ಖಾಸಗಿ ವೈದ್ಯರಿಂದ ತಪಾಸಣೆಗೆ ಅನುಮತಿ ನೀಡಲು ಆಗ್ರಹ
Team Udayavani, May 18, 2021, 9:54 PM IST
ಸಾಗರ: ತಾಲೂಕಿನ ತ್ಯಾಗರ್ತಿಯ ಖಾಸಗಿ ಕ್ಲಿನಿಕ್ ಅನ್ನು ಬಂದ್ ಮಾಡುವಂತೆ ಎರಡು ದಿನಗಳ ಹಿಂದೆ ಸಾರ್ವಜನಿಕರು ಹಾಗೂ ಕೆಲವು ಪ್ರಮುಖರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕ್ಲಿನಿಕ್ ಕಾರ್ಯ ಚಟುವಟಿಕೆ ನಿಲ್ಲಿಸಿದೆ.
ಆದರೆ ಸೋಮವಾರ ತ್ಯಾಗರ್ತಿಯಲ್ಲಿ ಕೆಲವು ಮುಖಂಡರ ಮತ್ತೂಂದು ಗುಂಪು ಮತ್ತು ಹಲವು ಸಾರ್ವಜನಿಕರು ಖಾಸಗಿ ಕ್ಲಿನಿಕ್ ವೈದ್ಯರಿಗೆ ಅವಕಾಶ ನೀಡಬೇಕೆಂದು ಪ್ರತಿಪಾದಿಸಿ ಪ್ರತಿಭಟನೆ ನಡೆಸಿದರು. ಕೋವಿಡ್ ನಿಯಮ ಪಾಲಿಸದೆ ರೋಗಿಗಳನ್ನು ತಪಾಸಣೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಇಲ್ಲಿನ ಮಾರಿಕಾಂಬಾ ದೇವಾಲಯದ ಪಕ್ಕದ ರಸ್ತೆಯ ಜನರು ಶನಿವಾರ ಖಾಸಗಿ ಕ್ಲಿನಿಕ್ ಎದುರು ಧರಣಿ ನಡೆಸಿ ಕ್ಲಿನಿಕ್ ನಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಯಾವುದೇ ಮುನ್ನೆಚ್ಚರಿಕೆ ವಹಿಸುತ್ತಿಲ್ಲ ಎಂದು ಆಗ್ರಹಿಸಿದ್ದರಿಂದ ಖಾಸಗಿ ವೈದ್ಯರು ಕ್ಲಿನಿಕ್ನ ಬಾಗಿಲು ಮುಚ್ಚಿದ್ದರು.
ಇವರಿಂದ ಚಿಕಿತ್ಸೆ ಪಡೆದ ಜನರು ಕೋವಿಡ್ ಸಂದರ್ಭದಲ್ಲಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎಂದು ಆರೋಪಿಸಿ ಇರುವ ವೈದ್ಯರನ್ನು ಕೆಲವರು ಸ್ವಹಿತಾಸಕ್ತಿಗಾಗಿ ಏಕಾಏಕಿ ಬಂದ್ ಮಾಡಿಸಿದರೆ ಬಡವರು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಮುಖರಾದ ಪಾಂಡುರಂಗ, ಯೋಗೀಶ್ ಹುತ್ತಾದಿಂಬ, ಕೃಷ್ಣಮೂರ್ತಿ, ವೆಂಕಟರಮಣ, ರವಿ, ಪರಶುರಾಮ್ ಮತ್ತಿತರರು ಇದ್ದರು. ಇಲ್ಲಿನ ಖಾಸಗಿ ವೈದ್ಯರಿಗೆ ಬಾಗಿಲು ಮುಚ್ಚಲು ಯಾರೂ ಹೇಳಿಲ್ಲ. ಕೊರೊನಾ ನಿಯಮಾವಳಿ ಪಾಲಿಸಿ ರೋಗಿಗಳ ತಪಾಸಣೆ ನಡೆಸಿ ಎಂದು ಸೂಚಿಸಲಾಗಿದೆ. ನಾಳೆಯಿಂದ ಪರಸ್ಪರ ಅಂತರ ಕಾಯ್ದುಕೊಂಡು ಪ್ರತಿಯೊಬ್ಬರೂ ಸ್ಯಾನಿಟೈಸರ್ ಬಳಸಿ ಯಾರಿಗೂ ತೊಂದರೆಯಾಗದಂತೆ ಶುಶ್ರೂಷೆ ಪಡೆದುಕೊಳ್ಳಬಹುದು ಎಂದು ಗ್ರಾಪಂ ಅಧ್ಯಕ್ಷೆ ಗೀತಾ ಪರಶುರಾಮ್ ಮತ್ತು ಪಿಡಿಒ ಮಂಜಾನಾಯ್ಕ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !