ಕಪ್ಪು ಶಿಲೀಂಧ್ರ ಚಿಕಿತ್ಸೆಗೆ ಕೇಂದ್ರದಿಂದ 19,420 ವಯಲ್ಸ್ ಎಂಫೋಟೆರಿಸಿನ್-ಬಿ ಹಂಚಿಕೆ :DVS

ಮೇ ಒಳಗೆ 3.63 ಲಕ್ಷ ವಯಲ್ಸ್ ಆಮದಿಗೆ ಕ್ರಮ

Team Udayavani, May 24, 2021, 10:44 PM IST

ಕಪ್ಪು ಶಿಲೀಂಧ್ರ ಚಿಕಿತ್ಸೆಗೆ ಕೇಂದ್ರದಿಂದ 19,420 ವಯಲ್ಸ್ ಎಂಫೋಟೆರಿಸಿನ್-ಬಿ ಹಂಚಿಕೆ :DVS

ನವದೆಹಲಿ : ಕಪ್ಪುಶಿಲೀಂಧ್ರ ರೋಗದ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು ಇಂದು ರಾಜ್ಯಗಳಿಗೆ 19,420 ಸೀಸೆ (ವಯಲ್ಸ್) ಲಿಪೋಸೊಮಾಲ್ ಎಂಫೋಟೆರಿಸಿನ್-ಬಿ ಚುಚ್ಚುಮದ್ದನ್ನು ಹಂಚಿಕೆ ಮಾಡಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ. ವಿ.ಸದಾನಂದ ಗೌಡ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಕರ್ನಾಟಕಕ್ಕೆ 1030 ವಯಲ್ಸ್ ಒದಗಿಸಲಾಗಿದೆ, ಮೊನ್ನೆ 1270 ವಯಲ್ಸ್ ಹಾಗೂ ಅದಕ್ಕೂ ಮುನ್ನ ಮೂರು ಕಂತುಗಳಲ್ಲಿ 1660 ವಯಲ್ಸ್ ಒದಗಿಸಲಾಗಿತ್ತು ಎಂದರು.

ದೇಶದಲ್ಲಿಯೇ ತ್ವರಿತವಾಗಿ ಲಿಪೋಸೊಮಾಲ್ ಎಂಫೋಟೆರಿಸಿನ್-ಬಿ ಉತ್ಪಾದನೆ ಹೆಚ್ಚಿಸಲು ತುರ್ತು ಕ್ರಮ ಕೈಗೊಳ್ಳಲಾಗಿದೆ. ಇದುವರೆಗೆ ದೇಶದ ಐದು ಫಾರ್ಮಾ ಕಂಪನಿಗಳು ಇದರ ಉತ್ಪಾದನೆ ಮಾಡುತ್ತಿದ್ದು ಈಗ ಹೊಸದಾಗಿ ಮತ್ತೆ ಐದು ಕಂಪನಿಗಳಿಗೆ ಲೈಸನ್ಸ್ ನೀಡಲಾಗಿದೆ. ಈ ಸ್ವದೇಶಿ ಕಂಪನಿಗಳು ಮೇ ತಿಂಗಳಲ್ಲಿ 1.63 ಲಕ್ಷ ಸೀಸೆ ಹಾಗೂ ಜೂನ್ ತಿಂಗಳಲ್ಲಿ 2.55 ಸೀಸೆ ಲಿಪೋಸೊಮಾಲ್ ಎಂಫೋಟೆರಿಸಿನ್ ಬಿ ಉತ್ಪಾದನೆ ಮಾಡಲಿವೆ ಎಂದರು.

ಇದನ್ನೂ ಓದಿ :ಕಟ್ಟಡ ಕಾರ್ಮಿಕರಿಗೆ ಕೋವಿಡ್ ಪರೀಕ್ಷೆ ಹೆಚ್ಚಿಸಲು ಸಚಿವ ಅರವಿಂದ ಲಿಂಬಾವಳಿ ಸೂಚನೆ

ಹಾಗೆಯೇ ಮೈಲಾನ್ ಕಂಪನಿ ಮೂಲಕ ಮೇ ತಿಂಗಳ ಒಳಗಾಗಿ 3.63 ಲಕ್ಷ ವಯಲ್ಸ್ ಲಿಪೋಸೊಮಾಲ್ ಎಂಫೋಟೆರಿಸಿನ್-ಬಿ ಆಮದು ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ ಸ್ವಲ್ಪಭಾಗ ಈಗಾಗಲೇ ಭಾರತ ತಲುಪಿದೆ. ಯೋಜಸಿದಂತೆ ಸಾಗಣೆಯಲ್ಲಿ ಏನೂ ವ್ಯತ್ಯಾಸವಾಗದಿದ್ದರೆ ಉಳಿದ ಬಹುತೇಕ ಭಾಗ ವಾರದೊಳಗೆ ಭಾರತ ತಲುಪುವುದೆಂದು ನಿರೀಕ್ಷಿಸಲಾಗಿದೆ ಎಂದು ಸಚಿವರು ಹೇಳಿದರು.

ಇನ್ನು, ಜೂನ್ ತಿಂಗಳಲ್ಲಿ 3.15 ಲಕ್ಷ ವಯಲ್ಸ್ ಆಮದು ಮಾಡಿಕೊಳ್ಳಲಾಗುತ್ತಿದೆ. ಇದರ ಜೊತೆಗೆ 2.55 ಲಕ್ಷ ವಯಲ್ಸ್ ಸ್ವದೇಶಿ ಉತ್ಪಾದನೆ ಸೇರಿ ಜೂನ್ ತಿಂಗಳಲ್ಲಿ 5.7 ಲಕ್ಷ ವಯಲ್ಸ್ ಲಿಪೋಸೊಮಾಲ್ ಎಂಫೋಟೆರಿಸಿನ್-ಬಿ ಲಭ್ಯವಿರಲಿವೆ. ಅಗತ್ಯವಾದರೆ ಇನ್ನೂ ಹೆಚ್ಚು ಆಮದು ಮಾಡಿಕೊಳ್ಳುತ್ತೇವೆ. ಸ್ವದೇಶಿ ಉತ್ಪಾದನೆಯೂ ಹೆಚ್ಚಾಗುತ್ತಿದ್ದು ಇದರ ಹಂಚಿಕೆ ನಿರಂತರವಾಗಿ ನಡೆಯಲಿದೆ. ಕಪ್ಪುಶಿಲೀಂದ್ರ ಹಳೆ ಕಾಯಿಲೆಯಾಗಿದ್ದು ಇದಕ್ಕೆ ಸಾಕಷ್ಟು ಪರ್ಯಾಯ ಔಷಧಗಳು ಲಭ್ಯವಿವೆ. ಹಾಗಾಗಿ ಇದಕ್ಕೆ ಔಷಧ ಕೊರತೆಯಾಗಬಹುದು ಎಂದು ಗಾಬರಿಗೊಳಗಾಗಬೇಡಿ ಎಂದು ಸಚಿವರು ಸಾರ್ವಜನಿಕರಲ್ಲಿ ವಿನಂತಿಸಿದರು.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.