ಹಲಸನ್ನು ಕಡಿಮೆ ಬೆಲೆಗೆ ಮಾರುವ ಸ್ಥಿತಿ


Team Udayavani, May 22, 2021, 4:08 PM IST

covid effect at bangalore

ದೊಡ್ಡಬಳ್ಳಾಪುರ: ಕೊರೊನಾ ಲಾಕ್‌ಡೌನ್‌ ಪರಿಣಾಮ ಹಲಸು ಮಾರಾಟದ ಮೇಲೂ ಬಿದ್ದಿದ್ದು,ತಾಲೂಕಿನಲ್ಲಿ ಹಲಸು ಕೊಳ್ಳುವವರಿಲ್ಲದೇ ರೈತರುತಂದಿರುವ ಹಲಸನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವ ಸ್ಥಿತಿ ನಿರ್ಮಾಣವಾಗಿದೆ.

ಬೆಂಗಳೂರು ಹಿಂದೂಪುರ ಹೆದ್ದಾರಿಯ ನಗರದಹೊರವಲಯದ ಟಿ.ಬಿ ವೃತ್ತದ ಬಳಿಯ ರಸ್ತೆಯಬದಿಯಲ್ಲಿ ಪ್ರತಿವರ್ಷ ಹಲಸಿನ ಸೀಸನ್‌ನಲ್ಲಿ ಹಲಸಿನ ಹಣ್ಣುಗಳ ರಾಶಿ ಕಾಣುತ್ತಿತ್ತು, ಆದರೆ ಈ ಬಾರಿಫಸಲು ಬಂದಿದ್ದರೂ ಮಾರಾಟದ ಭರಾಟೆ ಕಾಣುತ್ತಿಲ್ಲ. ತಾಲೂಕಿನಲ್ಲಿ ಕೊರೊನಾ ಹಿನ್ನೆಲೆಯಲ್ಲಿ ಮಾರಾಟಕ್ಕೆ ತೊಡಕಾಗಿದ್ದು, 10 ಗಂಟೆಯ ನಂತರ ಇಲ್ಲಿಮಾರಾಟ ಮಾಡಲು ಪೊಲೀಸರು ಅವಕಾಶ ನೀಡುತ್ತಿಲ್ಲ ಎಂದುಹಲಸು ಮಾರಾಟಗಾರರು ದೂರುತ್ತಾರೆ.

ತೂಬಗೆರೆ ಹೋಬಳಿ ಹಲಸು ಹೆಸರುವಾಸಿ,ಇದರೊಂದಿಗೆ ಕಸಬಾ ದೊಡ್ಡಬೆಳವಂಗಲ ಹೋಬಳಿಗಳಲ್ಲಿಯೂ ಹಲಸು ಬೆಳಯುತ್ತಾರೆ. ಹಲಸಿನಹಣ್ಣುಗಳು ಗಾತ್ರಕನ್ನನುಗುಣವಾಗಿ 50 ರಿಂದ 100ರೂಗಳವರೆಗೆ ಮಾರಾಟವಾಗುತ್ತಿವೆ. ನೆರೆಯ ಆಂಧ್ರಹಾಗೂ ಸುತ್ತಮುತ್ತಲಿನ ತಾಲೂಕುಗಳಿಂದ ಹಲಸನ್ನುಖರೀದಿಸಲು ಆಗಮಿಸುತ್ತಿದ್ದರು.

ಆದರೆ ಕೊರೊನಾಲಾಕ್‌ಡೌನ್‌ ಹಿನ್ನಲೆಯಲ್ಲಿ ಆಂಧ್ರ ಹಾಗೂ ಹೊರಪ್ರದೇಶಗಳಿಂದ ಬರುವವರು ತೀರಾಕಡಿಮೆ ಆಗಿದೆ.

ಸಗಟು ಮಾರಾಟ ಕುಸಿತ: ಹಲಸಿನ ತೋಪುಗಳುಕಡಿಮೆಯಾಗುತ್ತಿದ್ದರೂ ತೋಟಗಳಲ್ಲಿ ಬೆಳಸಿರುವಹಲಸಿನ ಮರಗಳಲ್ಲಿ ಸೀಸನ್‌ನ6ತಂಗಳ ಮುಂಚೆಯೇ ವ್ಯಾಪಾರ ಮಾಡಿ ಅಡ್ವಾನ್ಸ್‌ನೀಡಲಾಗುತ್ತಿತ್ತು.

ಆದರೆ ಈ ಬಾರಿ ಕೊರೊನಾಪರಿಣಾಮ ರೈತರ ತೋಟಗಳಿಗೆ ಅಷ್ಟಾಗಿ ವ್ಯಾಪಾರಮಾಡಿಲ್ಲ. ಪರಿಸ್ಥಿತಿ ನೋಡಿ ಖರೀದಿ ಮಾಡೋಣಎಂದು ಮಾರಾಟಗಾರರು ಮುಂದೂಡಿದ್ದರಿಂದತೋಟಗಳಲ್ಲಿ ಹಣ್ಣುಗಳು ಹಾಗೆಯೇ ಉಳಿಯುತ್ತಿವೆಎನ್ನುತ್ತಾರೆ ಹಲಸು ಬೆಳೆದ ರೈತರು.

ಪ್ರತಿವರ್ಷ ರೈತರ ತೋಟದಲ್ಲಿ ಖರೀದಿಸುತ್ತಿದ್ದೇವೆ.ಒಂದು ಹುಂಡಿಗೆ (ಗುಡ್ಡೆ) ಸುಮಾರು 100ರಿಂದ200 ಕಾಯಿಗಳು ಇರುತ್ತವೆ. ಸಾಮಾನ್ಯವಾಗಿಕಾಯಿಗಳ ಗಾತ್ರದ ಮೇಲೆ ಹುಂಡಿಗೆ2 ಸಾವಿರದಿಂದ5 ಸಾವಿರದವರೆಗೆ ಬೆಲೆ ಇರುತ್ತದೆ. ಆದರೆ ಈ ಬಾರಿ ಕೊರೊನಾ ಪರಿಣಾಮದಿಂದ ಬೆಲೆ ಕಡಿಮೆಯಾಗಿದ್ದು, ನಾವು ಖರೀದಿಸಿ ಅಡ್ವಾನ್ಸ್‌ ನೀಡಿದ್ದ 150 ಮರಗಳಫಸಲನ್ನು ಮಾರಾಟ ಮಾಡುವುದು ಹೇಗೆ ಎಂಬಚಿಂತೆ ಎದುರಾಗಿದೆ ಎನ್ನುತ್ತಾರೆ ಮಾರಾಟಗಾರರು.

ತೋಟಗಳಲ್ಲಿ ಕಾಯಿ ಕೀಳಲು ಕೂಲಿಕಾರರಸಮಸ್ಯೆ ಎದುರಾಗಿದೆ. ಆಂಧ್ರಕ್ಕೆ ನಾವೇ ವಾಹನದಲ್ಲಿ ಹೋಗಿ ಮಾರಾಟ ಮಾಡಲು ಸಿದ್ದರಾದರೂ ಈಗಿನ ಸಂದರ್ಭದಲ್ಲಿ ಅವರು ಕೇಳಿದ ಬೆಲೆಗೆ ನಾವು ಮಾರಾಟ ಮಾಡಿ ಬರಬೇಕಿದೆ ಎನ್ನುತ್ತಾರೆ ಹಲಸು ಮಾರಾಟಗಾರ ನೆಲ್ಲುಕುಂಟೆ ಮಂಜುನಾಥ್‌.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.