ರೈಸ್ಮಿಲ್ ಮಾಲೀಕರ ಸಂಘದಿಂದ ಔಷಧ ಕಿಟ್ ದೇಣಿಗೆ
Team Udayavani, May 17, 2021, 10:04 PM IST
ಸಿರುಗುಪ್ಪ: ಕೋವಿಡ್ ಸೋಂಕಿತರಿಗೆ ಒದಗಿಸಲು ಬೇಕಾದ ಮಾತ್ರೆ, ಚುಚ್ಚುಮದ್ದು, ಇತರೆ ವೈದ್ಯಕೀಯ ಪರಿಕರಗಳನ್ನು ದಾನಿಗಳು ನೀಡಲು ಮುಂದಾಗುತ್ತಿರುವುದು ಪ್ರಸಂಶನೀಯ ಕಾರ್ಯವಾಗಿದೆ ಎಂದು ಶಾಸಕ ಎಂ.ಎಸ್. ಸೋಮಲಿಂಗಪ್ಪ ತಿಳಿಸಿದರು.
ನಗರದ ತಾಲೂಕು ಕಚೇರಿಯಲ್ಲಿ ನಗರದ ರೈಸ್ಮಿಲ್ ಮಾಲೀಕರ ಸಂಘದವರು ದಾನವಾಗಿ ನೀಡಿದ ಸುಮಾರು 50 ಆಕ್ಸಿಮೀಟರ್ಗಳನ್ನು ಸ್ವೀಕರಿಸಿ ಮಾತನಾಡಿದ ಶಾಸಕರು ಕೋವಿಡ್ ಸೋಂಕಿತರ ಪಲ್ಸ್ ರೇಟ್ನ್ನು ಪರೀಕ್ಷಿಸಲು ಆಕ್ಸಿಮೀಟರ್ ಅಗತ್ಯವಾಗಿ ಬೇಕಾಗಿರುತ್ತದೆ. ಆಕ್ಸಿಮೀಟರನ್ನು ಪ್ರತಿಯೊಬ್ಬ ಆಶಾಕಾರ್ಯಕರ್ತೆಯರಿಗೆ ಒದಗಿಸುವುದರಿಂದ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಸೋಂಕಿತರ ಆರೋಗ್ಯದ ಬಗ್ಗೆ ನಿಗಾ ಇಡಲು ವೈದ್ಯಕೀಯ ಸಿಬ್ಬಂದಿಗೆ ಅನುಕೂಲವಾಗಲಿದೆ.
ಕೋವಿಡ್ ಸೋಂಕಿನ ಮೂರನೇ ಅಲೆ ಆರಂಭವಾಗುತ್ತಿದೆ ಎನ್ನುವ ಸೂಚನೆಯನ್ನು ವಿಜ್ಞಾನಿಗಳು ನೀಡಿರುವುದರಿಂದ ಪ್ರತಿಯೊಬ್ಬರ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕೋವಿಡ್ ಸೋಂಕನ್ನು ತಡೆಯಲು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾರ್ಗಸೂಚಿಯನ್ನು ಪ್ರತಿಯೊಬ್ಬರು ಕಡ್ಡಾಯವಾಗಿ ಪಾಲಿಸಬೇಕು. ಮೂರನೇ ಅಲೆ ತಡೆಯಲು ಬೇಕಾದ ಅಗತ್ಯ ಕ್ರಮಗಳಿಗಾಗಿ ಸರ್ಕಾರ ಸಾಕಷ್ಟು ಶ್ರಮಿಸುತ್ತಿದೆ, ಕೋವಿಡ್ ಸೋಂಕು ತಡೆಯಲು ಸರ್ಕಾರದೊಂದಿಗೆ ಸಾರ್ವಜನಿಕರು, ಸಂಘಸಂಸ್ಥೆಗಳು ಕೈಜೋಡಿಸಬೇಕೆಂದು ಕರೆ ನೀಡಿದರು.
ತಹಶೀಲ್ದಾರ್ ಎಸ್.ಬಿ. ಕೂಡಲಗಿ, ವೈದ್ಯೆ ವಿದ್ಯಾಶ್ರೀ, ಡಾ| ಚನ್ನಬಸವ, ರೈಸ್ಮಿಲ್ ಮಾಲೀಕರ ಸಂಘದ ತಾಲೂಕು ಅಧ್ಯಕ್ಷ ಎನ್.ಜಿ.ಬಸವರಾಜಪ್ಪ, ಉಪಾಧ್ಯಕ್ಷ ಚಾಗಿ ಸುಬ್ಬಯ್ಯ, ಪದಾಧಿ ಕಾರಿಗಳಾದ ಮಾಣಿಕ್ಯರೆಡ್ಡಿ, ಚಾಗಿರಘು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್
Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ
Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್
ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ
ಎಸಿ ಗ್ಯಾಸ್ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ
Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ
Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ
Met Gala 2024: ಇವೆಂಟ್ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್ ಫೇಕ್ ಫೋಟೋ ವೈರಲ್
BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ