ತೌಖ್ತೆಗೆ ನಲುಗಿದ ಕರಾವಳಿ : ಮೂರು ಜಿಲ್ಲೆಗಳಲ್ಲಿ ಮಳೆ ಅಬ್ಬರ, ಇಂದು ರೆಡ್ ಅಲರ್ಟ್
Team Udayavani, May 16, 2021, 7:30 AM IST
ಉಡುಪಿ/ ಮಂಗಳೂರು : ತೌಖ್ತೆ ಚಂಡಮಾರುತದ ತೀವ್ರ ಪರಿಣಾಮ ಶನಿವಾರವೇ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಉಂಟಾಗಿದೆ. ಮುಂಜಾನೆಯಿಂದ ಉಡುಪಿ, ದಕ್ಷಿಣ ಕನ್ನಡ ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಹಾನಿಯಾಗಿದೆ. ಕಡಲ ಕಿನಾರೆಯುದ್ದಕ್ಕೂ ಭೀಮ ಶಕ್ತಿಯ ಭಾರೀ ಗಾತ್ರದ ಅಲೆಗಳು ದಡವನ್ನು ನುಂಗಿಹಾಕಿವೆ. ಭಾರೀ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿದ್ಯುತ್ ಸರಬರಾಜು ಕಡಿತವಾಗಿದೆ.
ಉಡುಪಿ, ಬ್ರಹ್ಮಾವರ, ಕಾರ್ಕಳ, ಕಾಪು ಭಾಗದಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ಭಾರೀ ಮಳೆಯಾಗಿದೆ. ಕಡಲ್ಕೊರೆತ ತೀವ್ರ ಗೊಂಡಿದ್ದು, ಹಲವು ಮನೆಗಳು ಅಪಾಯ ದಲ್ಲಿವೆ. ಮರವಂತೆಯಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಕೆಲವೇ ತಿಂಗಳ ಹಿಂದೆ ನಿರ್ಮಿಸಿದ್ದ ಮೀನು ಗಾರಿಕೆ ರಸ್ತೆ ಕೊಚ್ಚಿ ಹೋಗಿದೆ. ಕಾಸರಗೋಡು ಜಿಲ್ಲೆಯ ಉಪ್ಪಳದಲ್ಲಿ ಎರಡು ಅಂತಸ್ತಿನ ಮನೆ ಕೊಚ್ಚಿಹೋಗಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಇನ್ನೂ ಮೂರು ದಿನ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.
ಉಳ್ಳಾಲ ಸೋಮೇಶ್ವರದಲ್ಲಿ ನೀರು ಸುಮಾರು 100 ಮೀ. ಒಳಗೆ ನುಗ್ಗಿ ಮನೆಗಳು ಜಲಾ ವೃತವಾಗಿವೆ. ಸೋಮೇ ಶ್ವರ ರುದ್ರ ಪಾದೆ ಬಳಿ ಇರುವ ಹಿಂದೂ ರುದ್ರ ಭೂಮಿ ಭಾಗಶಃ ಸಮುದ್ರ ಪಾಲಾಗಿದೆ. ಮಲ್ಪೆ ಬಂದರಿನಿಂದ ಹೊರಟಿದ್ದ ಮೀನುಗಾರಿಕೆ ಬೋಟು ಮುಳುಗಿದ್ದು, ಅದರಲ್ಲಿದ್ದ ಬಿಹಾರ ಮೂಲದ ಇಬ್ಬರು ಯುವಕರು ಮಟ್ಟು ಬೀಚಿನಲ್ಲಿ ಸುರಕ್ಷಿತವಾಗಿ ದಡ ಸೇರಿದ್ದಾರೆ.
ಮೇ 18ರ ವರೆಗೆ ಮಳೆ
ಐಎಂಡಿ ಮಾಹಿತಿಯಂತೆ ತೌಖ್ತೆ ವೇಗ ಮೇ 16ರಂದು 115-125ರಿಂದ 140 ಕಿ.ಮೀ. ಇರಲಿದೆ. ಸಂಜೆ 6ಕ್ಕೆ 125-135ರಿಂದ 150 ಕಿ.ಮೀ. ಮತ್ತು ಮೇ 17ರಂದು ಬೆಳಗ್ಗೆ 6ಕ್ಕೆ 145-155ರಿಂದ 170 ಕಿ.ಮೀ., ಸಂಜೆ 6ಕ್ಕೆ 150-160ರಿಂದ 175 ಕಿ.ಮೀ. ಮತ್ತು ಮೇ 18ರ ಬೆಳಗ್ಗೆ 6ಕ್ಕೆ 150-160ರಿಂದ 175 ಕಿ.ಮೀ. ವೇಗ ಪಡೆಯುವ ಸಾಧ್ಯತೆ ಇದೆ.
ಇಂದು ರೆಡ್ ಅಲರ್ಟ್
ಕರಾವಳಿಯಲ್ಲಿ ಇನ್ನೂ 3 ದಿನಗಳ ಕಾಲ ಉತ್ತಮ ಮಳೆ ಸುರಿಯಲಿದ್ದು, ಭಾರತೀಯ ಹವಾಮಾನ ಇಲಾಖೆಯು ಮೇ 16ರಂದು ರೆಡ್ ಅಲರ್ಟ್ ಘೋಷಿಸಿದೆ. ಮೇ 17ರಂದು ಆರೆಂಜ್ ಮತ್ತು ಮೇ 18ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದೆ. ತಾಸಿಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾ ಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಉಚ್ಚಾಟಿಸಿದರೇನಂತೆ.. ಜಗದೀಶ್ ಶೆಟ್ಟರ್ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್
AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್
ರಾಜ್ಯಕ್ಕೆ ಬರುತ್ತಿದ್ದ ನೀರನ್ನು ತಡೆ ಹಿಡಿದ ಮಹಾ ಸರ್ಕಾರದ ಕ್ರಮಕ್ಕೆ ರೈತರು ಆಕ್ರೋಶ
Jackfruit: ಹಲಸಿನ ಹಣ್ಣಿನ ಬೆಲೆ ದುಬಾರಿ, ರೈತರ ಸಂತಸ
Chikkaballapur: ಇಳುವರಿ ಕುಸಿತ; ಮಾವಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ