ಬ್ಲ್ಯಾಕ್ ಫಂಗಸ್ 7000 ಕೋವಿಡ್ ಸೋಂಕಿತರನ್ನು ಬಲಿ ತೆಗೆದುಕೊಂಡಿದೆ : ಡಾ. ರಣದೀಪ್ ಗುಲೇರಿಯಾ

ಬ್ಲ್ಯಾಕ್ ಫಂಗಸ್ ಕೋವಿಡ್ ಗಿಂತ ಮಾರಕವಾಗಿ ಕಾಣಿಸಿಕೊಳ್ಳುತ್ತಿದೆ : ಡಾ. ರಣದೀಪ್ ಗುಲೇರಿಯಾ

ಶ್ರೀರಾಜ್ ವಕ್ವಾಡಿ, May 23, 2021, 3:31 PM IST

Black fungus becoming as deadlier as COVID! ‘Has claimed more than 7000 lives so far’, says AIIMS Delhi chief Randeep Guleria

ಪ್ರಾತಿನಿಧಿಕ ಚಿತ್ರ

ನವ ದೆಹಲಿ : ಭಾರತದಲ್ಲಿ ಕೋವಿಡ್ ಸೋಂಕಿನ ಅಲೆ ಎರಡನೇ ಅಲೆ ದೇಶದಲ್ಲಿ ಆತಂಕವನ್ನು ಹುಟ್ಟಿ ಹಾಕಿದ ಬೆನ್ನಿಗೆ ಬ್ಯಾಕ್ ಫಂಗಸ್ ಭೀತಿ ಹುಟ್ಟಿಸಿದೆ.

“ಬ್ಲ್ಯಾಕ್ ಫಂಗಸ್ ದೇಶದಲ್ಲಿ ಸುಮಾರು 7,000 ಕ್ಕೂ ಹೆಚ್ಚು ಕೋವಿಡ್ 19 ಸೋಂಕಿತರನ್ನು ಬಲಿ ತೆಗೆದುಕೊಂಡಿದೆ.” ಎಂದು ಏಮ್ಸ್ ದೆಹಲಿಯ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಅವರು ನೀಡಿರುವ ಹೇಳಿಕೆಯನ್ನು ಸುದ್ದಿ ಸಂಸ್ಥೆ ಎ ಎನ್‌ ಐ ವರದಿ ಮಾಡಿದೆ.

ದೇಶದಲ್ಲಿ ಸಧ್ಯದ ಮಟ್ಟಿಗೆ ಸುಮಾರು 8,848 ಮ್ಯೂಕೋರ್ಮೈಕೋಸಿಸ್ ಪ್ರಕರಣಗಳು ಇವೆ ಎಂದು ಇಂಡೋ‑ಏಷ್ಯನ್ ನ್ಯೂಸ್ ಸರ್ವಿಸ್ ಹೇಳಿದೆ.

ಇದನ್ನೂ ಓದಿ : ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಮತ್ತೊಬ್ಬ ಶಿಕ್ಷಕಿ ಕೋವಿಡ್ ಸೋಂಕಿನಿಂದ ಸಾವು

ಇನ್ನು, ಸದ್ಯಕ್ಕೆ ಗುಜರಾತ್‌ನಲ್ಲಿ ಗರಿಷ್ಠ 2,281 ಮ್ಯೂಕೋರ್ಮೈಕೋಸಿಸ್ ಪ್ರಕರಣಗಳು ವರದಿಯಾಗಿದ್ದು, ಮಹಾರಾಷ್ಟ್ರದಲ್ಲಿ 2,000, ಆಂಧ್ರಪ್ರದೇಶದಲ್ಲಿ 910, ಮಧ್ಯಪ್ರದೇಶದಲ್ಲಿ 720, ರಾಜಸ್ಥಾನದಲ್ಲಿ 700, ಕರ್ನಾಟಕದಲ್ಲಿ 5,00, ಹರಿಯಾಣದಲ್ಲಿ 250, ದೆಹಲಿಯಲ್ಲಿ 197, ಪಂಜಾಬ್ ನಲ್ಲಿ 95, ಛತ್ತೀಸ್ ಘಡದಲ್ಲಿ 87, ಬಿಹಾರದಲ್ಲಿ 56, ತಮಿಳುನಾಡಿನಲ್ಲಿ 40, ಕೇರಳದಲ್ಲಿ 36, ಜಾರ್ಖಂಡ್ ನಲ್ಲಿ 27, ಒಡಿಶಾದಲ್ಲಿ 15, ಗೋವಾದಲ್ಲಿ 12 ಮತ್ತು ಚಂಡೀಗಡ 8 ಮ್ಯೂಕೋರ್ಮೈಕೋಸಿಸ್ ಪ್ರಕರಣಗಳು ಪತ್ತೆಯಾಗಿವೆ.

ಏತನ್ಮಧ್ಯೆ, ದೇಶದಲ್ಲಿ ಕನಿಷ್ಠ 219 ಮಂದಿ ಈವರೆಗೆ ಕಪ್ಪು ಶಿಲೀಂಧ್ರ ಅಥವಾ ಬ್ಲ್ಯಾಕ್ ಫಂಗಸ್ ನಿಂದ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.  ಆದರೇ, ಕಪ್ಪು ಶಿಲೀಂಧ್ರದಿಂದ ಸಾವನ್ನಪ್ಪಿದವರ ಬಗ್ಗೆ ಇನ್ನೂ ಅಧಿಕೃತ ಅಂಕಿ ಅಂಶಗಳಿಲ್ಲ.

ಇದನ್ನೂ ಓದಿ : ದೆಹಲಿಯಲ್ಲಿ ಲಾಕ್ಡೌನ್ ವಿಸ್ತರಣೆ : ಮಾರ್ಗಸೂಚಿ ಸರಿಯಾಗಿ ಪಾಲಿಸಿದರೇ ಅನ್ಲಾಕ್ : ಕೇಜ್ರಿವಾಲ್

ಕಪ್ಪು ಶಿಲೀಂಧ್ರ ಎಂದರೇನು?

‘ಕಪ್ಪು ಶಿಲೀಂಧ್ರ’ ಅಥವಾ ‘ಮ್ಯೂಕೋರ್ಮೈಕೋಸಿಸ್’ ಎಂಬುದು ಅಪರೂಪದ ಶಿಲೀಂಧ್ರಗಳ ಸೋಂಕು, ಇದು ಮ್ಯೂಕರ್ ಎಂಬ ಶಿಲೀಂಧ್ರದಿಂದ ಉಂಟಾಗುತ್ತದೆ, ಇದು ಆರ್ದ್ರ ಮೇಲ್ಮೈಗಳಲ್ಲಿ ಕಂಡುಬರುತ್ತದೆ. ಸಣ್ಣ ಕರುಳಿನ ಮ್ಯೂಕಾರ್ಮೈಕೋಸಿಸ್ ನ ಅಪರೂಪದ ಪ್ರಕರಣಗಳು ಇತ್ತೀಚೆಗೆ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ವರದಿಯಾಗಿವೆ.

ಕಪ್ಪು ಶಿಲೀಂಧ್ರವನ್ನು ಸಾಮಾನ್ಯ ಲಕ್ಚಣಗಳು ಯಾವುವು..?

ಮೂಗಿನ ರಕ್ತಸ್ರಾವ, ಕಪ್ಪ ಬಣ್ಣದ ಅಸಹಜ ಸ್ರಾವ, ಮೂಗಿನ ದಟ್ಟಣೆ, ತಲೆ ಮತ್ತು ಕಣ್ಣಿನ ನೋವು, ಕಣ್ಣುಗಳ ಬಳಿ ಬೆವರುವುದು, ದೃಷ್ಟಿ ಮಂದವಾಗುವುದು, ಕೆಂಪು ಕಣ್ಣುಗಳು, ಕಡಿಮೆ ಗೋಚರತೆ, ಕಣ್ಣು ತೆರೆಯಲು ಮತ್ತು ಮುಚ್ಚಲು ತೊಂದರೆಯಾಗುವುದು, ಮುಖದ ಮೇಲೆ ಮರಗಟ್ಟುವಿಕೆ ಅಥವಾ ಜುಮ್ಮೆನಿಸುವಿಕೆ ಭಾವನೆ, ಬಾಯಿ ತೆರೆಯುವಲ್ಲಿ ಅಥವಾ ಏನನ್ನಾದರೂ ಅಗಿಯುವಲ್ಲಿ ತೊಂದರೆ, ಹಲ್ಲುನೋವು ಉಂಟಾಗುವುದು ಇತ್ಯಾದಿ ಕಪ್ಪು ಶಿಲೀಂಧ್ರ ಅಥವಾ ಬ್ಲ್ಯಾಕ್ ಫಂಗಸ್ ನ ಪ್ರಮುಖ ಲಕ್ಷಣಗಳು.

ಸ್ಟೀರಾಯ್ಡ್ ಗಳನ್ನು ಚಿಕಿತ್ಸೆಗೆಂದು ನೀಡುತ್ತಿದ್ದ ಕೋವಿಡ್ 19 ಸೋಂಕಿತರಲ್ಲಿ ಮತ್ತು ವಿಶೇಷವಾಗಿ ಮಧುಮೇಹ ಮತ್ತು ಕ್ಯಾನ್ಸರ್ ನಿಂದ ಬಳಲುತ್ತಿರುವವರಲ್ಲಿ ಮ್ಯೂಕೋರ್ಮೈಕೋಸಿಸ್ ಪ್ರಕರಣಗಳು ಕಂಡುಬರುತ್ತಿವೆ ಎಂದು ತಜ್ಞ ವೈದ್ಯರು ಮಾಹಿತಿ ನೀಡಿದ್ದಾರೆ.

ಕಪ್ಪು ಶಿಲೀಂಧ್ರಕ್ಕೆ ಚಿಕಿತ್ಸೆ ನೀಡುವ ಔಷಧಿ..?

ಬ್ಲ್ಯಾಕ್ ಫಂಗಸ್ ಗೆ ಆಂಫೊಟೆರಿಸಿನ್ ಬಿ ಅಥವಾ “ಆಂಫೊ-ಬಿ” ಎಂಬ ಆ್ಯಂಟಿ ಫಂಗಸ್ ಇಂಟ್ರಾವೆನಸ್ ಇಂಜೆಕ್ಷನ್ ನನ್ನು ಚಿಕಿತ್ಸೆಗೆ ನೀಡಲಾಗುತ್ತಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.

ಇನ್ನು, ಆಂಫೊಟೆರಿಸಿನ್-ಬಿ ಲಭ್ಯತೆಯನ್ನು ಹೆಚ್ಚಿಸಲಾಗುತ್ತಿದೆ. ಹೆಚ್ಚುವರಿ ಇಂಜೆಕ್ಶನ್ ಗಳ ಲಭ‍್ಯತೆಗಾಗಿ ಉತ್ಪಾದಕ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ :   ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆ ನಡೆಯುವುದು ಉತ್ತಮ: ಸುರೇಶ್ ಕುಮಾರ್

ಟಾಪ್ ನ್ಯೂಸ್

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.