ಕೋವಿಡ್‌ ಸೋಂಕಿತರಿಗೆ ಯುವ ವೈದ್ಯರು ಆಶಾಕಿರಣ


Team Udayavani, May 21, 2021, 5:40 AM IST

Untitled-1

ಕುಂದಾಪುರ:  ಕೋವಿಡ್ ಕಾಲಘಟ್ಟದಲ್ಲಿ ಕೋವಿಡ್‌ ಸೋಂಕಿತರನ್ನು ನಾವು ಆರೈಕೆ  ಮಾಡುತ್ತೇವೆ ಎನ್ನುವ   ಸಮರ್ಪಣ ಮನೋಭಾವದ ಸೇವೆಯನ್ನು ಮಾಡುತ್ತಿರುವ ಯುವ ವೈದ್ಯರ ತಂಡವೊಂದು ಇಲ್ಲಿನ ಸರಕಾರಿ ಕೋವಿಡ್‌ ಆಸ್ಪತ್ರೆಯಲ್ಲಿ  ಇದೆ.

ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್‌  :

ಚಿಕಿತ್ಸೆಗಾಗಿ ವೈದ್ಯರ ಕೊರತೆ ಕಂಡಾಗ ಸರಕಾರ ತಾತ್ಕಾಲಿಕ ನೆಲೆಯಲ್ಲಿ ಸೇವೆ ಸಲ್ಲಿಸಲು ಅರ್ಹ ವೈದ್ಯಕೀಯ ಪದವೀಧರರಿಂದ ಅರ್ಜಿ ಆಹ್ವಾನಿಸಿತ್ತು. ಕೊರೊನಾ ಪೀಡಿತರಿಗೆ ಚಿಕಿತ್ಸೆ ನೀಡಬೇಕು ಎನ್ನುವ ಕಾರಣಕ್ಕಾಗಿ ಅರ್ಜಿ ಸಲ್ಲಿಸಲು ದೊಡ್ಡ ಮಟ್ಟದ ಉತ್ಸಾಹಗಳಿರಲಿಲ್ಲ. ಈ ಸಂದರ್ಭದಲ್ಲಿಯೇ ಸೇವೆಗೆ ನಾವು ಸಿದ್ಧ ಎಂದು ಸೇವೆಗೆ ಟೊಂಕ ಕಟ್ಟಿ  ನಿಂತವರು  ಡಾ| ಆಶಿತ್‌, ಡಾ| ರಜತ್‌, ಡಾ| ರಚನಾ ಹಾಗೂ ಡಾ| ನಿವೇದಿತಾ ಎನ್ನುವ ನಾಲ್ವರು ಯುವ ವೈದ್ಯರು.

ಈ ವೈದ್ಯರು, ಪ್ರತಿಯೊಬ್ಬ ರೋಗಿಗಳ ಬಳಿಗೆ  ಹೋಗಿ ಅವರ ಕುಶಲೋಪರಿ  ವಿಚಾರಿಸುವ ಪರಿಯನ್ನು  ಮೆಚ್ಚಲೇಬೇಕು.  ಕುಂದಾಪ್ರ ಭಾಷೆಯಲ್ಲೇ ಸೋಂಕಿತರೊಂದಿಗೆ ಸಂವಹನ ನಡೆಸಿ ಅವರಲ್ಲಿ ಆತ್ಮವಿಶ್ವಾಸ ತುಂಬಿಸುತ್ತಿದ್ದಾರೆ.

ಸಹೋದರರಾದ ಡಾ| ಆಶಿತ್‌ ಹಾಗೂ ಡಾ| ರಜತ್‌ ಅವರ ತಂದೆ ಬಡಾಬೈಲ್‌ ರತ್ನಾಕರ ಶೆಟ್ಟಿ ಅವರು ಮುಂಬಯಿಯಲ್ಲಿ ಉದ್ಯಮಿ. ಕೆಲವು ತಿಂಗಳ ಹಿಂದಷ್ಟೇ ನಿಧನ ಹೊಂದಿದ್ದ,ರಚನಾ ಅವರ ತಂದೆ ಮರಾಠ ಸುರೇಶ್‌ ಶೆಟ್ಟಿ ಅವರ ತಂದೆಯೂ ಮುಂಬಯಿಯಲ್ಲಿ ಹೊಟೇಲ್‌ ಉದ್ಯಮಿಯಾಗಿದ್ದರು.  ನಿವೇದಿತಾ ಅವರು ಕುಂದಾಪುರದ ಹವಲ್ದಾರ್‌ ಕುಟುಂಬದವರು.

ಡಾ| ರಚನಾ ಅವರನ್ನು ಹೊರತುಪಡಿಸಿ ಉಳಿದ ಮೂವರು ಈ ಮೊದಲೇ ಕೊರೊನಾ ಸೋಂಕಿತರಿಗಾಗಿ ಸೇವೆ ಆರಂಭಿಸಿದ್ದರು. ಲಾಕ್‌ಡೌನ್‌ ಕಾರಣಕ್ಕಾಗಿ ಮುಂಬಯಿಯಿಂದ ಊರಿಗೆ ಬಂದಿದ್ದ ರಚನಾ ಅವರನ್ನು ಡಾ| ಆಶಿತ್‌ ಹಾಗೂ ಡಾ| ರಜತ್‌ ಅವರ ಸೇವಾ ಕಾರ್ಯ ಕುಂದಾಪುರದ ಕೋವಿಡ್‌ ಆಸ್ಪತ್ರೆ ಬಾಗಿಲೊಳಗೆ ಕರೆತಂದಿದೆ. ವೈದ್ಯಕೀಯ ಪದವಿ ಪಡೆದಿರುವುದು ಜನ ಸೇವೆಗಾಗಿ ಎನ್ನುವ ದೃಢಸಂಕಲ್ಪವನ್ನು ಹೊಂದಿರುವ ನಾಲ್ವರಲ್ಲಿಯೂ ತಾವು ಸಲ್ಲಿಸುತ್ತಿರುವ ಸೇವೆಯ ಬಗ್ಗೆ ಸಂಪೂರ್ಣ ತೃಪ್ತಿ ಇದೆ.

ಹಿರಿಯ ವೈದ್ಯರಾದ ಡಾ| ನಾಗೇಶ್‌,  ಡಾ| ವಿಜಯಶಂಕರ್‌, ಡಾ| ಚಂದ್ರ ಮರಕಾಲ  ಅವರು ವೈದ್ಯಕೀಯ ಮಾರ್ಗದರ್ಶನ  ನೀಡುತ್ತಿದ್ದಾರೆ.

ತಂದೆಯೇ ಪ್ರೇರಣೆ : ಸಮಾಜಮಖೀ ಕಾರ್ಯದಲ್ಲಿ ಮುಂಚೂಣಿಯಲ್ಲಿ ಇದ್ದ ತಂದೆಯ ಸೇವಾ ಕಾರ್ಯಗಳೇ ನನಗೆ ಪ್ರೇರಣೆ. ಕೊರೊನಾ ಎನ್ನುವ ಆತಂಕದ ನಡುವೆಯೂ, ಅಮ್ಮ ಹಾಗೂ ಮನೆಯವರ ಪ್ರೋತ್ಸಾಹ ಉತ್ಸಾಹವನ್ನು ಹೆಚ್ಚಿಸುತ್ತಿದೆ ಎಂದು ಡಾ| ರಚನಾ ಹೇಳಿದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.