ಅನಾಥ ಮಕ್ಕಳ ಆಶ್ರಯಕ್ಕೆ ಮುಂದಾದ ಉಪ್ಪಿನಬೆಟಗೇರಿ ಕುಮಾರ ವಿರೂಪಾಕ್ಷ ಶ್ರೀ
Team Udayavani, May 24, 2021, 5:05 PM IST
ಧಾರವಾಡ: ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ನಿಂದ ಪೋಷಕರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ಉಚಿತ ಊಟ, ವಸತಿಯ ಜತೆಗೆ ಪಿಯುಸಿವರೆಗೆ ಶಿಕ್ಷಣ ನೀಡುವ ಜವಾಬ್ದಾರಿಯನ್ನು ಹೊರಲು ಉಪ್ಪಿನಬೆಟಗೇರಿ ಗ್ರಾಮದ ಮೂರುಸಾವಿರ ವಿರಕ್ತಮಠ ಮುಂದಾಗಿದೆ.
ಈ ಬಗ್ಗೆ ನಿರ್ಧಾರ ಪ್ರಕಟಿಸಿರುವ ಶ್ರೀಮಠದ ಶ್ರೀ ಕುಮಾರ ವಿರೂಪಾಕ್ಷ ಸ್ವಾಮೀಜಿ, ಧಾರವಾಡ ಜಿಲ್ಲೆಯ ವ್ಯಾಪ್ತಿಯಲ್ಲಿ ಕೋವಿಡ್ನಿಂದ ಮೃತಪಟ್ಟು ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ಆಶ್ರಯ ನೀಡಲಾಗುವುದು. ಅನಾಥರಾಗಿರುವ ಮಕ್ಕಳಾಗಲಿ ಅಥವಾ ಪರಿಚಯಸ್ಥರು ಶ್ರೀಮಠಕ್ಕೆ ಸಂಪರ್ಕಿಸಿದರೆ ಆ ಮಕ್ಕಳಿಗೆ ಉಚಿತವಾಗಿ ಊಟ, ವಸತಿ ನೀಡುವುದರ ಜತೆಗೆ ಪಿಯುಸಿವರೆಗೆ ಶಿಕ್ಷಣ ಕೊಡಿಸುವ ಜವಾಬ್ದಾರಿಯನ್ನು ಶ್ರೀಮಠ ನಿರ್ವಹಣೆ ಮಾಡಲಿದೆ ಎಂದು ಹೇಳಿದ್ದಾರೆ.
ಕೋವಿಡ್ ಎರಡನೇ ಅಲೆಯು ನಗರಕ್ಕಿಂತ ಗ್ರಾಮೀಣ ಭಾಗದಲ್ಲಿ ಹೆಚ್ಚು ಹೊಡೆತ ನೀಡುತ್ತಿದ್ದು, ಕೋವಿಡ್ಗೆ ಜನ ಬಲಿಯಾಗುತ್ತಿದ್ದಾರೆ. ಇದರಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳು ವಸತಿ, ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಶ್ರೀಮಠ ಈ ನಿರ್ಣಯ ಕೈಗೊಂಡಿದೆ. ಹೀಗಾಗಿ ಆಶ್ರಯ ಬಯಸಿ ಬರುವ ಮಕ್ಕಳಿಗೆ ಶ್ರೀಮಠ ಆಶ್ರಯ ನೀಡಲಿದೆ ಎಂದಿದ್ದಾರೆ. ಆಸಕ್ತರು ನೇರವಾಗಿ ಶ್ರೀಮಠಕ್ಕೆ ಆಗಮಿಸಬಹುದು. ಅಥವಾ ನೇರವಾಗಿ ಶ್ರೀಗಳನ್ನೇ ಮೊ: 9739373000 ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
MUST WATCH
ಹೊಸ ಸೇರ್ಪಡೆ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ