ಸಿಡಿಲಿನ ಆಘಾತದಿಂದ ಅಡಿಕೆ ತೋಟಗಳಿಗೆ ಹಾನಿ : ಕರಟಿದ 150ಕ್ಕೂ ಮಿಕ್ಕಿ ಅಡಿಕೆ ಮರಗಳು


Team Udayavani, May 24, 2021, 2:09 AM IST

ಸಿಡಿಲಿನ ಆಘಾತದಿಂದ ಅಡಿಕೆ ತೋಟಗಳಿಗೆ ಹಾನಿ : ಕರಟಿದ 150ಕ್ಕೂ ಮಿಕ್ಕಿ ಅಡಿಕೆ ಮರಗಳು

ಬೆಳ್ತಂಗಡಿ: ನಿರಂತರ ಸಿಡಿಲು ಗುಡುಗು ಸಹಿತ ಅಕಾಲಿಕ ಮಳೆಯ ಪ್ರಭಾವದಿಂದ ಬೆಳ್ತಗಡಿ ತಾಲೂಕಿನ ಮುಂಡಾಜೆ ಪರಮುಖ ನಿವಾಸಿ ಕೃಷಿಕ ಮಚ್ಚಿಮಲೆ ಅನಂತ ಭಟ್‌ ಅವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು 150ಕ್ಕಿಂತ ಮಿಕ್ಕಿ ಮರಗಳು ಕರಟಿಹೋಗಿವೆ.
ಕಳೆದ ಕೆಲವು ದಿನಗಳ ಹಿಂದೆ ಸಿಡಿಲು ಬಡಿದ ಪರಿಣಾಮ ದಿನದಿಂದ ದಿನಕ್ಕೆ ಸುತ್ತಮುತ್ತಲ ವ್ಯಾಪ್ತಿಯ ಅಡಿಕೆ ಮರಗಳು ಸಂಪೂರ್ಣ ಹಾನಿಗೊಳಗಾಗುತ್ತಿವೆ. ಕೆಲವೊಂದು ಅಡಿಕೆ ಮರಗಳಿಗೆ ಭಾಗಶಃ ಹಾನಿ ಸಂಭವಿಸಿದ್ದು ಅವುಗಳ ಬೆಳವಣಿಗೆಯು ಕುಂಠಿತಗೊಂಡಿದೆ. ಇದರಿಂದ ಲಕ್ಷಾಂತರ ರೂ. ಮೌಲ್ಯದ ಹಾನಿ ಸಂಭವಿಸಿದೆ.

ಇವರ ತೋಟಕ್ಕೆ ಕಳೆದ ಎರಡು ವರ್ಷಗಳಿಂದ ಏಳು ಬಾರಿ ಸಿಡಿಲಿನ ಆಘಾತವಾಗಿದ್ದು, 20 ವರ್ಷಗಳಷ್ಟು ಹಳೆಯ 300ರಿಂದ 400ಕ್ಕೂ ಅಧಿಕ ಅಡಿಕೆ ಗಿಡಗಳು ಈವರೆಗೆ ಕರಟಿವೆ. ಕೆಲವೊಮ್ಮೆ ಸೀಮಿತ ಅಡಿಕೆ ಗಿಡಗಳಿಗೆ ಹಾನಿಯಾದರೆ, ಈ ಬಾರಿ ಒಂದೇ ಸಿಡಿಲಾಘಾತಕ್ಕೆ 150ಕ್ಕೂ ಅಧಿಕ ಗಿಡಗಳಿಗೆ ಹಾನಿಯಾಗಿವೆ. ಸಿಡಿಲು ಬಡಿದು ಕನಿಷ್ಠ 6ರಿಂದ 1ವರ್ಷ ವರೆಗೆ ಅದರ ಪರಿಣಾಮ ಇರುವುದರಿಂದ ಬಳಿಕವಷ್ಟೇ ಮರಗಳು ಸಾಯುವುದು ಸ್ಪಷ್ಟವಾಗಿ ತಿಳಿಯುತ್ತದೆ ಎಂದು ಅನಂತ ಭಟ್‌ ಅವರು ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆ ಇದೇ ಮುಂಡಾಜೆ ಗ್ರಾಮದ ಕಡಂಬಳ್ಳಿ ಪರಿಸರದ ಅಡಿಕೆ ತೋಟಕ್ಕೆ ಸಿಡಿಲು ಬಡಿದಿದ್ದು ಸ್ಥಳೀಯ ಗೋಪಾಲ್‌ ಪಟವರ್ಧನ್‌ ಅವರ ತೋಟದಲ್ಲಿ 50ರಷ್ಟು ಅಡಿಕೆ ಮರಗಳಿಗೆ ಹಾನಿಯಾಗಿದೆ. ಸಮೀಪದ ವಿ.ಜಿ.ಪಟವರ್ಧನ್‌ ಅವರ ತೋಟದ 10ಕ್ಕಿಂತ ಹೆಚ್ಚು ಅಡಿಕೆ ಮರಗಳು,

ಹಲಸಿನ ಮರ ಹಾಗೂ ಬಾಳೆಗಿಡಗಳು ನಾಶವಾಗಿದೆ. ಕಾಯರ್ತೋಡಿ ವಿಶ್ವನಾಥ ಬೆಂಡೆಯವರಲ್ಲಿ 15 ಬಾಳೆಗಿಡಗಳಿಗೆ ಹಾನಿ ಸಂಭವಿಸಿದೆ.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.