ಕೋವಿಡ್: ಒಬ್ಬೊಬ್ಬರು ಒಂದೊಂದು ರೀತಿ ಮಾಸ್ಕ್ ಧರಿಸ್ತಾರೆ…ಅಧ್ಯಯನ ವರದಿಯಲ್ಲೇನಿದೆ?

ಇದೀಗ ಕಳೆದ ಎರಡು ವಾರಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ.

Team Udayavani, May 20, 2021, 6:39 PM IST

ಕೋವಿಡ್: ಒಬ್ಬೊಬ್ಬರು ಒಂದೊಂದು ರೀತಿ ಮಾಸ್ಕ್ ಧರಿಸ್ತಾರೆ…ಅಧ್ಯಯನ ವರದಿಯಲ್ಲೇನಿದೆ?

ನವದೆಹಲಿ: ದೇಶದಲ್ಲಿನ ಶೇ.50ರಷ್ಟು ಜನರು ಈವಾಗಲೂ ಮಾಸ್ಕ್ ಧರಿಸುತ್ತಿಲ್ಲ. ಆದರೆ ಶೇ.64ರಷ್ಟು ಮಂದಿ ಮಾಸ್ಕ್ ಧರಿಸುತ್ತಿರುವವರು ತಮ್ಮ ಮೂಗಿನ ಕೆಳಕ್ಕೆ ಇಳಿಸಿಕೊಂಡಿರುವುದಾಗಿ ಅಧ್ಯಯನ ವರದಿ ತಿಳಿಸಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ(ಮೇ 20) ತಿಳಿಸಿದೆ.

ಇದನ್ನೂ ಓದಿ:ನಮಗೆ ಸಭೆ ಮಾಡಲು ಅನುಮತಿ ಕೊಡಲ್ಲ, ಸರ್ಕಾರ ಏನ್ನನ್ನೋ ಮುಚ್ಚಿಡುತ್ತಿದೆ: ರಾಮಲಿಂಗಾರೆಡ್ಡಿ

ಮಾಸ್ಕ್ ಧರಿಸುವ ಶೇ.64ರಷ್ಟು ಮಂದಿ ಮೂಗನ್ನು ಬಿಟ್ಟು, ಬಾಯಿಯನ್ನು ಮಾತ್ರ ಮುಚ್ಚಿಕೊಂಡಿರುತ್ತಾರೆ, ಶೇ.20ರಷ್ಟು ಮಂದಿ ಮಾಸ್ಕ್ ಅನ್ನು ಗಲ್ಲದ ಮೇಲೆ ಬಿಟ್ಟುಕೊಂಡಿರುತ್ತಾರೆ. ಶೇ,2ರಷ್ಟು ಮಂದಿ ಕುತ್ತಿಗೆಯಲ್ಲಿ ನೇತಾಡಿಸಿಕೊಂಡಿರುತ್ತಾರೆ. ಕೇವಲ ಶೇ.14ರಷ್ಟು ಮಂದಿ ಮಾತ್ರ ಮೂಗು, ಬಾಯಿ, ಗಲ್ಲವನ್ನು ಸಂಪೂರ್ಣವಾಗಿ ಮಾಸ್ಕ್ ನಿಂದ ಮುಚ್ಚಿಕೊಂಡಿರುತ್ತಾರೆ ಎಂದು ವಿವರಿಸಿದೆ.

ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್, ದೇಶದ ಎಂಟು ರಾಜ್ಯಗಳಲ್ಲಿ ಒಂದು ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿವೆ. 9 ರಾಜ್ಯಗಳಲ್ಲಿ 50 ಸಾವಿರದಿಂದ 1 ಲಕ್ಷ ಸಕ್ರಿಯ ಪ್ರಕರಣಗಳಿವೆ ಮತ್ತು 19 ರಾಜ್ಯಗಳಲ್ಲಿ 50ಸಾವಿರಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳಿವೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಮತ್ತು ಪಶ್ಚಿಮಬಂಗಾಳದಂತಹ ಕೆಲವು ರಾಜ್ಯಗಳು ಶೇ.25ಕ್ಕಿಂತ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, ಇದು ಕಳವಳಕಾರಿಯಾಗಿದೆ ಎಂದು ಅಗರ್ವಾಲ್ ತಿಳಿಸಿದ್ದಾರೆ.

ಕಳೆದ ಹತ್ತು ವಾರಗಳಿಂದ ದೇಶದಲ್ಲಿ ನಿರಂತರವಾಗಿ ಕೋವಿಡ್ 19 ಪ್ರಕರಣ ಹೆಚ್ಚಳವಾಗುತ್ತಿದ್ದು, ಇದೀಗ ಕಳೆದ ಎರಡು ವಾರಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.