ರಸಗೊಬ್ಬರ ಬೆಲೆ: ಅಧಿಕೃತ ಆದೇಶ
Team Udayavani, May 21, 2021, 6:19 AM IST
ಬೆಂಗಳೂರು: ಮುಂಗಾರು ಹಂಗಾಮಿನಲ್ಲಿ ಡಿಎಪಿ ಹಾಗೂ ಪಿ – ಕೆ ರಸಗೊಬ್ಬರ ಸಬ್ಸಿಡಿಯನ್ನು 50-ಕೆ.ಜಿ. ಚೀಲವೊಂದಕ್ಕೆ 511ರಿಂದ 1,211 ರೂಪಾಯಿಗೆ (ಶೇ.140) ಹೆಚ್ಚಿಸಿ ಕೇಂದ್ರ ರಸಗೊಬ್ಬರ ಇಲಾಖೆಯು ಗುರುವಾರ ಅಧಿಕೃತ ಆದೇಶ ಹೊರಡಿಸಿದೆ.
ಪೋಷಕಾಂಶ ಆಧಾರಿತ ರಸಗೊಬ್ಬರ ಸಬ್ಸಿಡಿ (ಎನ್.ಬಿ.ಎಸ್.) ಯೋಜನೆಯಡಿ ಗುರುವಾರ ಹೊರಡಿಸಿದ ಪರಿಷ್ಕೃತ ಆದೇಶದ ಪ್ರಕಾರ ರಸಗೊಬ್ಬರದಲ್ಲಿ ಬಳಕೆಯಾಗುವ ಪ್ರತಿ ಟನ್ ನೈಟ್ರೋಜನ್ಗೆ 18,789 ರೂ., ಪೋಸ್ಪೇಟ್ ಗೆ 45,323 ರೂ., ಪೊಟಾಷ್ 10,116 ರೂ ಮತ್ತು ಸಲ#ರ್ಗೆ 2,374 ರೂ. ಸಬ್ಸಿಡಿ ದೊರೆಯಲಿದೆ. ಪೋಷಕಾಂಶ ಆಧಾರಿತ ರಸಗೊಬ್ಬರ ಸಬ್ಸಿಡಿ (ಎನ್.ಬಿ.ಎಸ್.) ಯೋಜನೆಯಡಿ 22 ನಮೂನೆ ಗೊಬ್ಬರಗಳಿದ್ದು ಈ ಪಟ್ಟಿಗೆ ಹೊಸದಾಗಿ ಎನ್ಪಿಕೆ 8-21-21 ಮತ್ತು ಎನ್ಪಿಕೆ 9-24-24 ನಮೂನೆ ರಸಗೊಬ್ಬರಗಳನ್ನು ಸೇರಿಸಲಾಗಿದೆ. ಪರಿಷ್ಕೃತ ಸಬ್ಸಿಡಿ ದರ ಮುಂಗಾರು ಹಂಗಾಮಿನವರೆಗೆ ಅಂದರೆ, ಈ ವರ್ಷದ ಅಕೊ³àಬರ್ 31ರ ವರೆಗೆ ಜಾರಿಯಲ್ಲಿರಲಿದೆ.
ರಸಗೊಬ್ಬರ ಸಬ್ಸಿಡಿಗಾಗಿ ಕೇಂದ್ರ ಸರಕಾರ ಪ್ರತಿವರ್ಷ ಸುಮಾರು 80,000 ಕೋ. ರೂ. ವ್ಯಯಿಸುತ್ತಿದೆ. ಈಗಿನ ಸಬ್ಸಿಡಿ ಹೆಚ್ಚಳದಿಂದಾಗಿ ಕೇಂದ್ರವು ಹೆಚ್ಚುವರಿಯಾಗಿ 14,775 ಕೋ. ರೂ. ಖರ್ಚು ಮಾಡುತ್ತಿದ್ದು ದೇಶಾದ್ಯಂತ 9.57 ಕೋ.ರೂ.ಗಿಂತ ಹೆಚ್ಚು ರೈತರಿಗೆ ಇದರ ಲಾಭ ದೊರೆಯಲಿದೆ. ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರು ಅಂದಾಜು 5 ಲಕ್ಷ ಟನ್ ಡಿಎಪಿ ಮತ್ತ ಪಿ-ಕೆ ರಸಗೊಬ್ಬರ ಬಳಸುತ್ತಿದ್ದು, ಈಗ ರಸಗೊಬ್ಬರ ಸಬ್ಸಿಡಿ ಹೆಚ್ಚಿಸಿರುವುದರಿಂದ ರಾಜ್ಯದ ರೈತರಿಗೆ ಕನಿಷ್ಠ ಪಕ್ಷ 700 ಕೋ. ರೂ. ಉಳಿತಾಯ ಆಗಲಿದೆ ಎಂದು ಕೇಂದ್ರ ರಸಗೊಬ್ಬರ ಸಚಿವ ಸದಾನಂದ ಗೌಡ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್ ಬಳಕೆ
ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?
Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು
Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!
Heavy rain: ಮತ್ತೆ 8 ಜಿಲ್ಲೆಗಳಲ್ಲಿ ಭಾರೀ ಮಳೆ; ಸಿಡಿಲಿಗೆ ಮತ್ತೋರ್ವ ಯುವಕ ಸಾವು
MUST WATCH
ಹೊಸ ಸೇರ್ಪಡೆ
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
ಕಾರ್ತಿಕ್ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?
Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ
The Judgement; ಭವಿಷ್ಯ ನಿರ್ಧರಿಸುವ ಜಡ್ಜ್ಮೆಂಟ್: ರವಿಚಂದ್ರನ್
Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್