ಅಕ್ಕ-ತಂಗಿಗೆ ತಾಳಿ ಕಟ್ಟಿದ್ದವನ ಮೇಲೆ ಕೇಸು!


Team Udayavani, May 17, 2021, 10:51 AM IST

incident held at mulabagilu

ಮುಳಬಾಗಿಲು: ಅಕ್ಕ-ತಂಗಿಗೆ ಒಂದೇ ಮಂಟಪದಲ್ಲಿ ತಾಳಿ ಕಟ್ಟುವ ಮೂಲಕ ಎಲ್ಲರ ಗಮನ ಸೆಳೆದಿದ್ದಯುವಕ, ಬಾಲಕಿ ಮದುವೆಯಾಗಿದ್ದಾನೆ ಎಂದು ಸಿಡಿಪಿಐ ನೀಡಿದ ದೂರಿನಂತೆ ನಂಗಲಿ ಠಾಣೆಯಲ್ಲಿ 7ಮಂದಿ ಮೇಲೆ ಕೇಸು ದಾಖಲಿಸಿದ್ದು, ಬಂಧನ ಭೀತಿಯಿಂದ ಆರೋಪಿಗಳೆಲ್ಲರೂ ಪರಾರಿಯಾಗಿದ್ದಾರೆ.

ತಾಲೂಕಿನ ಮುದಿಗೆರೆ ಮ.ಗಡ್ಡೂರು ಗ್ರಾಪಂವ್ಯಾಪ್ತಿಯ ಚಿನ್ನಬಾಲೇಪಲ್ಲಿ ಗ್ರಾಮದ ದೊಡ್ಡಲಕ್ಷ್ಮಮ್ಮ ಮತ್ತು ಚಿಕ್ಕಚನ್ನರಾಯಪ್ಪ ಅವರ ಪುತ್ರ ಉಮಾಪತಿ,ತಿಮ್ಮರಾವುತನಹಳ್ಳಿ ಗ್ರಾಪಂ ವ್ಯಾಪ್ತಿಯ ವೇಗಮಡಗುಗ್ರಾಮದ ನಾಗರಾಜಪ್ಪ ಮತ್ತು ರಾಣೆಮ್ಮ ದಂಪತಿಯಪುತ್ರಿಯರಾದ ಸುಪ್ರಿಯಾ ಮತ್ತು ಲಲಿತಾ ಅವರೊಂದಿಗೆ ಮೇ 7ರಂದು ಚಿನ್ನಬಾಲೇಪಲ್ಲಿ ಗ್ರಾಮದ ಚನ್ನರಾಯಸ್ವಾಮಿ ದೇಗುಲದಲ್ಲಿ ಸರಳವಾಗಿ ವಿವಾಹವಾಗಿದ್ದರು.

ವೈರಲ್‌ ಆಗಿದ್ದ ಫೋಟೋ: ಅಂತೆಯೇ ಮೇ 7ರಂದು ವೇಗಮಡಗು ಗ್ರಾಮದಲ್ಲಿ ವಧುವಿನ ಮನೆಯಲ್ಲಿ ಆರತಕ್ಷತೆ ನಡೆದಿದ್ದು, ಆಮಂತ್ರಣ ಪತ್ರಿಕೆಯಲ್ಲಿವರನು ಇಬ್ಬರು ಯುವತಿಯರ ಜೊತೆ ವಿವಾಹವಾಗಿರುವ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿತ್ತು.

ಇದನ್ನೂ ಓದಿ:ಟಗ್ ಸಿಬ್ಬಂದಿ ರಕ್ಷಣಾ ಕಾರ್ಯ: ಕೋಸ್ಟ್ ಗಾರ್ಡ್ ಡಿಐಜಿ ಜತೆ ಕೋಟ, ಕಟೀಲ್, ಡಿಸಿ ಚರ್ಚೆ

ಮದುವೆ ಆಗಲು ಹೆಣ್ಣು ಸಿಗದೇಎಷ್ಟೋ ಮಂದಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಈ ಸಂದರ್ಭದಲ್ಲಿ ತಾಲೂಕಿನ ಯುವಕನೊಬ್ಬ ಒಂದೇ ಮಂಟಪದಲ್ಲಿ ಅಕ್ಕ-ತಂಗಿ ಇಬ್ಬರನ್ನೂ ವಿವಾಹವಾಗಿರುವುದು ಎಲ್ಲರ ಗಮನ ಸೆಳೆದಿತ್ತು.ಈಗ ಮದುವೆ ಆಗಿರುವ ಯುವತಿಯರಲ್ಲಿಲಲಿತಾ ಮೂಕಿ ಎನ್ನಲಾಗಿದೆ. ತನ್ನ ತಂಗಿಯನ್ನುಮದುವೆ ಯಾದರೆ ಮಾತ್ರ ಮದುವೆ ಆಗುತ್ತೇನೆಂದುಸುಪ್ರಿಯಾ ಪಟ್ಟು ಹಿಡಿದ ಕಾರಣ, ಇಬ್ಬರನ್ನು ಉಮಾಪತಿ ಮದುವೆ ಆಗಿದ್ದನು. ಆದರೆ, ಲಲಿತಾಗೆ ಇನ್ನೂ 16ವರ್ಷ ಎಂದು ಹೇಳಲಾಗುತ್ತಿದೆ.

ಅಧಿಕಾರಿಗಳು ಭೇಟಿ: ಯುವತಿಯರ ಜೊತೆವಿವಾಹ ವಾಗಿರುವ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಮಾಧ್ಯಮಗಳಲ್ಲೂ ಸುದ್ದಿಪ್ರಕಟ ವಾಗಿತ್ತು. ಇದರಿಂದ ಎಚ್ಚೆತ್ತ ತಹಶೀಲ್ದಾರ್‌ರಾಜ ಶೇಖರ್‌, ಸಿಡಿಪಿಒ ರಮೇಶ್‌, ತಾಯಲೂರುಹೋಬಳಿ ಉಪ ತಹಶೀಲ್ದಾರ್‌ ಮಂಜುನಾಥ್‌,ರಾಜಸ್ವ ನಿರೀಕ್ಷಕ ಸತೀಶ್‌ರಾಜ್‌ ಮತ್ತು ಗ್ರಾಮ ಲೆಕ್ಕಿಗದೇವರಾಜ್‌ ಒಳಗೊಂಡ ಅಧಿಕಾರಿಗಳ ತಂಡ ವೇಗಮಡಗು ಗ್ರಾಮದ ಯುವತಿಯ ಮನೆಗೆ ಭೇಟಿನೀಡಿ ಕುಟುಂಬಸ್ಥರೊಂದಿಗೆ ಚರ್ಚಿಸಿ ಯುವತಿಯವಯಸ್ಸಿನ ದಾಖಲೆ ಪರಿಶೀಲಿಸಿದಾಗ ಲಲಿತಾ ಅಪ್ರಾಪ್ತೆಳೆಂದು ದೃಢಪಟ್ಟಿದೆ.

ಕೇಸು ದಾಖಲು: ಬಾಲಕಿಯೊಂದಿಗೆ ವಿವಾಹವಾಗಿರುವ ಉಮಾಪತಿ ಮತ್ತು ಅವರ ತಂದೆ ಚಿಕ್ಕಚನ್ನರಾಯಪ್ಪ, ತಾಯಿ ದೊಡ್ಡಲಕ್ಷ್ಮಮ್ಮ, ಬಾಲಕಿಯ ತಂದೆನಾಗರಾಜಪ್ಪ, ತಾಯಿ ರಾಣೆಮ್ಮ ಮತ್ತು ಬಾಲ್ಯವಿವಾಹದ ಲಗ್ನಪತ್ರಿಕೆ ಮುದ್ರಿಸಿದ ಮುಳಬಾಗಿಲುಗಾಯತ್ರಿ ಆಫ್ಸೆಟ್‌ ಪ್ರಿಂಟರ್ ಮಾಲಿಕ, ಚನ್ನರಾಯಸ್ವಾಮಿ ದೇಗುಲ ಅರ್ಚಕರ ವಿರುದ್ಧ ಬಾಲ್ಯವಿವಾಹನಿಷೇಧ ಹಾಗೂ ಪೋಕೊÕà ಕಾಯ್ದೆ ಅನ್ವಯ ಪ್ರಕರಣದಾಖಲಿಸುವಂತೆ ಸಿಡಿಪಿಒ ರಮೇಶ್‌ ನಂಗಲಿ ಠಾಣೆಗೆದೂರು ನೀಡಿದ್ದರು.

ಅದರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಬಾಲಕಿಯನ್ನು ವಶಕ್ಕೆ ಪಡೆದುನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. 7ಆರೋಪಿಗಳ ಪತ್ತೆಗೆ ಪಿಎಸ್‌ಐ ಚೌಡಪ್ಪ ಮತ್ತು ಪೇದೆಗ‌ಳಾದ ಸುರೇಶ್‌, ಪ್ರಕಾಶ್‌, ಮಂಜುನಾಥ್‌,ಮೋಹನ್‌ ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.