ದೆಹಲಿಯಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ಮುಂದುವರಿಕೆ
Team Udayavani, May 16, 2021, 1:49 PM IST
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೋವಿಡ್ ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸದ್ಯ ಜಾರಿಯಿರುವ ಲಾಕ್ ಡೌನ್ ನ್ನು ಮತ್ತೊಂದು ವಾರಗಳ ಕಾಲ ವಿಸ್ತರಣೆ ಮಾಡಲಾಗಿದೆ.
ಭಾನುವಾರ ಈ ಬಗ್ಗೆ ಮಾತನಾಡಿರುವ ಸಿಎಂ ಅರವಿಂದ್ ಕೇಜ್ರಿವಾಲ್, ‘ದೆಹಲಿಯಲ್ಲಿ ಕೋವಿಡ್ ಪ್ರಸರಣವನ್ನು ತಡೆಯಲು ಹೇರಲಾಗಿರುವ ಲಾಕ್ಡೌನ್ ಅನ್ನು ಒಂದು ವಾರದವರೆಗೆ ವಿಸ್ತರಿಸಲಾಗಿದೆ’ ಎಂದು ತಿಳಿಸಿದರು.
‘ದೆಹಲಿಯಲ್ಲಿ ಕೋವಿಡ್ ಪರಿಸ್ಥಿತಿಯಲ್ಲಿ ಸುಧಾರಣೆಯಾಗುತ್ತಿದೆ. ಕಳೆದ ಕೆಲವು ದಿನಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಇಳಿಕೆಯಾಗಿದೆ. ಲಾಕ್ಡೌನ್ ನಿಯಮಗಳನ್ನು ಸಡಿಲಿಕೆ ಮಾಡುವುದರಿಂದ ಪ್ರಕರಣಗಳು ಮತ್ತೆ ಹೆಚ್ಚಾಗಬಹುದು. ಹಾಗಾಗಿ ಲಾಕ್ಡೌನ್ ವಿಸ್ತರಿಸಲಾಗಿದೆ’ ಎಂದು ಕೇಜ್ರಿವಾಲ್ ಅವರು ಹೇಳಿದರು.
ಏಪ್ರಿಲ್ 19ರಂದು ವಿಧಿಸಲಾದ ಲಾಕ್ಡೌನ್ ಅನ್ನು ನಾಲ್ಕನೇ ಬಾರಿ ವಿಸ್ತರಿಸಲಾಗಿದ್ದು, ನಾಳೆ(ಸೋಮವಾರ) ಬೆಳಿಗ್ಗೆ 5 ಗಂಟೆಗೆ ಕೊನೆಗೊಳ್ಳಬೇಕಾಗಿದ್ದ ಲಾಕ್ಡೌನ್ ಅನ್ನು ಮೇ 24ರ ಬೆಳಿಗ್ಗೆವರೆಗೆ ವಿಸ್ತರಿಸಲಾಗಿದೆ.
ಕೋವಿಡ್ ವಿರುದ್ದ ಸಮರ ಸಾರಿರುವ ಕೇಜ್ರಿವಾಲ್ ಸರ್ಕಾರ, ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಿಸುತ್ತಿದೆ. ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡುತ್ತಿದೆ. ಕೋವಿಡ್ ಕೇಂದ್ರಗಳನ್ನು ತೆರೆದಿದೆ.
ಕೇವಲ ದೆಹಲಿಯಲ್ಲಿ ಮಾತ್ರವಲ್ಲದೆ ರಾಷ್ಟ್ರದ ಬಹುತೇಕ ರಾಜ್ಯಗಳು ಲಾಕ್ ಡೌನ್ ಮೊರೆ ಹೋಗಿವೆ. ಕರ್ನಾಟಕದಲ್ಲಿಯೂ ಮೇ.24 ರ ವರೆಗೆ ಲಾಕ್ ಡೌನ್ ಹೇರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ