ನಾರದ ಸ್ಟಿಂಗ್ ಪ್ರಕರಣ: ಪಶ್ಚಿಮ ಬಂಗಾಳ ಸಚಿವ ಹಕೀಮ್ ಸೇರಿದಂತೆ ನಾಲ್ವರನ್ನು ಬಂಧಿಸಿದ ಸಿಬಿಐ
2017ರ ಮಾರ್ಚ್ ನಲ್ಲಿ ಕೋಲ್ಕತಾ ಹೈಕೋರ್ಟ್ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು.
Team Udayavani, May 17, 2021, 10:46 AM IST
ನವದೆಹಲಿ:ನಾರದ ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸೋಮವಾರ(ಮೇ 17) ಪಶ್ಚಿಮಬಂಗಾಳ ಕ್ಯಾಬಿನೆಟ್ ಮಂತ್ರಿಗಳಾದ ಫಿರ್ಹಾದ್ ಹಕೀಮ್ , ಸುಬ್ರತಾ ಮುಖರ್ಜಿ ಹಾಗೂ ಟಿಎಂಸಿ ಶಾಸಕ ಮದನ್ ಮಿತ್ರ, ಪಶ್ಚಿಮಬಂಗಾಳದ ಮಾಜಿ ಸಚಿವ ಸೋವನ್ ಚಟರ್ಜಿಯನ್ನು ಬಂಧಿಸಿದೆ.
ಇದನ್ನೂ ಓದಿ:ಟಗ್ ಸಿಬ್ಬಂದಿ ರಕ್ಷಣಾ ಕಾರ್ಯ: ಕೋಸ್ಟ್ ಗಾರ್ಡ್ ಡಿಐಜಿ ಜತೆ ಕೋಟ, ಕಟೀಲ್, ಡಿಸಿ ಚರ್ಚೆ
ನಾರದ ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸೋಮವಾರ ಬಂಧಿತರನ್ನು ಕೋರ್ಟ್ ಗೆ ಹಾಜರುಪಡಿಸುವ ಮೊದಲು ಆರೋಪಪಟ್ಟಿ ಸಲ್ಲಿಸಲಿದೆ ಎಂದು ತಿಳಿಸಿದೆ.
ತೃಣಮೂಲ ಕಾಂಗ್ರೆಸ್ ಪಕ್ಷದ ನಾಲ್ವರು ಮಾಜಿ ಸಚಿವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪಶ್ಚಿಮಬಂಗಾಳ ಗವರ್ನರ್ ಜಗದೀಪ್ ಧಾನ್ಕರ್ ಅನುಮತಿ ನೀಡಿದ ಒಂದು ವಾರದ ನಂತರ ಈ ಬೆಳವಣಿಗೆ ನಡೆದಿರುವುದಾಗಿ ವರದಿ ವಿವರಿಸಿದೆ.
ಏನಿದು ಪ್ರಕರಣ:
ಪಶ್ಚಿಮಬಂಗಾಳ ಚುನಾವಣೆಗೂ ಮುನ್ನ ನಾರದ ಎಂಬ ಸುದ್ದಿ ವಾಹಿನಿ ನಡೆಸಿದ ಸ್ಟಿಂಗ್ ಆಪರೇಷನ್ ನಲ್ಲಿ ಟಿಎಂಸಿ ನಾಯಕರು ಲಂಚ ಸ್ವೀಕರಿಸಿರುವುದು ಬಯಲಾಗಿತ್ತು. ಈ ದೃಶ್ಯದ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದು, 2017ರ ಮಾರ್ಚ್ ನಲ್ಲಿ ಕೋಲ್ಕತಾ ಹೈಕೋರ್ಟ್ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ