ತನಗೆಂದು ತಂದ ಊಟವನ್ನು ಭಿಕ್ಷೆ ಬೇಡುತ್ತಿದ್ದ ಮಕ್ಕಳಿಗೆ ನೀಡಿ ಮಾನವೀಯತೆ ಮೆರೆದ ಕಾನ್ಸ್ಟೇಬಲ್

ಕಾನ್‌ ಸ್ಟೆಬಲ್ ಮಾನವೀಯತೆಗೆ ಭಾರಿ ಮೆಚ್ಚುಗೆ

ಶ್ರೀರಾಜ್ ವಕ್ವಾಡಿ, May 18, 2021, 8:12 PM IST

Hyderabad: Police constable feeds child beggars from his own tiffin box

ಹೈದರಾಬಾದ್ : ಲಾಕ್ ಡೌನ್ ಸಂದರ್ಭದಲ್ಲಿ ರಸ್ತೆಗಳಲ್ಲಿ ಭಿಕ್ಷೆ ಬೇಡುತ್ತಿದ್ದ ಇಬ್ಬರು ಹೆಣ್ಣು ಮಕ್ಕಳಿಗೆ ಹೈದರಾಬಾದ್ ಪೊಲೀಸ್ ಕಾನ್‌ ಸ್ಟೆಬಲ್ ಎಸ್.ಮಹೇಶ್ ಕುಮಾರ್ ಅವರು ತಮ್ಮ ಬುತ್ತಿಯಲ್ಲಿದ್ದ ಊಟವನ್ನು ನೀಡುತ್ತಿರುವ ವೀಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದ್ದು, ಭಾರಿ ಮೆಚ್ಚುಗೆಗೆ ಕಾರಣವಾಗಿದೆ.

ಈ ಮಾನವೀಯ ಕೆಲಸಕ್ಕೆ ಕಾನ್ ಸ್ಟೇಬಲ್ ಮಹೇಶ್ ಕುಮಾರ್  ಅವರಿಗೆ ನಗರ ಪೊಲೀಸ್ ಆಯುಕ್ತ ಅಂಜನಿ ಕುಮಾರ್ ಅವರು ಕೂಡ ಭೇಷ್ ಅಂದಿದ್ದಾರೆ.

ಇದನ್ನೂ ಓದಿ : ಬೆಡ್‌ ಸಿಗದೆ ಪರೆದಾಡಿದ ಸೋಂಕಿತನಿಗೆ ಆ್ಯಂಬುಲೆನ್ಸ್‌ನಲ್ಲೇ ಆಕ್ಸಿಜನ್‌ ವ್ಯವಸ್ಥೆ

ನಿನ್ನೆ(ಸೋಮವಾರ, ಮೇ 17) ರಾತ್ರಿ 8 ಗಂಟೆ ಸುಮಾರಿಗೆ ವಿ.ವಿ.ಐ.ಪಿ ವಲಯದ ಸೋಮಜಿಗುಡ ರಸ್ತೆಯಲ್ಲಿ ಎಸ್.ಮಹೇಶ್ ಕುಮಾರ್ ಕರ್ತವ್ಯದಲ್ಲಿದ್ದಾಗ, ನಾಲ್ಕು  ಐದು ವರ್ಷ ವಯಸ್ಸಿನ ಇಬ್ಬರು ಸಣ್ಣ ಹುಡುಗಿಯರು ಮತ್ತು ಅವರ ತಂದೆಯೊಂದಿಗೆ ಯಶೋದಾ ಆಸ್ಪತ್ರೆಯ ಬಳಿ ಆಹಾರಕ್ಕಾಗಿ ಭಿಕ್ಷೆ ಬೇಡುತ್ತಿರುವುದನ್ನು ಗಮನಿಸಿ ತಮ್ಮ ಊಟಕ್ಕೆಂದು  ತಂದಿದ್ದ  ಆಹಾರವನ್ನು ಆ ಹಸಿದ ಮಕ್ಕಳಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಹೇಶ್, ನಾನು ಕರ್ತವ್ಯದಲ್ಲಿದ್ದೆ, ಯಶೋದಾ ಆಸ್ಪತ್ರೆಯ ಬಳಿ ಈ ಇಬ್ಬರು ಹೆಣ್ಣು ಮಕ್ಕಳ ಆಹಾರಕ್ಕಾಗಿ ಭಿಕ್ಷೆ ಬೇಡುತ್ತಿರುವುದನ್ನು ಗಮನಿಸಿದೆ. ಕೆಲವರು ಅವರಿಗೆ ಹಣ ನೀಡಿದರು. ಒಬ್ಬರು 100 ರೂಪಾಯಿಯನ್ನು ಕೊಟ್ಟು ಹೋದರು. ಆದರೇ,ಆ ಸಣ್ಣ ಮಕ್ಕಳಿಗೆ ಹೊಟ್ಟೆ ಹಸಿದಿತ್ತು, ತಿನ್ನಲು ಆಹಾರ ಬೇಕಿತ್ತು. ಲಾಕ್ ಡೌನ್ ಇದ್ದ ಕಾರಣ ಎಲ್ಲಾ ಅಂಗಡಿಗಳು ಮುಚ್ಚಿದ್ದವು. ಅವರಿಗೆ ಎಲ್ಲಿಯೂ ಹಸಿವು ತಣಿಸಲು ಆಹಾರ ಸಿಕ್ಕಿರಲಿಲ್ಲ. ನನಗೆ  ಹಸಿವಿನಿಂದಿದ್ದ ಆ ಮಕ್ಕಳನ್ನು ನೋಡುವುದಕ್ಕೆ ಸಾಧ್ಯವಾಗುತ್ತಿರಲಿಲ್ಲ. ನನ್ನ ಬುತ್ತಿಯಲ್ಲಿದ್ದ ಆಹಾರವನ್ನು  ನೀಡಿದೆ. ಅವರು ಆಹಾರವನ್ನು ನೋಡಿದ ತಕ್ಷಣ ಖುಷಿ ಪಟ್ಟಿದ್ದು, ಅದನ್ನು ತಿನ್ನುವುದರಲ್ಲಿ ಆ ಮಕ್ಕಳು ಸಂತೋಷ ಪಟ್ಟಿದ್ದು ನನಗೆ ಮನಸ್ಸು ತುಂಬಿ ಬಂತು ಎಂದರು.

ಎಸ್. ಮಹೇಶ್ ಕುಮಾರ್ ಪಂಜಗುಟ್ಟಾ ಸಂಚಾರ ಪೊಲೀಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದು, ನಿನ್ನೆ ಮಧ್ಯಾಹ್ನ 2.00 ರಿಂದ ರಾತ್ರಿ 11.00 ರವರೆಗೆ ಅವರ ಕರ್ತವ್ಯವಾಗಿತ್ತು. “ನನ್ನ ಕರ್ತವ್ಯ ಮುಗಿಸಿ ಮನೆಗೆ ಹೋಗುವಾಗ ತಡವಾಗುವ ಕಾರಣದಿಂದ ನಾನು ರಾತ್ರಿ ಊಟಕ್ಕೆಂದು ಮನೆಯಿಂದ ಬುತ್ತಿ ತಂದಿದ್ದೆ. ನಿನ್ನೆ ನಾನು ಈ ಮಕ್ಕಳಿಗೆ ಆಹಾರವನ್ನು ನೀಡಿದ್ದೇನೆ ಎಂದು ನನ್ನ ಹೆಂಡತಿಗೆ ಹೇಳಿದಾಗ, ಅವಳು ತುಂಬಾ ಸಂತೋಷಗೊಂಡಳು ಮತ್ತು ನನಗೆ ತಡ ರಾತ್ರಿ 11.45 ರ ಸುಮಾರಿಗೆ ನಾನು ಮನೆಗೆ ತಲುಪುತ್ತಿದ್ದಂತೆ ವಿಶೇಷ ಅಡುಗೆ ಬಡಿಸಿ ಖುಷಿ ಪಟ್ಟಳು ಎನ್ನುತ್ತಾರೆ ಎಸ್.ಮಹೇಶ್ ಕುಮಾರ್.

ಬುತ್ತಿಯಲ್ಲಿ ಏನಿತ್ತು ಎಂದು ಕೇಳಿದ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಮಹೇಶ್, “ಅನ್ನ, ನುಗ್ಗೆಕಾಯಿ ಸಾಂಬಾರ್ ಮತ್ತು ಚಿಕನ್ ಫ್ರೈ. ಆ ಮಕ್ಕಳು ಅದನ್ನು ಇಷ್ಟಪಟ್ಟರು” ಎಂದು ಸಂತೋಷದಿಂದ ಹೇಳಿದರು.

ಇನ್ನು, ಎಸ್.ಮಹೇಶ್ ಕುಮಾರ್ ಅವರ ಈ ಮಾನವೀಯ ಕಳಕಳಿಯನ್ನು ಮೆಚ್ಚಿದ ಹೈದರಾಬಾದ್ ಪೊಲೀಸ್ ಆಯುಕ್ತ ಅಂಜನಿ ಕುಮಾರ್ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಿದ್ದಾರೆ.

ಇದನ್ನೂ ಓದಿ : ಐ.ಎಸ್.ಪಿ.ಆರ್.ಎಲ್ ಖಾಸಗೀಕರಣ ವಿರೋಧಿಸಿ ಜನಾಂದೋಲನ‌ ಯಾತ್ರೆ : ವಿನಯ್ ಕುಮಾರ್ ಸೊರಕೆ

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.