ಲಸಿಕೆಗೆ 18 ವರ್ಷ ಮೇಲ್ಪಟ್ಟವರಿಗೂ ಸ್ಥಳದಲ್ಲೇ ನೋಂದಣಿ ಅವಕಾಶ


Team Udayavani, May 25, 2021, 7:35 AM IST

ಲಸಿಕೆಗೆ 18+ ನವರಿಗೂ ಸ್ಥಳದಲ್ಲೇ ನೋಂದಣಿ ಅವಕಾಶ

ಹೊಸದಿಲ್ಲಿ: ನೀವು 18ರಿಂದ 44ರ ವಯೋಮಾನದವರಾ? ನಿಮ್ಮಲ್ಲಿ ಸ್ಮಾರ್ಟ್‌ ಫೋನ್‌ ಅಥವಾ ಇಂಟರ್ನೆಟ್‌ ಸಂಪರ್ಕ ಇಲ್ಲವೇ? ಹಾಗಿದ್ದರೆ ಲಸಿಕೆ ಪಡೆಯಲು ಕೋವಿನ್‌ ವೆಬ್‌ ಪೋರ್ಟಲ್‌ ನಲ್ಲಿ ನೋಂದಣಿ ಮಾಡಲೇಬೇಕೆಂದೇನೂ ಇಲ್ಲ. ನೇರವಾಗಿ ಸರಕಾರಿ ಲಸಿಕಾ ಕೇಂದ್ರಗಳಿಗೆ ತೆರಳಿ ಅಲ್ಲೇ ನೋಂದಣಿ ಮಾಡಿಕೊಳ್ಳಬಹುದು.

ಇಂಥದ್ದೊಂದು ಅವಕಾಶವನ್ನು ಕೇಂದ್ರ ಸರಕಾರ ಕಲ್ಪಿಸಿದೆ. ಮುಂಚಿತವಾಗಿಯೇ ಕೋವಿನ್‌ ನಲ್ಲಿ ನೋಂದಣಿ ಮಾಡಿಕೊಂಡವರಿಗೆ(18-44 ವಯೋಮಾನದವರು) ಲಸಿಕೆ ವಿತರಣೆ ಕೇಂದ್ರದಲ್ಲಿ ಮೊದಲಿಗೆ ಲಸಿಕೆ ವಿತರಿಸಲಾಗುತ್ತದೆ. ದಿನದ ಅಂತ್ಯದಲ್ಲಿ ಇನ್ನೂ ಲಸಿಕೆಯ ಡೋಸ್‌ಗಳು ಉಳಿದಿದ್ದರೆ ಅದನ್ನು “ನೋಂದಣಿ ಮಾಡದೇ ಬಂದವರಿಗೆ’ ನೀಡಲಾಗುತ್ತದೆ. ಇದರಿಂದ ಲಸಿಕೆ ಪೋಲಾಗುವುದನ್ನು ತಪ್ಪಿಸಿದಂತಾಗುತ್ತದೆ ಎಂದು ಕೇಂದ್ರ ಸರಕಾರ ಹೇಳಿದೆ.

ಹೀಗಿದ್ದರೂ, ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳುವ ನಿರ್ಧಾರವನ್ನು ಆಯಾ ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಬಿಟ್ಟು ಬಿಡಲಾಗಿದೆ. ಜತೆಗೆ ಸದ್ಯಕ್ಕೆ ಸರಕಾರಿ ಲಸಿಕಾ ಕೇಂದ್ರಗಳಲ್ಲಿ ಮಾತ್ರವೇ ಈ ಸೌಲಭ್ಯವಿದ್ದು, ಖಾಸಗಿಯಲ್ಲಿ ಇರುವುದಿಲ್ಲ ಎಂದೂ ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ. 45 ವರ್ಷ ದಾಟಿದವರಿಗೆ ಈಗಲೂ ಸ್ಥಳದಲ್ಲೇ ನೋಂದಣಿ ಮಾಡುವ ಅವಕಾಶವಿದೆ.

ಸ್ಪುಟ್ನಿಕ್‌ ವಿ ಲಸಿಕೆ ಉತ್ಪಾದನೆ ಶುರು
ಹೊಸದಿಲ್ಲಿ: ರಷ್ಯಾ ಸರಕಾರದ ರಷ್ಯನ್‌ ಡೈರೆಕ್ಟ್ ಇನ್ವೆಸ್ಟ್‌ಮೆಂಟ್‌ ಫ‌ಂಡ್‌ (ಆರ್‌ಡಿಐಎಫ್) ಮತ್ತು ದೇಶದ ಪ್ರಮುಖ ಔಷಧೋದ್ಯಮ ಸಂಸ್ಥೆ ಪನಾಸಿಯಾ ಬಯೋಟೆಕ್‌ ಸಹಭಾಗಿತ್ವದಲ್ಲಿ “ಸ್ಪುಟ್ನಿಕ್‌-ವಿ’ ಲಸಿಕೆಯ ಉತ್ಪಾದನೆ ಸೋಮವಾರ ಆರಂಭವಾಗಿದೆ. ಪ್ರತಿ ವರ್ಷ 10 ಕೋಟಿ ಡೋಸ್‌ಗಳನ್ನು ಹಿಮಾಚಲ ಪ್ರದೇಶದಲ್ಲಿ ರುವ ಪನೇಸಿಯಾ ಬಯೋಟೆಕ್‌ನ ಘಟಕದಲ್ಲಿ ಉತ್ಪಾದನೆ ಮಾಡಲಾಗುತ್ತದೆ. ಈ ಬಗ್ಗೆ ಹೊಸದಿಲ್ಲಿಯಲ್ಲಿ ಸೋಮವಾರ 2 ಸಂಸ್ಥೆಗಳು ಘೋಷಣೆ ಮಾಡಿವೆ. ಅಲ್ಲಿ ಉತ್ಪಾದನೆ ಮಾಡಲಾಗುವ ಲಸಿಕೆಗಳನ್ನು ಗುಣಮಟ್ಟ ಪರೀಕ್ಷೆಗಾಗಿ ರಷ್ಯಾದ ಗಮಾಲೆಯಾ ಕೇಂದ್ರಕ್ಕೆ ರವಾನಿಸಲಾಗುತ್ತದೆ. ಕಳೆದ ತಿಂಗಳು ಈ ಬಗ್ಗೆ ಎರಡೂ ಸಂಸ್ಥೆಗಳೂ ಒಪ್ಪಂದ ಮಾಡಿಕೊಂಡಿದ್ದವು. ಇದಲ್ಲದೆ ಹೈದರಾಬಾದ್‌ನ ಡಾ|ರೆಡ್ಡೀಸ್‌ ಲ್ಯಾಬೊರೇಟರಿ ಮತ್ತು ರಾಯಚೂರಿನ ಶಿಲ್ಪಾ ಮೆಡಿ ಕೇರ್‌ “ಸ್ಪುಟ್ನಿಕ್‌-ವಿ’ ಉತ್ಪಾದಿಸುವ ಬಗ್ಗೆ ಒಪ್ಪಂದಕ್ಕೆ ಸಹಿ ಹಾಕಿದ್ದವು.

ಟಾಪ್ ನ್ಯೂಸ್

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.