ಚಾಂದಿವಲಿಯಲ್ಲಿ ಮಕ್ಕಳ ಕೋವಿಡ್‌ ಕೇರ್‌ ಸೆಂಟರ್‌ ಪ್ರಾರಂಭ


Team Udayavani, May 23, 2021, 12:50 PM IST

Opening of the Children’s covid Care Center

ಮುಂಬಯಿ: ನಗರದ ಕೆ -ವೆಸ್ಟ್‌ ವಾರ್ಡ್‌ ಕೋವಿಡ್‌ ಮೂರನೇ ಅಲೆ ಎದುರಿಸಲು ತಯಾರಿ ಪ್ರಾರಂಭಿಸಿದ್ದು, ಮಕ್ಕಳಿಗೆ ಸಾಕಷ್ಟು ಹಾಸಿಗೆಗಳು ಲಭ್ಯವಿದೆಯೆ ಎಂದು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಮಕ್ಕಳನ್ನು ಪಾಲಕರಿಲ್ಲದೆ ದೀರ್ಘ‌ಕಾಲ ಪ್ರತ್ಯೇಕವಾಗಿರಿಸುವುದು ಕಷ್ಟವಾಗುವುದರಿಂದ ವಾರ್ಡ್‌ ಅಧಿಕಾರಿಗಳು ಎನ್‌ಜಿಒ ಡಾಕ್ಟರ್ಸ್‌ ಫಾರ್‌ ಯು ಸಂಸ್ಥೆಯ ಜತೆಗೆ ಮಕ್ಕಳಿಗೆ ಆಟದ ಪ್ರದೇಶಗಳು ಮತ್ತು ಪೋಷಕರಿಗೆ ಹಾಸಿಗೆಗಳನ್ನು ಸ್ಥಾಪಿಸಿದ್ದಾರೆ.

ಕೆ-ವೆಸ್ಟ್‌ ವಾರ್ಡ್‌ ತನ್ನ ಕೋವಿಡ್‌ ಕೇರ್‌ ಸೆಂಟರ್‌ 2 ಅನ್ನು ಚಾಂದಿವಲಿಯ ಎಸ್‌ಆರ್‌ಎ ಕಟ್ಟಡವೊಂದರಲ್ಲಿ ಪ್ರಾರಂಭಿಸಿದೆ. ಇದು 700 ಹಾಸಿಗೆಗಳೊಂದಿಗೆ 280 ಕೊಠಡಿಗಳನ್ನು ಹೊಂದಿದೆ. ಆರಂಭದಲ್ಲಿ ಕೇಂದ್ರವು ಪ್ರತ್ಯೇಕತೆ ಮತ್ತು ಸೌಮ್ಯ ರೋಗ ಲಕ್ಷಣಗಳನ್ನು ಹೊಂದಿರುವ ರೋಗಿಗಳಿಗೆ ಮಾತ್ರ ವ್ಯವಸ್ಥೆಗೊಳಿಸಿದ್ದು, ಇದು ಯಾವುದೇ ಆಮ್ಲಜನಕ ಸೌಲಭ್ಯವನ್ನು ಹೊಂದಿರಲಿಲ್ಲ, ಆದರೆ 2ನೇ ಅಲೆ ಸಮಯದಲ್ಲಿ ನಾವು ಆಮ್ಲಜನಕ ಹಾಸಿಗೆಗಳನ್ನು ಸೇರಿಸಿದ್ದೇವೆ. ನಾವು ಈಗಾಗಲೇ ಮೂರನೇ ಅಲೆಗೆ ತಯಾರಿ ಪ್ರಾರಂಭಿಸಿದ್ದೇವೆ. ಮಕ್ಕಳ ಕೊಠಡಿಗಳತ್ತ ಹೆಚ್ಚು ಗಮನ ಹರಿಸುತ್ತಿದ್ದೇವೆ ಎಂದು ಕೆ-ವೆಸ್ಟ್‌ ವಾ ರ್ಡ್‌ನ ಸಹಾಯಕ ಆಯುಕ್ತ ವಿಶ್ವಾಸ್‌ ಮೋಟೆ ಹೇಳಿದರು.

ನಾವು 140 ಹಾಸಿಗೆಗಳನ್ನು ಮಕ್ಕಳಿಗಾಗಿ ಪರಿವರ್ತಿಸಿದ್ದೇವೆ. ಈ ಪೈಕಿ 40 ಅನ್ನು ಈಗಾಗಲೇ ತೆರೆಯಲಾಗಿದೆ, ಉಳಿದವುಗಳು ಅಗತ್ಯವಿದ್ದಾಗ ಮತ್ತು ಕಾರ್ಯನಿರ್ವಹಿಸಲಿವೆ ಎಂದು ಮೋಟೆ ಹೇಳಿದ್ದಾರೆ. ಇಲ್ಲಿಯವರೆಗೆ ದೇಶಾದ್ಯಂತ 10,000 ಕ್ಕೂ ಹೆಚ್ಚು ವೈದ್ಯರು ಮತ್ತು ಅರೆವೈದ್ಯಕೀಯ ಸಿಬಂದಿಯನ್ನು ಸಂಸ್ಥೆ ಒದಗಿಸಿದ್ದು, ಮುಂಬಯಿಯಲ್ಲಿ ವೈದ್ಯರ ಕೊರತೆ ಇರುವುದರಿಂದ, ಕೇರಳ ಮತ್ತು ಆಂಧ್ರಪ್ರದೇಶ ಸೇರಿದಂತೆ ಇತರ ರಾಜ್ಯಗಳಿಂದ ನಮಗೆ ಸಿಬಂದಿ ಸಿಕ್ಕಿದ್ದಾರೆ ಎಂದು ಆಯುಕ್ತ ವಿಶ್ವಾಸ್‌ ಮೋಟೆ ಹೇಳಿದರು.

ಕೆ-ವೆಸ್ಟ್‌ ವಾರ್ಡ್‌ನಲ್ಲಿ 21 ವೈದ್ಯರು, 57 ಅರೆವೈದ್ಯಕೀಯ ಸಿಬಂದಿ ಮತ್ತು 12 ನೈರ್ಮಲ್ಯ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ ಎಂದು ಡಾಕ್ಟರ್ಸ್‌ ಫಾರ್‌ ಯು ಕಾರ್ಯದರ್ಶಿ ಡಾ| ಸಂಕೇತ್‌ ಶಾ ಹೇಳಿದರು. ಮಕ್ಕಳಿಗೆ ವಿಶೇಷ ಗಮನ ಬೇಕು, ಅವರ ಪೋಷಕರು ಇಲ್ಲದೆ ನಾವು ಅವರನ್ನು ದೀರ್ಘ‌ಕಾಲ ಪ್ರತ್ಯೇಕವಾಗಿಡಲು ಸಾಧ್ಯವಿಲ್ಲ, ಆದ್ದರಿಂದ ನಾವು ಪೋಷಕರಿಗೆ ಆಟದ ಪ್ರದೇಶಗಳು ಮತ್ತು ಹಾಸಿಗೆಗಳನ್ನು ಸ್ಥಾಪಿಸಿದ್ದೇವೆ ಎಂದು ಶಾ ಹೇಳಿದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.