ವುಹಾನ್‌ ಸಂಶೋಧಕರಿಗೇ ಮೊದಲ ಕೋವಿಡ್ ಸೋಂಕು?


Team Udayavani, May 25, 2021, 7:05 AM IST

ವುಹಾನ್‌ ಸಂಶೋಧಕರಿಗೇ ಮೊದಲ ಕೋವಿಡ್ ಸೋಂಕು?

ವಾಷಿಂಗ್ಟನ್‌/ ಬೀಜಿಂಗ್‌: ಜಗದಗಲ ವ್ಯಾಪಿಸಿರುವ ಕೊರೊನಾ ವೈರಸ್‌ ಚೀನದ ವುಹಾನ್‌ ಲ್ಯಾಬ್‌ ನಲ್ಲೇ ಸೃಷ್ಟಿಯಾಗಿದೆ ಎಂಬ ವಾದಕ್ಕೆ ಪುಷ್ಟಿ ನೀಡುವಂಥ ಮತ್ತೂಂದು ಅಂಶ ಬಹಿರಂಗವಾಗಿದೆ.

ಕೋವಿಡ್‌-19 ಸೋಂಕಿನ ವಿಚಾರವನ್ನು ಚೀನ ಬಹಿರಂಗ ಪಡಿಸುವುದಕ್ಕೂ ಮುನ್ನವೇ ವುಹಾನ್‌ ಪ್ರಯೋಗಾಲಯದ ಮೂವರು ಸಂಶೋಧಕರು ಆಸ್ಪತ್ರೆಗೆ ಧಾವಿಸಿ ಚಿಕಿತ್ಸೆ ಪಡೆದಿದ್ದರು ಎಂಬ ಸಂಗತಿ ಈಗ ಬೆಳಕಿಗೆ ಬಂದಿದೆ. 2019 ನವೆಂಬರ್‌ ನಲ್ಲೇ ಈ ಸಂಶೋಧಕರು ಚಿಕಿತ್ಸೆ ಪಡೆದಿರುವ ದಾಖಲೆಗಳನ್ನು ಉಲ್ಲೇಖೀಸಿ “ದಿ ವಾಲ್‌ ಸ್ಟ್ರೀಟ್‌ ಜರ್ನಲ್‌’ ವರದಿ ಮಾಡಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಪ್ರಮುಖ
ಮಂಡ ಳಿಯ ಸಭೆಗೂ ಮುನ್ನ ಈ ಸುದ್ದಿ ಸ್ಫೋಟ ಗೊಂಡಿದೆ. ಕೊರೊನಾ ಸೋಂಕಿನ ಮೂಲ ಯಾವುದು ಎಂಬ ಕುರಿತು 2ನೇ ಹಂತದ ತನಿಖೆಗೆ ಆದೇಶ ನೀಡುವ ಬಗ್ಗೆಯೂ ಈ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ.

ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆಯ ತಜ್ಞರ ತಂಡವು ಒಂದು ಹಂತದ ತನಿಖೆ ನಡೆಸಿದ್ದು, ಕೊರೊನಾ ಸೋಂಕು ಲ್ಯಾಬ್‌ ನಿಂದ ಸೋರಿಕೆಯಾಗಿದೆ ಎನ್ನುವುದಕ್ಕೆ ಸೂಕ್ತ ಪುರಾವೆ ದೊರೆತಿಲ್ಲ ಎಂದಿದೆ. ಆದರೆ ಅಮೆರಿಕ, ನಾರ್ವೆ, ಕೆನಡ, ಬ್ರಿಟನ್‌ ಸಹಿತ ಹಲವು ದೇಶಗಳು ಈ ಕುರಿತು ಮತ್ತಷ್ಟು ತನಿಖೆಗೆ ಆಗ್ರಹಿಸಿವೆ.

ತಿಂಗಳು ಮೊದಲು ಚಿಕಿತ್ಸೆ
ಚೀನ ಸರಕಾರವು ತನ್ನಲ್ಲಿ ಕೊರೊನಾ ಸೋಂಕಿನ ಮೊದಲ ಪ್ರಕರಣ ಪತ್ತೆಯಾಗಿದೆ ಎಂದು ಜಗಜ್ಜಾಹೀರು ಮಾಡಿದ್ದು 2019ರ ಡಿಸೆಂಬರ್‌ ನಲ್ಲಿ. ಆದರೆ ಅದಕ್ಕೂ ಒಂದು ತಿಂಗಳ ಮುನ್ನ, 2019ರ ನವೆಂಬರ್‌  ನಲ್ಲೇ ವುಹಾನ್‌ ಇನ್‌ಸ್ಟಿಟ್ಯೂಟ್‌ ಆಫ್ ವೈರಾ ಲಜಿಯ ಮೂವರು ಸಂಶೋಧಕರಿಗೆ ಜ್ವರ ಬಂದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನೂ ಪಡೆದಿದ್ದರು ಎಂದು ಅಮೆರಿಕದ ಗುಪ್ತ ಚರ ವರದಿ ತಿಳಿಸಿತ್ತು. ಅಲ್ಲದೆ ಲ್ಯಾಬ್‌ ನಲ್ಲಿರುವ ಹಲವು ಸಿಬಂದಿ ಅನಾರೋಗ್ಯಕ್ಕೀಡಾಗಿದ್ದು, ಅವರ ಸಂಖ್ಯೆ ಎಷ್ಟು ಎಂಬ ನಿಖರ ಮಾಹಿತಿ ಸಿಕ್ಕಿಲ್ಲ ಎಂದೂ ಹೇಳ ಲಾಗಿತ್ತು.

ಅಲ್ಲಗಳೆದ ಚೀನ
ವಾಲ್‌ ಸ್ಟ್ರೀಟ್‌ ಜರ್ನಲ್‌ನ ವರದಿಯನ್ನು ಚೀನ ಅಲ್ಲಗಳೆದಿದೆ. ಅಮೆರಿಕವುವೈಭ ವೀಕೃತ ವರದಿ ಮಾಡುತ್ತಿದೆ. ಸೋಂಕು ಬಹಿರಂಗವಾಗುವುದಕ್ಕೂ ಮುನ್ನ ಚೀನದ ಸಂಶೋಧಕರು ಕೊರೊ ನಾಕ್ಕೆ ಚಿಕಿತ್ಸೆ ಪಡೆದಿದ್ದರು ಎಂಬ ಸುದ್ದಿ ಸತ್ಯಕ್ಕೆ ದೂರ ವಾದದ್ದು ಎಂದು ಚೀನದ ವಿದೇಶಾಂಗ ಇಲಾಖೆ ವಕ್ತಾರ ಝಾವೋ ಲಿಜಿಯನ್‌ ಹೇಳಿದ್ದಾರೆ. ಜತೆಗೆ ಅಮೆರಿಕಕ್ಕೆ ನಿಜಕ್ಕೂ ಕೊರೊನಾದ ಮೂಲ ಕಂಡು ಹಿಡಿಯುವ ಉದ್ದೇಶ ವಿದೆಯೋ ಅಥವಾ ಜನರ ಗಮನ ಬೇರೆಡೆ ಸೆಳೆಯುವ ಉದ್ದೇಶವಿದೆಯೋ ಎಂಬುದು ಅರ್ಥವಾಗುತ್ತಿಲ್ಲ ಎಂದಿದ್ದಾರೆ.

ಕೊರೊನಾ ಮೂಲದ ಬಗ್ಗೆ ಬೈಡನ್‌ ಆಡಳಿತಕ್ಕೂ ಗಂಭೀರ ಪ್ರಶ್ನೆಗಳು ಮೂಡಿವೆ. ಈ ಕುರಿತು ತಜ್ಞರಿಂದ ಯಾವುದೇ ಹಸ್ತ ಕ್ಷೇಪವಿಲ್ಲದ ನಿಷ್ಪಕ್ಷ ತನಿಖೆ ನಡೆಯಬೇಕೆಂದು ಬಯಸುತ್ತಿದೆ. ಈ ನಿಟ್ಟಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಸದಸ್ಯ ರಾಷ್ಟ್ರಗಳೊಂದಿಗೆ ಮಾತುಕತೆ ನಡೆಯುತ್ತಿದೆ.
– ಎಮಿಲಿ ಹಾರ್ನ್, ಅಮೆರಿಕ ರಾಷ್ಟ್ರೀಯ ಭದ್ರತಾ ಮಂಡಳಿ ವಕ್ತಾರೆ

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.