ದಿನಂಪ್ರತಿ ಗೋ ಮೂತ್ರ ಕುಡಿಯುತ್ತೇನೆ…ಅದಕ್ಕೆ ನನಗೆ ಕೋವಿಡ್ ಬಂದಿಲ್ಲ: ಪ್ರಜ್ಞಾ ಠಾಕೂರ್
ಕ್ಯಾನ್ಸರ್ ಗುಣವಾಗಿತ್ತು ಎಂದು ಹೇಳಿಕೆ ನೀಡಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
Team Udayavani, May 17, 2021, 5:40 PM IST
ಭೋಪಾಲ್: ಗೋ ಮೂತ್ರ ಕೋವಿಡ್ ನಿಂದ ಉಂಟಾಗುವ ಶ್ವಾಸಕೋಶದ ಕೋವಿಡ್ ಸೋಂಕನ್ನು ಗುಣಪಡಿಸುತ್ತದೆ ಎಂದು ಹೇಳಿರುವ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್, ತಾನು ಕೋವಿಡ್ ವೈರಸ್ ನಿಂದ ರಕ್ಷಿಸಿಕೊಳ್ಳಲು ಪ್ರತಿದಿನ ಗೋ ಮೂತ್ರ ಕುಡಿಯುತ್ತಿರುವುದಾಗಿ ಬಹಿರಂಗಪಡಿಸಿರುವುದಾಗಿ ವರದಿ ತಿಳಿಸಿದೆ.
ಒಂದು ವೇಳೆ ನಮ್ಮ ಬಳಿ ದೇಸೀ ದನದ ಗೋ ಮೂತ್ರ ಇದ್ದರೆ, ಅದನ್ನು ದಿನಂಪ್ರತಿ ಕುಡಿಯುವುದರಿಂದ ಕೋವಿಡ್ ನಿಂದ ಬರುವ ಶ್ವಾಸಕೋಶದ ಸೋಂಕನ್ನು ಗುಣಪಡಿಸುತ್ತದೆ. ನನಗೆ ತುಂಬಾ ನೋವಿದ್ದು, ದಿನಂಪ್ರತಿ ಗೋ ಮೂತ್ರ ಕುಡಿಯಲು ಆರಂಭಿಸಿದೆ. ಈಗ ನಾನು ಕೋವಿಡ್ ಗಾಗಿ ಯಾವುದೇ ಔಷಧವನ್ನು ತೆಗೆದುಕೊಳ್ಳುತ್ತಿಲ್ಲ, ನನಗೆ ಕೋವಿಡ್ ಕೂಡಾ ಇಲ್ಲ ಎಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಹೇಳಿರುವುದಾಗಿ ವರದಿ ತಿಳಿಸಿದೆ.
ಗೋ ಮೂತ್ರ ಜೀವ ರಕ್ಷಕವಾಗಿದೆ ಎಂದು ಪ್ರಜ್ಞಾ ತಿಳಿಸಿದ್ದಾರೆ. ಎರಡು ವರ್ಷಗಳ ಹಿಂದೆ ಗೋ ಮೂತ್ರ ಮತ್ತು ಗೋವಿನ ಇತರ ಉತ್ಪನ್ನಗಳನ್ನು ಮಿಶ್ರಣ ಮಾಡಿ ಸೇವಿಸಿದ್ದರಿಂದ ತನ್ನ ಕ್ಯಾನ್ಸರ್ ಗುಣವಾಗಿತ್ತು ಎಂದು ಹೇಳಿಕೆ ನೀಡಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
2020ರ ಡಿಸೆಂಬರ್ ನಲ್ಲಿ ಪ್ರಜ್ಞಾ ಠಾಕೂರ್ ಕೋವಿಡ್ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ವೈಜ್ಞಾನಿಕವಾಗಿ ಸಾಬೀತಾಗದ ಯಾವುದೇ ಔಷಧವನ್ನು ಕೋವಿಡ್ ಗಾಗಿ ಬಳಸಬೇಡಿ ಎಂದು ವೈದ್ಯರು, ವಿಜ್ಞಾನಿಗಳು ಎಚ್ಚರಿಕೆ ನೀಡುತ್ತಲೇ ಬಂದಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ