಿ: ಕೊರೊನಾ ಎರಡನೇ ಅಲೆಯ ನಿಯಂತ್ರಣಕ್ಕೆ ಅನಿವಾರ್ಯವಾಗಿ ಸರ್ಕಾರ ಕೊರೊನಾ ಕರ್ಫ್ಯೂ ವಿಧಿ ಸಿರುವ ಪರಿಣಾಮ ಜವಳಿ, ಚಿನ್ನಾಭರಣ, ಅಟೋಮೊಬೈಲ್‌, ರಿಯಲ್‌ ಎಸ್ಟೇಟ್‌ ಉದ್ಯಮದ ಮೇಲೆ ಕರಿನೆರಳು ಬಿದ್ದಿದೆ. ಇದರಿಂದ ವ್ಯಾಪಾರ ಗಣನೀಯವಾಗಿ ಕುಸಿದಿದ್ದು, ಕೋಟ್ಯಂತರ ರೂ. ವಹಿವಾಟು ನೆಲಕಚ್ಚುವಂತಾಗಿದೆ.

ಸದ್ಯ ಬೇಸಿಗೆ ದಿನಗಳ ಹಿನ್ನೆಲೆ ಹಬ್ಬ-ಹರಿದಿನಗಳು ಸೇರಿದಂತೆ ಮದುವೆ ಸಮಾರಂಭಗಳು ನಡೆಯುತ್ತಿದ್ದು, ಜವಳಿ, ಚಿನ್ನಾಭರಣ ವಹಿವಾಟಿನ ಮೇಲೆ ಪರಿಣಾಮ ಬೀರುವಂತೆ ಮಾಡಿದೆ. ಇದೇ ಸೀಸನ್‌ನಲ್ಲಿ ಉದ್ಯಮದ ಶೇ.40 ರಷ್ಟು ವಹಿವಾಟು ನಡೆಯುತ್ತಿದೆ. ಕೊರೊನಾ ಮೊದಲ ಅಲೆ ಸಹ ಇದೇ ಸಮಯದಲ್ಲಿ ಒಕ್ಕರಿಸಿದ್ದರಿಂದ ಕಳೆದ ಸೀಸನ್‌ ವ್ಯಾಪಾರದಲ್ಲಿ ನಷ್ಟ ಅನುಭವಿಸುವಂತಾಗಿತ್ತು. ಈಗ ಎರಡನೇ ಅಲೆಯೂ ವಹಿವಾಟನ್ನು ಕುಸಿಯುವಂತೆ ಮಾಡಿದೆ.

ನಗರದಲ್ಲಿ ಸುಮಾರು 100ಕ್ಕೂ ಹೆಚ್ಚು ಬಟ್ಟೆ ಅಂಗಡಿಗಳಿದ್ದು, ಸೀಸನ್‌ನಲ್ಲಿ ಪ್ರತಿದಿನ ಲಕ್ಷಾಂತರ ರೂ. ವಹಿವಾಟು ನಡೆಯುತ್ತದೆ. ಆದರೆ ಕಳೆದ ಎರಡು ವರ್ಷಗಳಿಂದ ಬಟ್ಟೆ ಅಂಗಡಿಗಳ ವಹಿವಾಟು ಕುಸಿದಿದ್ದು, ವ್ಯಾಪಾರಸ್ಥರು ಸಮಸ್ಯೆ ಎದುರಿಸುವಂತಾಗಿದೆ. ಪ್ರಸಕ್ತ ವರ್ಷ ಹಬ್ಬ, ಹರಿದಿನಗಳು ಹಾಗೂ ಮದುವೆ ಸೀಸನ್‌ ಹಿನ್ನೆಲೆ ಕೋಟ್ಯಂತರ ಬಂಡವಾಳ ಹಾಕಿ ಬಟ್ಟೆಗಳನ್ನು ಖರೀದಿಸಿದ್ದ ವ್ಯಾಪಾರಸ್ಥರು ಕೊರೊನಾ ಕರ್ಫ್ಯೂ ಮಾಡಿದ್ದರಿಂದ ಬಟ್ಟೆಗಳು ಗೋಡೌನ್‌ ನಲ್ಲಿಯೇ ಕೊಳೆಯುತ್ತಿವೆ.

ಕೊರೊನಾ ಕರ್ಫ್ಯೂನಿಂದ ನಿಗದಿಯಾಗಿದ್ದ ಕಾರ್ಯಕ್ರಮಗಳು ಒಂದಂದಾಗಿ ರದ್ದಾಗುತ್ತಿದ್ದು, ಇನ್ನು ಕೆಲವು ಮುಂದೂಡುತ್ತಿದ್ದಾರೆ. ಇದರಿಂದಾಗಿ ವಿವಾಹ ಕಾರ್ಯಕ್ರಮ ಅಲ್ಲದೇ ಶಾಲಾ-ಕಾಲೇಜುಗಳ ಸಮವಸ್ತ್ರದ ಬ್ಯುಸಿನೆಸ್‌ ಕೂಡ ನೆಲಕಚ್ಚಿದ್ದು, ಸುಮಾರು 80 ಲಕ್ಷಕ್ಕೂ ಹೆಚ್ಚು ನಷ್ಟ ಅನುಭವಿಸುವಂತಾಗಿದೆ. ಇದಕ್ಕೆ ಹೊರತಿಲ್ಲ ಎಂಬಂತೆ ಚಿನ್ನಾಭರಣ ಅಂಗಡಿಗಳ ಮೇಲೂ ಪರಿಣಾಮ ಬೀರಿದ್ದು, ಕಳೆದ ವರ್ಷದಿಂದ ಚಿನ್ನಾಭರಣ ವ್ಯಾಪಾರ ಅಷ್ಟಕ್ಕಷ್ಟೇ ಎನ್ನುವಂತಾಗಿದೆ.

ಬೇಸಿಗೆ ದಿನಗಳಲ್ಲಿ ವಿವಾಹ, ಗೃಹ ಪ್ರವೇಶ ಸೇರಿದಂತೆ ಶುಭ ಕಾರ್ಯಗಳು ಹೆಚ್ಚಾಗಿ ನಡೆಯುತ್ತವೆ. ಆದರೆ ಈ ಸಮಯದಲ್ಲಿಯೇ ಕೊರೊನಾ ಎರಡನೇ ಅಲೆ ಅಪ್ಪಳಿಸಿದ್ದರಿಂದ ಕೆಲವರು ಸಮಾರಂಭಗಳನ್ನು ರದ್ದುಗೊಳಿಸಿದ್ದರೆ, ಇನ್ನೂ ಕೆಲವು ಮುಂದೂಡಲ್ಪಟ್ಟಿವೆ. ನಗರದಲ್ಲಿ ಸುಮಾರು 30ಕ್ಕೂ ಹೆಚ್ಚು ಚಿನ್ನಾಭರಣ ಅಂಗಡಿಗಳಿದ್ದು, ಈ ಸೀಸನ್‌ಲ್ಲಿ ಲಕ್ಷಾಂತರ ವಹಿವಾಟು ನಡೆಯುತ್ತಿತ್ತು. ಆದರೆ ಕೊರೊನಾದಿಂದ ವ್ಯಾಪಾರ ವಹಿವಾಟಕ್ಕೆ ಅವಕಾಶ ನೀಡದ ಪರಿಣಾಮ ಲಕ್ಷಾಂತರ ರೂ. ನಷ್ಟ ಅನುಭವಿಸುವಂತಾಗಿದೆ ಎಂದು ಚಿನ್ನಾಭರಣ ವ್ಯಾಪಾರಸ್ಥರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಅಟೋಮೊಬೈಲ್‌, ರಿಯಲ್‌ ಎಸ್ಟೇಟ್‌ ಕ್ಷೇತ್ರದ ಮೇಲೂ ಪರಿಣಾಮ ಬೀರಿದೆ. ಕಳೆದ ವರ್ಷದಿಂದ ಜನರು ಆರ್ಥಿಕ ಸಂಕಷ್ಟಕ್ಕೆ ತುತ್ತಾಗುತ್ತಿದ್ದರಿಂದ ಹೊಸದಾಗಿ ವಾಹನಗಳ ಖರೀದಿ ಹಾಗೂ ಜಾಗೆಗಳ ಖರೀದಿಗೆ ಮನಸ್ಸು ಮಾಡುತ್ತಿಲ್ಲ. ಬಸವ ಜಯಂತಿ, ರಂಜಾನ್‌ ಹಬ್ಬದ ಹಿನ್ನೆಲೆ ಮುಂಗಡವಾಗಿ ತಮಗೆ ಬೇಕಾದ ವಾಹನಗಳನ್ನು ಬುಕ್‌ ಮಾಡುತ್ತಿದ್ದರು. ಆದರೆ, ಈ ಬಾರಿ ಕೊರೊನಾ ಕರ್ಫ್ಯೂನಿಂದಾಗಿ ಅಟೋಮೊಬೈಲ್‌ ಕ್ಷೇತ್ರದ ಮೇಲೆ ಹೊಡೆತ ಬಿದ್ದಿದ್ದು, ಕೋಟ್ಯಂತರ ರೂ. ನಷ್ಟ ಅನುಭವಿಸುವಂತಾಗಿದೆ. ಇದೇ ರೀತಿ ರಿಯಲ್‌ ಎಸ್ಟೇಟ್‌ ಉದ್ಯಮ ಕೂಡ ನಷ್ಟದ ಹಾದಿಯಲ್ಲಿಯೇ ಸಾಗಿದೆ.

ಟಾಪ್ ನ್ಯೂಸ್

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.