ನಾರದ ಸ್ಟಿಂಗ್ ಪ್ರಕರಣ: ಬಂಧಿತ ಇಬ್ಬರು ಟಿಎಂಸಿ ಮುಖಂಡರು ಆಸ್ಪತ್ರೆಗೆ ದಾಖಲು
ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಮೇಲ್ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಕೋಲ್ಕತಾ ಹೈಕೋರ್ಟ್ ಜಾಮೀನು ಆದೇಶಕ್ಕೆ ತಡೆ ನೀಡಿತ್ತು.
Team Udayavani, May 18, 2021, 4:25 PM IST
ಕೋಲ್ಕತಾ: ನಾರದ ಸ್ಟಿಂಗ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರ ಹಾಗೂ ಮಾಜಿ ಸಚಿವ ಸೋವನ್ ಚಟರ್ಜಿ ಉಸಿರಾಟದ ತೊಂದರೆ ಕಾಣಿಸಿಕೊಂಡ ನಂತರ ಮಂಗಳವಾರ(ಮೇ 18) ಆಸ್ಪತ್ರೆಗೆ ದಾಖಲಾಗಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಇವರೇನು ಶೋಕಿ ಮಾಡುವುದಕ್ಕೆ ಬಂದಿದ್ದಾ? : ಆರ್. ಅಶೋಕ್ ವಿರುದ್ಧ ಮೀನುಗಾರರ ಆಕ್ರೋಶ
ಉಸಿರಾಟದ ತೊಂದರೆ ಎದುರಿಸುತ್ತಿರುವ ಇಬ್ಬರನ್ನೂ ಎಸ್ ಎಸ್ ಕೆಎಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕ್ಸಿಜನ್ ಸಪೋರ್ಟ್ ನಲ್ಲಿ ಇಡಲಾಗಿದೆ ಎಂದು ವರದಿ ಹೇಳಿದೆ.
ನಾರದ ಪ್ರಕರಣದಲ್ಲಿ ಸೋಮವಾರ ಸಿಬಿಐ ತೃಣಮೂಲ ಕಾಂಗ್ರೆಸ್ ನ ಇಬ್ಬರು ಸಚಿವರುಗಳಾದ ಫಿರ್ಹಾದ್ ಹಕೀಮ್, ಸುಬ್ರತಾ ಮುಖರ್ಜಿ ಹಾಗೂ ಶಾಸಕ ಮದನ್ ಮಿತ್ರ, ಮಾಜಿ ಸಚಿವ ಸೋವನ್ ಚಟರ್ಜಿಯನ್ನು ಸಿಬಿಐ ಬಂಧಿಸಿತ್ತು.
ನ್ಯಾಯಾಂಗ ಬಂಧನದಲ್ಲಿದ್ದ ಚಟರ್ಜಿ ಹಾಗೂ ಮಿತ್ರ ಮುಂಜಾನೆ 3ಗಂಟೆ ಸುಮಾರಿಗೆ ಉಸಿರಾಟದ ತೊಂದರೆ ಎದುರಿಸುತ್ತಿರುವುದನ್ನು ಗಮನಿಸಿ ಇಬ್ಬರನ್ನೂ ಎಸ್ ಎಸ್ ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಬ್ಬರ ಆರೋಗ್ಯವು ಸ್ಥಿರವಾಗಿರುವುದಾಗಿ ಪಿಟಿಐ ವರದಿ ತಿಳಿಸಿದೆ.
ಮುಖರ್ಜಿಗೂ ಕೂಡಾ ಅನಾರೋಗ್ಯ ಕಾಣಿಸಿಕೊಂಡಿದ್ದು, ಮಂಗಳವಾರ ಬೆಳಗ್ಗೆ ಆಸ್ಪತ್ರೆಗೆ ಕರೆದೊಯ್ದು ಆರೋಗ್ಯ ತಪಾಸಣೆ ನಡೆಸಿದ ನಂತರ ಪೊಲೀಸ್ ಅಧಿಕಾರಿಗಳು ಜೈಲಿಗೆ ಕರೆದೊಯ್ದಿದ್ದರು. ಸಚಿವ ಚಟರ್ಜಿ ಆಸ್ಪತ್ರೆಗೆ ದಾಖಲಿಸುವುದು ಬೇಡ ಎಂದು ತಿಳಿಸಿರುವುದಾಗಿ ವರದಿ ವಿವರಿಸಿದೆ.
ನಾಲ್ವರು ಆರೋಪಿಗಳಿಗೂ ಸಿಬಿಐ ವಿಶೇಷ ಕೋರ್ಟ್ ಜಾಮೀನು ನೀಡಿತ್ತು. ಆದರೆ ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಮೇಲ್ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಕೋಲ್ಕತಾ ಹೈಕೋರ್ಟ್ ಜಾಮೀನು ಆದೇಶಕ್ಕೆ ತಡೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್ ವಿರುದ್ಧ ಮೋದಿ ವಾಗ್ದಾಳಿ
Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ನ ಗೋಡೆ ಕುಸಿದು 7 ಮಂದಿ ಸಾವು
ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು
Bhupal: ʼಭೂಪೇಂದ್ರ ಜೋಗಿʼ ರೀಲ್ಸ್ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
Sangeeth Sivan: ಮಾಲಿವುಡ್, ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ
Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!
ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼKGF -3ʼ.. ಬಿಗ್ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ