ಮಂಗಳೂರು: ಖಾಸಗಿ ಬಸ್ ಬೆಂಕಿಗೆ ಆಹುತಿ
Team Udayavani, May 18, 2021, 10:12 AM IST
ಮಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ರಸ್ತೆಬದಿ ನಿಲ್ಲಿಸಿದ್ದ ಖಾಸಗಿ ಬಸ್ ಒಂದು ಬೆಂಕಿಗೆ ಆಹುತಿಯಾದ ಘಟನೆ ಮಂಗಳಾದೇವಿ ಬಳಿ ನಡೆದಿದೆ.
ಇಂದು ಮುಂಜಾನೆ ಎರಡು ಗಂಟೆ ಸುಮಾರಿಗೆ ಬೆಂಕಿ ತಗಲಿದೆ ಎನ್ನಲಾಗಿದ್ದು ಬಸ್ ಭಾಗಶಃ ಸುಟ್ಟು ಹೋಗಿದೆ. ಅಕ್ಕಪಕ್ಕದಲ್ಲಿ ಬೇರೆ ಕೆಲವು ಬಸ್ ಗಳು ಕೂಡ ಇದ್ದವು. ಅವುಗಳಿಗೆ ಹಾನಿಯಾಗಿಲ್ಲ. ಲಾಕ್ ಡೌನ್ ಹಿನ್ನೆಲೆಯಲ್ಲಿ ಈ ಬಸ್ ಗಳನ್ನೆಲ್ಲಾ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು ಎಂದು ವರದಿಯಾಗಿದೆ.
ಇದನ್ನೂ ಓದಿ: ಭಾರತ: ಕಳೆದ 24ಗಂಟೆಗಳಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆ ಇಳಿಕೆ, ಸಾವಿನ ಪ್ರಮಾಣ ಹೆಚ್ಚಳ
ಆದರೆ ಬೆಂಕಿ ತಗುಲಲು ನಿಖರ ಕಾರಣ ತಿಳಿದುಬಂದಿಲ್ಲವಾಗಿದ್ದು, ಶಾರ್ಟ್ ಸರ್ಕ್ಯೂಟ್ ಆಗಿರಬಹುದೆಂದು ಅಂದಾಜಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.
ಇದನ್ನೂ ಓದಿ: ಪುತ್ತೂರು: ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು; ಚಾಲಕ ಸಾವು