ಸಂಪೂರ್ಣ ಲಾಕ್‌ಡೌನ್‌ಗೆ ಉತ್ತಮ ಪ್ರತಿಕ್ರಿಯೆ


Team Udayavani, May 22, 2021, 9:47 AM IST

ಸಂಪೂರ್ಣ ಲಾಕ್‌ಡೌನ್‌ಗೆ ಉತ್ತಮ ಪ್ರತಿಕ್ರಿಯೆ

ದಾವಣಗೆರೆ: ಮಹಾಮಾರಿ ಕೊರೊನಾ ವೈರಸ್‌ ಹರಡುವಿಕೆ ಸರಪಳಿ ತುಂಡರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಶುಕ್ರವಾರದಿಂದ ಜಾರಿಗೊಳಿಸಿರುವ ಸಂಪೂರ್ಣ ಲಾಕ್‌ಡೌನ್‌ಗೆ ಜಿಲ್ಲಾ ಕೇಂದ್ರ ದಾವಣಗೆರೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕೊರೊನಾ ಕರ್ಫ್ಯೂ ನಿರೀಕ್ಷಿತ ಪ್ರಮಾಣದ ಫಲಿತಾಂಶ ನೀಡದ ಹಿನ್ನೆಲೆ ಮತ್ತು ಸಂಪೂರ್ಣ ಲಾಕ್‌ಡೌನ್‌ಗೆ ಹೆಚ್ಚುತ್ತಿರುವ ಒತ್ತಡದ ಕಾರಣಕ್ಕೆ ಜಿಲ್ಲಾಡಳಿತ ಮೇ 21 ರ ಶುಕ್ರವಾರ ಬೆಳಗ್ಗೆ 10 ರಿಂದ ಮೇ 24ರ ಸೋಮವಾರ ಬೆಳಗ್ಗೆ 6 ರವರೆಗೆ ಸಂಪೂರ್ಣ ಲಾಕ್‌ಡೌನ್‌ ಘೋಷಿಸಿದೆ.

ಮೂರು ದಿನ ಸಂಪೂರ್ಣ ಲಾಕ್‌ಡೌನ್‌ ಕಾರಣಕ್ಕೆ ಜನರು ಶುಕ್ರವಾರ ಬೆಳಗ್ಗೆ 6 ರಿಂದ 10ರ ವರೆಗೆ ಅಗತ್ಯ ವಸ್ತುಗಳನ್ನು ಮುಗಿ ಬಿದ್ದು ಖರೀದಿಸಿದರು. ಕೆ.ಆರ್‌. ಮಾರ್ಕೆಟ್‌, ಗಡಿಯಾರ ಕಂಬದ ರಸ್ತೆ,ವಿಜಯಲಕ್ಷ್ಮಿ ರಸ್ತೆ, ಚೌಕಿಪೇಟೆ, ಚಾಮರಾಜಪೇಟೆ,ಮಂಡಿಪೇಟೆ, ವಿನೋಬ ನಗರ 2 ಮತ್ತು 3ನೇ ಮುಖ್ಯ ರಸ್ತೆ, ನಿಟುವಳ್ಳಿ, ವಿದ್ಯಾನಗರ,ಆಂಜನೇಯ ಬಡಾವಣೆ, ತರಳಬಾಳು ಬಡಾವಣೆಹೀಗೆ ಅನೇಕ ಕಡೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಜನಸಂದಣಿ, ವಾಹನ ಸಂಚಾರ ಹೆಚ್ಚಾಗಿರುವುದು ಸಾಮಾನ್ಯವಾಗಿತ್ತು.

ಇನ್ನು ಮೂರು ದಿನ ತರಕಾರಿ ದೊರೆಯುವುದಿಲ್ಲಎಂದು ಜನರು ತರಕಾರಿ ಖರೀದಿಗೆ ಹೆಚ್ಚಿನ ಗಮನನೀಡಿದರ ಪರಿಣಾಮ ಕೆಲವಾರು ಅಂಗಡಿಗಳಲ್ಲಿಕೆಲ ಹೊತ್ತಿನಲ್ಲೇ ತರಕಾರಿ ಖಾಲಿ ಖಾಲಿ. ಹಾಲಿನಕೇಂದ್ರ ತೆರೆಯಲು ಅವಕಾಶವಿದ್ದರೂ ಕೆಲವಾರು ಕಡೆ ಹಾಲಿನ ಕೇಂದ್ರಗಳು ಬಂದ್‌ ಆಗಿದ್ದವು. ಸೋಮವಾರದವರೆಗೆ ಮಾಂಸ, ಮೀನು ಮಾರಾಟಕ್ಕೆ ಅವಕಾಶ ಇಲ್ಲದ ಕಾರಣಕ್ಕೆ ವಿನೋಬ ನಗರ 2ನೇ ಮುಖ್ಯ ರಸ್ತೆ, ಕೆಟಿಜೆ ನಗರ, ಡಾಂಗೇಪಾರ್ಕ್‌, ಭಾರತ್‌ ಕಾಲೋನಿ, ಹೊಂಡದ ವೃತ್ತ,ಹಗೇದಿಬ್ಬ ವೃತ್ತ ಇತರೆ ಭಾಗದಲ್ಲಿ ಮಾಂಸದ ಅಂಗಡಿಗಳ ಮುಂದೆ ಜನಸಂದಣಿ ಕಂಡು ಬಂತು. ಅಗತ್ಯ ವಸ್ತುಗಳ ಖರೀದಿ ಸಮಯ ಮುಗಿದ ನಂತರವೂ ಜನರು ಅಲ್ಲಲ್ಲಿ ಅಂಗಡಿಗಳಿಗೆ ಎಡತಾಕುವುದು ನಡೆಯುತ್ತಲೇ ಇತ್ತು.

ಹೆಚ್ಚು ವಾಹನ, ಜನರ ಸಂಚಾರದಿಂದ ಕೆಲ ಭಾಗದಲ್ಲಿ ಟ್ರಾಫಿಕ್‌ ಜಾಮ್‌ ಸಹ ಆಗಿತ್ತು.ಅಗತ್ಯ ವಸ್ತುಗಳ ಖರೀದಿ ನೀಡಲಾಗಿದ್ದ ಸಮಯದ ನಂತರ ಪೊಲೀಸರು ಮತ್ತು ನಗರಪಾಲಿಕೆ ಅಧಿಕಾರಿಗಳು ಫೀಲ್ಡ್‌ಗೆ ಇಳಿದರು. ವಿನಾಕಾರಣ ಓಡಾಡದಂತೆ ಸೂಚನೆ ನೀಡಿದರು. ಕೆಲವರಿಗೆ ಎಚ್ಚರಿಕೆ ನೀಡಿದರು. ಪೊಲೀಸರು ಕೆಲವರಿಗೆ ಬಿಸಿ ಮುಟ್ಟಿಸಿದರು.

ದಾವಣಗೆರೆಯ ಪ್ರಮುಖ ವೃತ್ತ, ರಸ್ತೆಗಳ ಬಂದ್‌ ಮಾಡಲಾಗಿತ್ತು. ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ ಲಾಕ್‌ಡೌನ್‌ ನಡುವೆಯೂ ಸಂಚರಿಸುತ್ತಿದ್ದ ವಾಹನ ಸವಾರರ ತಡೆದು, ಕಾರಣ ಕೇಳಿದರು. ಸಕಾರಣ ಇಲ್ಲದೆ ಓಡಾಡುತ್ತಿದ್ದವರಿಗೆ ದಂಡ ವಿಧಿಸಿದರು.ಅನೇಕ ವಾಹನಗಳನ್ನು ವಶಕ್ಕೆ ಪಡೆದು, ಜಿಲ್ಲಾಕವಾಯತ್‌ ಮೈದಾನಕ್ಕೆ ರವಾನಿಸಿದರು. ಔಷಧಿ ಅಂಗಡಿ, ಆಸ್ಪತ್ರೆಗಳನ್ನ ಹೊರತುಪಡಿಸಿದರೆದಿನಸಿ, ತರಕಾರಿ, ಎಲೆಕ್ಟ್ರಿಕಲ್‌, ಹೋಟೆಲ್‌, ಗ್ಯಾರೇಜ್‌, ಸಲೂನ್‌, ಬ್ಯೂಟಿಪಾರ್ಲರ್‌, ಸ್ಪಾ,ವಾಣಿಜ್ಯ ಸಂಕೀರ್ಣ, ಆಟೋ ಸಂಚಾರ ಎಲ್ಲವೂ ಬಂದ್‌ ಆಗಿದ್ದವು. ಹೋಟೆಲ್‌ಗ‌ಳಲ್ಲಿ ಆನ್‌ಲೈನ್‌ಪಾರ್ಸೆಲ್‌, ಕೃಷಿ ಚಟುವಟಿಕೆಗೆ ಮಾತ್ರ ಅವಕಾಶ ಇತ್ತು. ಜನ, ವಾಹನ ಸಂಚಾರ ಇಲ್ಲದೆ ಪ್ರಮುಖ ರಸ್ತೆ, ವೃತ್ತಗಳು ಬಿಕೋ ಎನ್ನುತ್ತಿದ್ದವು. ಸಮಯಕಳೆಯುತ್ತಿದ್ದಂತೆ ವಾಣಿಜ್ಯ ನಗರಿ ದಾವಣಗೆರೆ ಅಕ್ಷರಶಃ ಸ್ತಬ್ದವಾಯಿತು. ಸಂಪೂರ್ಣ ಲಾಕ್‌ಡೌನ್‌ ನ ಮೊದಲ ದಿನ ಯಶಸ್ವಿಯಾಯಿತು.

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.