ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಸೋರಿ­ಕೆ ! ತಪ್ಪಿದ ದುರಂತ

ಸೋರಿಕೆ ಸರಿಪಡಿಸಲಾಗಿದೆ: ಸಹಾಯಕ ಆಯುಕ್ತೆ! ­ಕೆಲ ಸೋಂಕಿತರು ಬೇರೆ ಆಸ್ಪತ್ರೆಗೆ ರವಾನೆ

Team Udayavani, May 23, 2021, 7:30 PM IST

may22srs2

ಶಿರಸಿ: ಜಿಲ್ಲೆಯ ಅತಿ ಹೆಚ್ಚು ರೋಗಿಗಳಿಂದ ಕೂಡಿರುವ ನಗರದ ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಂಬೋ ಸಿಲಿಂಡರ್‌ ಮೂಲಕ ಆಕ್ಸಿಜನ್‌ ಪೂರೈಕೆಯಾಗುವ ಘಟಕದಲ್ಲಿ ಆಕ್ಸಿಜನ್‌ ಸೋರಿಕೆಯಾಗಿ ರೋಗಿಗಳಲ್ಲಿ, ಅಧಿ ಕಾರಿಗಳಲ್ಲಿ ಆತಂಕಕ್ಕೆ ಕಾರಣವಾದ ಘಟನೆ ಶನಿವಾರ ಬೆಳಗಿನ ಜಾವ ನಡೆಯಿತು.

ಸರಕಾರಿ ಆಸ್ಪತ್ರೆಯ ಕೋವಿಡ್‌ ವಾರ್ಡ್‌ನಲ್ಲಿ ದಾಖಲಾಗಿದ್ದ ಕೆಲ ಸೋಂಕಿತರನ್ನು ಸಿದ್ದಾಪುರ, ಮುಂಡಗೋಡ, ಯಲ್ಲಾಪುರ ಸರಕಾರಿ ಆಸ್ಪತ್ರೆಗಳಿಗೆ ಸಾಗಿಸುವ ಮೂಲಕ ಅಧಿ ಕಾರಿಗಳು ಸಮಯಪ್ರಜ್ಞೆ ಮೆರೆದು ಸಂಭವನೀಯ ದುರಂತ ತಪ್ಪಿಸಿದರು. ಉಳಿದವರಿಗೆ ಮುನ್ನೆಚ್ಚರಿಕೆ ಕ್ರಮ ಅನುಸರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಹಾಯಕ ಆಯುಕ್ತೆ ಆಕೃತಿ ಬನ್ಸಾಲ್‌, ಆಕ್ಸಿಜನ್‌ ಲೀಕ್‌ ಆಗುವುದನ್ನು ಸರಿಪಡಿಸಲಾಗುತ್ತಿದೆ. ಯಾವುದೇ ರೀತಿಯಲ್ಲಿ ರೋಗಿಗಳಿಗೆ ಆಕ್ಸಿಜನ್‌ ಕೊರತೆಯಾಗಿಲ್ಲ. ಸುಮಾರು 10 ಸೋಂಕಿತರನ್ನು ಬೇರೆ ತಾಲೂಕು ಆಸ್ಪತ್ರೆಗಳಿಗೆ ಸೇರ್ಪಡೆ ಮಾಡಲಾಗಿದೆ. ಈ ರೀತಿ ಪೈಪ್‌ಲೈನ್‌ನಲ್ಲಿ ಎದುರಾಗುವ ತೊಂದರೆ ದೂರ ಮಾಡಲು ಉಪವಿಭಾಗದ ತಾಲೂಕುಗಳಲ್ಲಿ ಕಾರವಾರದ ನೇವಿ ಟೆಕ್ನಿಶಿಯನ್‌ ಒಬ್ಬರು ಇರಲಿದ್ದಾರೆ ಎಂದರು.

ಪಂಡಿತ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ| ಗಜಾನನ ಭಟ್ಟ ಮಾತನಾಡಿ, ನೇರವಾಗಿ ಆಕ್ಸಿಜನ್‌ ಸಿಲಿಂಡರ್‌ ಪೈಪ್‌ಲೈನ್‌ಗೆ ನೀಡಲು ಆಗುವುದಿಲ್ಲ. ಒತ್ತಡ ಕಡಿಮೆ ಮಾಡಲು ಪ್ರತ್ಯೇಕ ಸಿಸ್ಟಮ್‌ ಇರುತ್ತದೆ. ಇದರ ಪ್ರೇಸರ್‌ ರೆಗ್ಯೂಲೇಟರ್‌, ವಾಲ್‌ ಹೋಗಿದೆ. ಇದೇ ಸಮಸ್ಯೆಗೆ ಕಾರಣವಾಯಿತು. ಅದನ್ನು ಬದಲಾಯಿಸಿದ್ದೇವೆ. ಜಾಸ್ತಿ ಲೋಡ್‌ ಆಗಿದ್ದರಿಂದ ಹೀಗೆ ಆಗಿದೆ. ಸಾಮಾನ್ಯವಾಗಿ 20 ಸಿಲಿಂಡರ್‌ ಸಾಮರ್ಥ್ಯ ಹೊಂದಿದ್ದರೂ ಆಕ್ಸಿಜನ್‌ ಜತೆಯಲ್ಲಿ ಲಿಕ್ವಿಡ್‌ ಮಿಶ್ರಣ ಮಾಡಿರುವುದರಿಂದ 10 ಸಿಲಿಂಡರ್‌ಗೆ ಒತ್ತಡ ಆಗಿದೆ. ಜತೆಯಲ್ಲಿ 20-25ರೋಗಿಗಳನ್ನು ನಿರ್ವಹಿಸುವ ಸಾಮರ್ಥ್ಯದ ಪೈಪ್‌ಲೈನ್‌ಗೆ 50 ಮಂದಿವರೆಗೆ ಆಕ್ಸಿಜನ್‌ ನೀಡುವ ಸಂದರ್ಭಗಳು ಬಂದಿದ್ದರಿಂದ ಲೋಡ್‌ ಆಗಿದೆ. ಇದರಿಂದ ಸಣ್ಣ ಸೋರಿಕೆ ಉಂಟಾಗಿತ್ತು. ಟೆಕ್ನಿಕಲ್‌ ಟೀಮ್‌ ಬಂದಿದ್ದು ಸರಿಪಡಿಸುವ ಕಾರ್ಯ ನಡೆಯುತ್ತಿದೆ. ಸೋರಿಕೆ ಪೈಪ್‌ಲೈನ್‌ ಒತ್ತಡ ಕಡಿಮೆ ಮಾಡಿದರೆ ಮಾತ್ರ ಅದನ್ನು ಸರಿಪಡಿಸಲು ಸಾಧ್ಯವಾಗುತ್ತದೆ. ಹೀಗಾಗಿ ಕೆಲವರನ್ನು ಶಿಫ್ಟ್‌ ಮಾಡಿದ್ದೇವೆ ಎಂದರು. ಆಕ್ಸಿಜನ್‌ ಪೈಪ್‌ಲೈನ್‌ ಸೋರಿಕೆ ಸಂದರ್ಭದಲ್ಲಿ ಆಕ್ಸಿಜನ್‌ನಲ್ಲಿ 21 ಮಂದಿ ಸೋಂಕಿತರು ಇದ್ದರು. ಅದರಲ್ಲಿ ಒಂದೆರಡು ದಿವಸದಲ್ಲಿ ಬಿಡುಗಡೆ ಆಗಲಿರುವವರನ್ನು ಬೇರೆ ತಾಲೂಕುಗಳ ಆಸ್ಪತ್ರೆಗೆ ಶಿಫ್ಟ್‌ ಮಾಡಿದ್ದೇವೆ.

4 ಸಿದ್ದಾಪುರ, 2 ಮುಂಡಗೊಡ, ಒಬ್ಬರನ್ನು ಯಲ್ಲಾಪುರ ಸರಕಾರಿ ಆಸ್ಪತ್ರೆಗೆ ಆಕ್ಸಿಜನ್‌ಯುಕ್ತ ಅಂಬ್ಯುಲೆನ್ಸ್ ಗಳಲ್ಲಿ ಕಳುಹಿಸಲಾಗಿದೆ. ಇನ್ನುಳಿದ ಮೂವರು ಖಾಸಗಿಗೆ ಹೋಗುತ್ತೇವೆ ಎಂದು ತೆರಳಿದ್ದಾರೆ ಎಂದರು. ಆಕ್ಸಿಜನ್‌ ಸಿಲಿಂಡರ್‌ ಪೈಪ್‌ಲೈನ್‌ನಲ್ಲಿ ಸೋರಿಕೆಯಾದರೂ ಆಸ್ಪತ್ರೆಯಲ್ಲಿ 29 ಸಿಲಿಂಡರ್‌ ಸಂಗ್ರಹ ಇತ್ತು. ಇದೀಗ ಮತ್ತೆ 20 ಸಿಲಿಂಡರ್‌ ಬಂದಿದೆ. ಸರಕಾರಿ ಆಸ್ಪತ್ರೆಯಲ್ಲಿ 18 ಮಂದಿ ಸೋಂಕಿತರು ಇದ್ದಾರೆ. ವೆಂಟೆಲೇಟರ್‌ನಲ್ಲಿ ಮೂರು ಮಂದಿ ಇದ್ದಾರೆ. ಇನ್ನು ಏಳು ವೆಂಟಿಲೇಟರ್‌ ನಮ್ಮಲ್ಲಿ ಇದೆ. ರೋಗಿಗಳು ಬಂದರೆ ನಮ್ಮಲ್ಲಿ ಯಾವುದೇ ತೊಂದರೆಯಿಲ್ಲ. ಯಾರೂ ಭಯಪಡಬೇಕಾದ ಅಗತ್ಯವಿಲ್ಲ ಎಂದೂ ಗಜಾನನ ಭಟ್ಟ ಹೇಳಿದರು. ತಹಸೀಲ್ದಾರ ಎಂ.ಆರ್‌.ಕುಲಕರ್ಣಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.