ಬಂಕ್‌ನಲ್ಲಿ  ಡೀಸೆಲ್‌-ಪೆಟ್ರೋಲ್‌ ಅದಲು-ಬದಲು

­ನಲ್ವತ್ತಕ್ಕೂ ಅಧಿಕ ಬೈಕ್‌ಗಳ ಎಂಜಿನ್‌ ಸೀಜ್‌ ! ­ತಪ್ಪೊಪ್ಪಿಕೊಂಡ ಬಂಕ್‌ ಮಾಲಿಕ

Team Udayavani, May 22, 2021, 10:55 PM IST

21byd5b

ಬ್ಯಾಡಗಿ: ಡೀಸೆಲ್‌ ಟ್ಯಾಂಕ್‌ನಲ್ಲಿ ಪೆಟ್ರೋಲ್‌ ಮತ್ತು ಪೆಟ್ರೋಲ್‌ ಟ್ಯಾಂಕ್‌ನಲ್ಲಿ ಡೀಸೆಲ್‌ ಅನ್‌ಲೋಡ್‌ ಮಾಡುವ ಮೂಲಕ ಗ್ರಾಹಕರನ್ನು ಪೇಚಿಗೆ ಸಿಲುಕಿಸಿದ ಘಟನೆ ಪಟ್ಟಣದ ಹೊರವಲಯ(ಮೋಟೆಬೆನ್ನೂರ ರಸ್ತೆಯಲ್ಲಿ)ದಲ್ಲಿರುವ ನೇತ್ರಾವತಿ ಬಂಕ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕಳೆದ ಮೂರು ದಿನಗಳ ಹಿಂದಷ್ಟೇ ತಮ್ಮದೇ ಸ್ವಂತ ಟ್ಯಾಂಕರ್‌ನ ಎರಡು ಕಂಪಾರ್ಟ್‌ಮೆಂಟ್‌ ನಲ್ಲಿ ಪೆಟ್ರೋಲ್‌, ಇನ್ನೆರಡು ಕಂಪಾರ್ಟ್‌ಮೆಂಟ್‌ ಗಳಲ್ಲಿ ಡೀಸೆಲ್‌ ಮತ್ತು ಪೆಟ್ರೋಲ್‌ ತುಂಬಿಕೊಂಡು ಬರಲಾಗಿತ್ತು. ಆದರೆ, ರಾತ್ರಿ ವೇಳೆ ಅನ್‌ಲೋಡ್‌ ಮಾಡುವ ಸಂದರ್ಭದಲ್ಲಿ ಡೀಸೆಲ್‌ ಟ್ಯಾಂಕ್‌ನಲ್ಲಿ ಪೆಟ್ರೋಲ್‌ ಮತ್ತು ಪೆಟ್ರೋಲ್‌ ಟ್ಯಾಂಕ್‌ನಲ್ಲಿ ಡೀಸೆಲ್‌ ಅನ್‌ಲೋಡ್‌ ಮಾಡಿದ್ದೇ ಘಟನೆಗೆ ಕಾರಣವೆಂದು ತಿಳಿದು ಬಂದಿದೆ. ನಲ್ವತ್ತಕ್ಕೂ ಅಧಿಕ ಬೈಕ್‌ಗಳ ಎಂಜಿನ್‌ ಸೀಜ್‌: ಡೀಸೆಲ್‌ ಮತ್ತು ಪೆಟ್ರೋಲ್‌ ಅದಲಿ ಬದಲಿಯಾದ ಘಟನೆ ಮಾಲೀಕರು ಗಮನಕ್ಕೂ ಸಹ ಬಂದಿರುವುದಿಲ್ಲ. ಆದರೆ, ಪೆಟ್ರೋಲ್‌ ಅಂತಾ ತಿಳಿದು ಡಿಸೇಲ್‌ ಹಾಕಿಸಿಕೊಂಡ ಬೈಕ್‌ ಸವಾರರು ಎರಡೂ¾ರು ಕಿ.ಮೀ.ಗಳಷ್ಟು ಓಡಿಸಿದ ಬಳಿಕ ಬಹಳಷ್ಟು ಬೈಕ್‌ ಗಳು ಇದ್ದಕ್ಕಿದ್ದಂತೆ ಸೀಜ್‌ ಆಗಿವೆ. ಸೀಜ್‌ ಆದ ಬೈಕ್‌ ಮಾಲಿಕರು ವಿಷಯವನ್ನು ಪೆಟ್ರೋಲ್‌ ಬಂಕ್‌ನವರ ಗಮನಕ್ಕೆ ತಂದಿದ್ದಾರೆ.

ಆಗ ಪರಿಶೀಲಿಸಿದಾಗ ಬೈಕ್‌ ನಲ್ಲಿ ಡೀಸೆಲ್‌ ಭರ್ತಿಯಾಗಿದ್ದು ದೃಢವಾಗಿದೆ. ಅಧಿಕಾರಿಗಳ ಭೇಟಿ: ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಆಹಾರ ಮತ್ತು ನಾಗರಿಕ, ಗ್ರಾಹಕರ ವ್ಯವಹಾರಗಳ ಇಲಾಖೆ ಜಿಲ್ಲಾ ಉಪನಿರ್ದೇಶಕ ವಿನೋದ್‌ ಕುಮಾರ್‌ ಹೆಗ್ಗಳಗಿ, ಬಿಪಿಸಿಎಲ್‌ ಅ ಧಿಕಾರಿಯೊಂದಿಗೆ ಸುಮಾರು 2 ಗಂಟೆಗೂ ಹೆಚ್ಚು ಕಾಲ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಎರಡೂ ಟ್ಯಾಂಕ್‌ ಗಳಲ್ಲಿ ತೈಲ ಅದಲಿ ಬದಲಿಯಾಗಿದ್ದು ದೃಢಪಟ್ಟಿದೆ. ತಪ್ಪೊಪ್ಪಿಕೊಂಡ ಬಂಕ್‌ ಮಾಲಿಕ: ಘಟನೆ ಕುರಿತು ನೇತ್ರಾವತಿ ಬಂಕ್‌ ಮಾಲಿಕ ತಪ್ಪೊಪ್ಪಿಕೊಂಡಿದ್ದಾರೆ. ಘಟನೆಯಿಂದ ನನ್ನ ಮನಸ್ಸಿಗೆ ನೋವಾಗಿದೆ. ಆದರೆ, ಇದು ಉದ್ದೇಶಪೂರ್ವಕವಾಗಿ ಮಾಡಿದ್ದಲ್ಲ. ಘಟನೆಯಿಂದ ಹಾನಿಯಾದ ದ್ವಿಚಕ್ರ ವಾಹನಗಳ ದುರಸ್ತಿ ವೆಚ್ಚ ಭರಿಸುವುದಾಗಿ ಅ ಧಿಕಾರಿಗಳಿಗೆ ಭರವಸೆ ನೀಡಿದರು. ನೋಟಿಸ್‌ ಜಾರಿ: ಈ ವೇಳೆ ಬಂಕ್‌ ಮಾಲಿಕರಿಗೆ ಲಿಖೀತ ನೋಟಿಸ್‌ ನೀಡಿದ ಅಧಿಕಾರಿಗಳು, ಎರಡೂ ಟ್ಯಾಂಕ್‌ಗಳನ್ನು ಸ್ವತ್ಛಗೊಳಿಸುವವರೆಗೆ ಹಾಗೂ ತೈಲ ನಿಗಮದ ಅಧಿಕಾರಿಗಳು ಸೂಚನೆ ನೀಡುವವರೆಗೂ ಬಂಕ್‌ ಯಾವುದೇ ಕಾರಣಕ್ಕೆ ಆರಂಭಿಸಿದಂತೆ ಸೂಚನೆ ನೀಡಿ ತೆರಳಿದರು. ಸ್ಥಳೀಯ ಆಹಾರ ನಿಗಮದ ಅಧಿಕಾರಿ ದೊಡ್ಮನಿ ಇನ್ನಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.