ಕೋವಿಡ್ ತಡೆಗೆ ಬಿಟ್ಟಿದ್ದ ದೈವದ ಕುದುರೆಯೇ ಸಾವು!
ಕಂಗಾಲಾದ ಮರಡಿಮಠ ಗ್ರಾಮಸ್ಥರು ! ಅಂತ್ಯಕ್ರಿಯೆಯಲ್ಲಿ ಸಾವಿರಾರು ಜನ ಭಾಗಿ! ಕೊರೊನಾ ಭೀತಿಯಲ್ಲಿ ಸೀಲ್ಡೌನ್
Team Udayavani, May 24, 2021, 6:55 PM IST
ಗೋಕಾಕ: ತಾಲೂಕಿನ ಇತಿಹಾಸ ಪ್ರಸಿದ್ಧ ಸುಕ್ಷೇತ್ರ ಮರಡಿಮಠ(ಕೊಣ್ಣೂರ)ದಲ್ಲಿ ದೈವದ ಕುದುರೆಯನ್ನು ಸಾಂಕ್ರಾಮಿಕ ರೋಗದಿಂದ ಪಾರಾಗಲು ಗ್ರಾಮದಲ್ಲಿ ತಿರುಗಾಡಿಸುವ ಪ್ರತೀತಿ ಇದ್ದು, ಕೋವಿಡ್ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ತಿರುಗಾಡಿದ ಕುದುರೆ ನಾಲ್ಕೇ ದಿನದಲ್ಲಿ ರವಿವಾರ ಸಾವಿಗೀಡಾಗಿ ಅಚ್ಚರಿ ಮೂಡಿಸಿದೆ.
ಇಲ್ಲಿಯ ಭಕ್ತರ ಬೇಡಿಕೆಯಂತೆ ಮರಡಿಮಠದ ಶ್ರೀ ಪವಾಡೇಶ್ವರ ಸ್ವಾಮೀಜಿ ಮಾರ್ಗದರ್ಶನದದಲ್ಲಿ ಗ್ರಾಮದ ಜನತೆ ಕಾಡಸಿದ್ಧೇಶ್ವರ ಸ್ವಾಮಿ ಅವರ ಶೌರ್ಯ ನಾಮದ ಕುದುರೆಯನ್ನು ಬುಧವಾರ ಮಧ್ಯರಾತ್ರಿ 12 ಗಂಟೆಯಿಂದ ಗುರುವಾರ ಬೆಳಗ್ಗೆ 4 ಗಂಟೆಯವರೆಗೆ ಗ್ರಾಮದಲ್ಲಿ ಸಂಚರಿಸಲು ಬಿಡಲಾಗಿತ್ತು. ಆದರೆ ಕುದುರೆ ಗ್ರಾಮದಲ್ಲಿ ಸಂಚರಿಸಿದ ಕೆಲವೇ ದಿನಗಳಲ್ಲಿ ಮೃತಪಟ್ಟಿದೆ. ಇದು ಅಚ್ಚರಿ ಅಲ್ಲದೇ ಗ್ರಾಮಸ್ಥರು ಚಿಂತೆಗೂ ಕಾರಣವಾಗಿದೆ.
ಕುದುರೆ ಸಾವಿನ ಸುದ್ದಿ ತಿಳಿದ ಭಕ್ತರಿಗೆ ದೊಡ್ಡ ಆಘಾತವಾಗಿದ್ದು, ಗ್ರಾಮದ ಸುತ್ತಲಿನ ಸಾವಿರಾರು ಮಂದಿ ಕುದುರೆಯ ಕಳೆಬರ ನೋಡಲು ಆಗಮಿಸಿದ್ದರು. ಅಂತ್ಯಸಂಸ್ಕಾರಕ್ಕೆ ಸಾವಿರಾರು ಜನ ಜಮಾಯಿಸಿ ಕೋವಿಡ್ ಸಮಯದಲ್ಲೂ ದೈವ ಕುದುರೆಯ ದರ್ಶನ ಪಡೆದರು. ಕುದುರೆಯು ನಮ್ಮ ಊರಿಗೆ ಬಂದ ಕಂಟಕವನ್ನು ತನ್ನ ಮೈಮೇಲೆ ಹಾಕಿಕೊಂಡು ಇಹಲೋಕವನ್ನು ತ್ಯಜಿಸಿದೆ ಎಂದು ಭಕ್ತರು ಕಣ್ಣೀರು ಸುರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ