ವಾಹನ ಚಾಲಕರಿಗೆ ಹಣಕ್ಕಾಗಿ ಕಿರುಕುಳದ ಆರೋಪ : ಇಬ್ಬರು ಪೊಲೀಸ್ ಅಧಿಕಾರಿಗಳು ಅಮಾನತು
Team Udayavani, May 21, 2021, 11:08 PM IST
ವಿಜಯಪುರ: ನಗರದ ಅಥಣಿ ರಸ್ತೆಯಲ್ಲಿ ಸಂಚರಿಸುವ ಸರಕು ಸಾಗಣೆ ವಾಹನಗಳನ್ನು ಅನಗತ್ಯ ನಿಲ್ಲಿಸಿ, ಚಾಲಕರಿಗೆ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಪೊಲೀಸ್ ಇಲಾಖೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದೆ.
ಹೈವೇ ಪ್ಯಾಟ್ರೋಲಿಂಗ್ ವಾಹನದಲ್ಲಿ ಕಾರ್ಯ ನಿರ್ವಹಿಸುವ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಎಸ್ಪಿ ಅನುಪಮ ಅಗರವಾಲ ಅಮಾನತು ಮಾಡಿದ್ದಾರೆ.
ಅಮಾನತು ಆದವರನ್ನು ತಿಕೋಟಾ ಪೊಲೀಸ್ ಠಾಣೆಯ ಎಎಸ್ಐ ಎಂ.ಎಸ್.ವಾಲಿಕಾರ ಹಾಗೂ ವಿಜಯಪುರ ಡಿಎಆರ್ ಘಟಕದ ಎ.ಎಸ್.ಐ ಯು.ಬಿ.ಚಿಗರೊಳ್ಳಿ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ :ಚಿತ್ರದುರ್ಗ ಜಿಲ್ಲೆಯಲ್ಲಿ 21 ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆ
ಈ ಇಬ್ಬರು ಅಧಿಕಾರಿಗಳು ಲಾರಿ ಚಾಲಕರಿಂದ ಹಣ ವಸೂಲಿ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಹೀಗಾಗಿ ಪರಿಶೀಲನೆ ನಡೆಸಿದ ಪೊಲೀಸ್ ಇಲಾಖೆ, ಇಲಾಖಾ ವಿಚಾರಣೆ ಬಾಕಿ ಇರಿಸಿ ಈ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಅಮಾನತು ಕ್ರಮಕೈಗೊಂಡಿದ್ದಾಗಿ ಎಸ್ಪಿ ಅಗರವಾಲ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ