“ಅರೆಸ್ಟ್ ಮಿ ಟೂ” : ಕೇಂದ್ರ ಸರ್ಕಾರಕ್ಕೆ ನನ್ನನ್ನೂ ಬಂಧಿಸಿ ಎಂದು ಕೇಳಿಕೊಂಡ ಗಾಂಧಿ


Team Udayavani, May 16, 2021, 8:31 PM IST

congress leader Rahul Gandhi today hit out at the centre over arrest of 17 people who criticize pm modi

ನವ ದೆಹಲಿ : ಕೋವಿಡ್ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಸರಿಯಾಗಿ ನೀಭಾಯಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರವನ್ನು ಟೀಕಿಸಿ ಹಾಕಿದ್ದ ಪೋಸ್ಟರ್ ಗಳಿಗೆ ಸಂಬಂಧಿಸಿದಂತೆ 17 ಮಂದಿಯನ್ನು ರಾಷ್ಟ್ರ ರಾಜಧಾನಿ ಪೊಲೀಸರು ಬಂಧಿಸಿದ್ದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಆ ವಿರೋಧದ ಧ್ವನಿಗೆ ತಮ್ಮ ಧ್ವನಿ ಸೇರಿಸಿದ್ದಾರೆ.

ಈ  ಕುರಿತಾಗಿ ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿರುವ ಗಾಂಧಿ ಅರೆಸ್ಟ್ ಮಿ ಟೂ… (ನನ್ನನ್ನೂ ಬಂಧಿಸಿ) ಎಂದು ಹಿಂದಿ ಹಾಗೂ ಇಂಗ್ಲಿಷ್ ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ಟಗ್ ದುರಂತ ಮತ್ತು ಕೋರಮಂಡಲ ಹಡಗು ದುರಂತದ ಕುರಿತು ಸೂಕ್ತ ತನಿಖೆಯಾಗಲಿ : ಶಾಸಕ ಭರತ್ ಶೆಟ್ಟಿ

ಮಾತ್ರವಲ್ಲದೇ, ಮೋದಿ ಜೀ, ದೇಶದ ಮಕ್ಕಳ ಪಾಲಿಗೆ ಸಿಗಬೇಕಾದ ಲಸಿಕೆಗಳನ್ನು ವಿದೇಶಗಳಿಗೆ ಯಾಕೆ ಕೊಟ್ಟಿರಿ..? ಎಂದು ಪ್ರಶ್ನೆ ಮಾಡಿದ್ದಲ್ಲದೇ, ಆ ಪ್ರಶ್ನೆ ಇರುವ ಫೋಟೋವನ್ನೇ ತಮ್ಮ ಟ್ವೀಟರ್ ಖಾತೆಯ ಪ್ರೊಫೈಲ್ ಫೋಟೊವನ್ನಾಗಿ ಮಾಡಿಕೊಂಡಿದ್ದಾರೆ.


ಕೋವಿಡ್ ಸೋಂಕಿನ ಎರಡನೇ ಅಲೆ ದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಆತಂಕವನ್ನು ಉಂಟು ಮಾಡುತ್ತಿದ್ದ ಹಿನ್ನೆಲೆಯಲ್ಲಿ ದೇಶದಾದ್ಯಂತ ಸರ್ಕಾರ ನಿರ್ವಹಣೆಯ ಬಗ್ಗೆ ಟೀಕೆಗಳು ವ್ಯಾಪಕವಾಗಿ ಕೇಳಿ ಬಂದಿತ್ತು. ಕಳೆದಕೆಲವು ವಾರಗಳಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವೈಫಲ್ಯವನ್ನು ಟೀಕಿಸುವ  ಪೋಸ್ಟರ್ ಗಳು ದೆಹಲಿಯಲ್ಲಿ

ಹಾಗೂ  ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರವನ್ನು ಟೀಕಿಸುವ ವಾಕ್ಯಗಳಿರುವ ಪೋಸ್ಟರ್​​ಗಳು ಕಳೆದ ಕೆಲವು ದಿನಗಳಿಂದಲೂ ದೆಹಲಿಯಲ್ಲಿ ಅಲ್ಲಲ್ಲಿ ಕಾಣಿಸುತ್ತಿದ್ದವು. ಇದಕ್ಕೆ ಸಂಬಂಧಪಟ್ಟಂತೆ ಸುಮಾರು 17 ಜನರನ್ನು ದೆಹಲಿ ಪೊಲೀಸರು ನಿನ್ನೆ(ಶನಿವಾರ) ಬಂಧಿಸಿದ್ದರು.

ದೆಹಲಿ ಪೊಲೀಸರು ನೇರವಾಗಿ ಕೇಂದ್ರ ಗೃಹ ಇಲಾಖೆಯಡಿ ಬರುತ್ತಾರೆ. ಏನೇ ಇದ್ದರೂ ಅವರು ಗೃಹ ಇಲಾಖೆಗೆ ರಿಪೋರ್ಟ್ ಮಾಡಿಕೊಳ್ಳಬೇಕಾಗುತ್ತದೆ. ನಿನ್ನೆ 17 ಮಂದಿಯನ್ನು ಬಂಧಿಸಿದ್ದ ಪೊಲೀಸರು, ಪೋಸ್ಟರ್ ​ಗೆ ಸಂಬಂಧಪಟ್ಟಂತೆ, ಸಾರ್ವಜನಿಕ ಆಸ್ತಿ ವಿರೂಪಗೊಳಿಸಿದ ಕಾಯ್ದೆ ಮತ್ತು ಸೆಕ್ಷನ್​ 188ರಡಿ ಒಟ್ಟು 21 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾಗಿ ವರದಿ ನೀಡಿದ್ದಾರೆ.

17 ಜನರ ಬಂಧನಕ್ಕೆ ಸಂಬಂಧಪಟ್ಟಂತೆ ಕೇವಲ ರಾಹುಲ್ ಗಾಂಧಿಯಲ್ಲದೆ, ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್​, ವಕ್ತಾರರಾದ ಡಾ. ಶಮಾ ಮೊಹಮ್ಮದ್​, ಹೋರಾಟಗಾರ ಸಾಕೇತ್ ಗೋಖಲೆ ಮತ್ತಿತರರೂ ಕೂಡ ಕೇಂದ್ರ ಸರ್ಕಾರದ ಈ ಧೋರಣೆಯ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ  ಜೈರಾಮ್ ರಮೇಶ್​, ನಾನು ನನ್ನ ಮನೆಯ ಕಾಂಪೌಂಡ್ ಮೇಲೆಲ್ಲ ಪೋಸ್ಟರ್​ ಅಂಟಿಸುತ್ತೇನೆ. ನನ್ನನ್ನೂ ಬಂಧಿಸಿ ಎಂದು ದೆಹಲಿ ಪೊಲೀಸರು, ಗೃಹ ಸಚಿವ ಅಮಿತ್​ ಶಾ ಅವರಿಗೆ ಸವಾಲು ಹಾಕಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿಂದು 31531 ಕೋವಿಡ್ ಪಾಸಿಟಿವ್ ಪ್ರಕರಣ; 403 ಜನರು ಸಾವು

ಟಾಪ್ ನ್ಯೂಸ್

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Amit Shah 2

UP ಯಲ್ಲಿ ದೇಸಿ ಪಿಸ್ತೂಲ್‌ ಬದಲು ಸೇನೆ ಶಸ್ತ್ರಾಸ್ತ್ರ ತಯಾರಿಕೆ: ಅಮಿತ್‌ ಶಾ

vimana

Tiruchirappalli; ಬೆಂಗಳೂರಿಗೆ ಬರುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

arrested

NEET ಅಕ್ರಮ ಆರೋಪ:ದಿಲ್ಲಿಯಲ್ಲಿ 4 ಮಂದಿ ಬಂಧನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.