ಫೇಸ್‌ಬುಕ್‌, ಟ್ವಿಟರ್‌ಗೆ ನಿಷೇಧದ ಭೀತಿ : ಸರಕಾರದ ನಿಯಮ ಪಾಲನೆ ವಿಫ‌ಲ ಹಿನ್ನೆಲೆ ಕ್ರಮ


Team Udayavani, May 25, 2021, 7:30 AM IST

ಫೇಸ್‌ಬುಕ್‌, ಟ್ವಿಟರ್‌ಗೆ ನಿಷೇಧದ ಭೀತಿ : ಕೇಂದ್ರ ಸರಕಾರದ ನಿಯಮ ಪಾಲನೆ ವಿಫ‌ಲ ಹಿನ್ನೆಲೆ ಕ್ರಮ

ಹೊಸದಿಲ್ಲಿ: ಸದ್ಯದಲ್ಲೇ ದೇಶಾದ್ಯಂತ ಫೇಸ್‌ಬುಕ್‌, ಟ್ವಿಟರ್‌ ಬ್ಯಾನ್‌ ಆಗಲಿವೆಯೇ?
ಡಿಜಿಟಲ್‌ ಕಂಟೆಂಟ್‌ ಗಳ ಮೇಲೆ ನಿಯಂತ್ರಣ ಹೇರಲು ಕೇಂದ್ರ ಸರಕಾರ ಜಾರಿ ಮಾಡಿರುವ ನಿಯಮಗಳನ್ನು ಟ್ವಿಟರ್‌, ಫೇಸ್‌ ಬುಕ್‌, ಇನ್‌ ಸ್ಟಾಗ್ರಾಂ ಸೇರಿದಂತೆ ಬಹುತೇಕ ಸಾಮಾಜಿಕ ಜಾಲತಾಣಗಳು ಇನ್ನೂ ಅನುಸರಿಸಿಲ್ಲ. ಮಂಗಳವಾರದಿಂದಲೇ ಈ ನಿಯಮಗಳು ಜಾರಿಗೆ ಬರಲಿದ್ದು, ನಿಯಮ ಪಾಲಿಸದ ತಾಣಗಳನ್ನು ಸರಕಾರ ಬ್ಲಾಕ್‌ ಮಾಡುವ ಸಾಧ್ಯತೆ ಅಧಿಕವಾಗಿದೆ.

ನಿಯಮ ಪಾಲನೆ ಅಧಿಕಾರಿಗಳ ನೇಮಕ, ಭಾರತದಲ್ಲಿರುವ ಆ ಅಧಿಕಾರಿಗಳ ಹೆಸರು ಮತ್ತು ಸಂಪರ್ಕ ಸಂಖ್ಯೆ ಸಲ್ಲಿಕೆ, ದೂರುಗಳು ಬಂದರೆ ಕೂಡಲೇ ಪರಿಹರಿಸುವುದು, ಆಕ್ಷೇಪಾರ್ಹ ಕಂಟೆಂಟ್‌ ಗಳ ಮೇಲೆ ನಿಗಾ ಇಡುವುದು ಮತ್ತು ಅವುಗಳನ್ನು ತೆಗೆದುಹಾಕುವುದು ಸೇರಿದಂತೆ ಕೆಲವೊಂದು ನಿಯಮಗಳನ್ನು ಪಾಲಿಸುವಂತೆ ಕಳೆದ ಫೆ.25ರಂದು ಸರಕಾರ ಸೂಚಿಸಿತ್ತು. ಜತೆಗೆ ಇದನ್ನು ಪೂರ್ಣಗೊಳಿಸಲು 3 ತಿಂಗಳ ಗಡುವು ನೀಡಿತ್ತು. ಮೇ 25ರಂದು ಈ ಗಡುವು ಮುಗಿದಿದ್ದು, ಜಾಲತಾಣಗಳಿಗೆ ನಿಷೇಧದ ಭೀತಿ ಶುರುವಾಗಿದೆ.

ಟೂಲ್‌ಕಿಟ್‌: ಟ್ವಿಟರ್‌ಗೆ ನೋಟಿಸ್‌
ಹೊಸದಿಲ್ಲಿ: ಕಾಂಗ್ರೆಸ್‌ ನದ್ದು ಎನ್ನಲಾದ ಟೂಲ್‌ಕಿಟ್‌ ಅನ್ನು “ತಿರುಚಿದ ಅಂಶಗಳುಳ್ಳ ವಿಷಯ’ ಎಂದು ಉಲ್ಲೇಖೀಸಿದ್ದ ಟ್ವಿಟರ್‌ಗೆ ದಿಲ್ಲಿ ಪೊಲೀಸರ ವಿಶೇಷ ಘಟಕ ಸೋಮವಾರ ನೋಟಿಸ್‌ ಜಾರಿ ಮಾಡಿದೆ. ಬಿಜೆಪಿ ವಕ್ತಾರ ಸಂಬಿತ್‌ ಪಾತ್ರಾ ಅವರು ಟೂಲ್‌ಕಿಟ್‌ ಕುರಿತು ಮಾಡಿದ್ದ ಟ್ವೀಟ್‌ ಅನ್ನು ಟ್ವಿಟರ್‌ ಇತ್ತೀಚೆಗೆ “ತಿರುಚಿದ ಅಂಶಗಳುಳ್ಳ ವಿಷಯ’ ಎಂದು ಘೋಷಿಸದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿ ಪ್ರಧಾನಿ ಮೋದಿ ನೇತೃತ್ವದ ಸರಕಾರವನ್ನು ದೂಷಿಸಲೆಂದು ಕಾಂಗ್ರೆಸ್‌ ಈ ಟೂಲ್‌ ಕಿಟ್‌ ಸಿದ್ಧಪಡಿಸಿತ್ತು ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು. ಇದನ್ನು ನಕಲಿ ಟೂಲ್‌ಕಿಟ್‌ ಎಂದು ಕರೆದಿದ್ದ ಕಾಂಗ್ರೆಸ್‌ ಎಫ್ಐಆರ್‌ ಕೂಡ ದಾಖಲಿಸಿತ್ತು. ಪ್ರಕರಣ ತನಿಖೆ ಹಂತದಲ್ಲಿರುವಾಗ ನೀವು ಮಧ್ಯಪ್ರವೇಶಿಸಬೇಡಿ ಎಂದು ಟ್ವಿಟರ್‌ಗೆ ಕೇಂದ್ರ ಸರಕಾರ ಖಡಕ್‌ ಸೂಚನೆಯನ್ನೂ ನೀಡಿತ್ತು. ಸೋಮವಾರ ಪೊಲೀಸರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಟ್ವಿಟರ್‌ ಸಂಸ್ಥೆಗೆ ನೋಟಿಸ್‌ ಜಾರಿ ಮಾಡಿದ್ದಾರೆ.

ರಮಣ್‌ ಸಿಂಗ್‌ ಹೇಳಿಕೆ ದಾಖಲು: ನಕಲಿ ಟೂಲ್‌ಕಿಟ್‌ ಹಂಚಿಕೊಂಡಿರುವ ಆರೋಪಕ್ಕೆ ಸಂಬಂಧಿಸಿ ಸೋಮವಾರ ರಾಯು³ರ ಪೊಲೀಸರು ಛತ್ತೀಸ್‌ ಗಡದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ರಮಣ್‌ ಸಿಂಗ್‌ ಅವರ ಹೇಳಿಕೆ ದಾಖಲಿಸಿ ಕೊಂಡಿದ್ದಾರೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.