ಬ್ಯಾಂಕ್ ಉದ್ಯೋಗಿಯಾಗಿದ್ದುಕೊಂಡು ವಿವಿಧ ಖಾತೆಯಿಂದ 8 ಕೋಟಿ ರೂ. ಎಗರಿಸಿದ ಖದೀಮ ಅಂದರ್
Team Udayavani, May 18, 2021, 7:55 PM IST
ತಿರುವನಂತಪುರ: ಬ್ಯಾಂಕ್ ಉದ್ಯೋಗಿಯಾಗಿದ್ದುಕೊಂಡು ಹಲವರ ಖಾತೆಗಳಿಂದ 8 ಕೋಟಿ ರೂ.ಗಳಿಗಿಂತಲೂ ಅಧಿಕ ಮೊತ್ತ ಎಗರಿಸಿದ ವಿಜೇಶ್ ವರ್ಗೀಸ್ ಎಂಬಾತನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.
ಆತ ಪಟ್ಟನಂತಿಟ್ಟದಲ್ಲಿರುವ ಬ್ಯಾಂಕ್ವೊಂದರ ಶಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದಾನೆ. ಸಕ್ರಿಯವಾಗಿ ಇಲ್ಲದೇ ಇರುವ ನಿಗದಿತ ಠೇವಣಿಗಳನ್ನು ಗಮನಿಸಿ ಆ ಮೊತ್ತವನ್ನು ಲಪಟಾಯಿಸುವುದರಲ್ಲಿ ಆತ ಸಿದ್ಧಹಸ್ತನಾಗಿದ್ದಾನೆ.
ಫೆಬ್ರವರಿಯಲ್ಲಿ ಬ್ಯಾಂಕ್ ಉದ್ಯೋಗಿಯೊಬ್ಬರ ಠೇವಣಿ ಮೊತ್ತ ಕಬಳಿಸಿದ ಪ್ರಕರಣ ಬೆಳಕಿಗೆ ಬಂದ ಬಳಿಕ ವರ್ಗೀಸ್ನ ವಿವರ ಗೊತ್ತಾಗಿತ್ತು. ನೌಕಾಪಡೆಯಲ್ಲಿ ಕೆಲಸದಲ್ಲಿದ್ದ ಆತನ ಪತ್ತೆಗಾಗಿ ಪೊಲೀಸರು ವಿಶೇಷ ತಂಡ ರಚಿಸಿದ್ದರು.
ಇದನ್ನೂ ಓದಿ :ವಿವಾಹ ವಾರ್ಷಿಕೋತ್ಸವದ ದಿನದಂದೇ ಪತ್ನಿ ಸಾವು : ಕುಟುಂಬದ ಸಂಭ್ರಮಕ್ಕೆ ತಣ್ಣೀರೆರೆಚಿದ ಕೋವಿಡ್
ಭಾನುವಾರ ಬೆಂಗಳೂರಿನಲ್ಲಿ ಅಡಗಿದ್ದ ಆತನನ್ನು ಪೊಲೀಸರು ಬಂಧಿಸಿ ತಿರುವನಂತಪುರಕ್ಕೆ ಕರೆತಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ