ನಿಡ್ಡೋಡಿ ಕೊಲತ್ತಾರು ಪದವಿನಲ್ಲಿ ಸುರಂಗ ಮಾರ್ಗ ಪತ್ತೆ

13 ಅಡಿ ಆಳ, 5 ಅಡಿ ವಿಸ್ತಾರ; ನೈಸರ್ಗಿಕವಾಗಿರುವ ಊಹೆ

Team Udayavani, May 24, 2021, 10:45 PM IST

ನಿಡ್ಡೋಡಿ ಕೊಲತ್ತಾರು ಪದವಿನಲ್ಲಿ ಸುರಂಗ ಮಾರ್ಗ ಪತ್ತೆ

ಮೂಡುಬಿದಿರೆ: ಉಷ್ಣ ವಿದ್ಯುತ್‌ ಸ್ಥಾವರ ಸ್ಥಾಪನೆಯ ಪ್ರಸ್ತಾವನೆಯಿಂದ ಕೆಲಕಾಲ ಸುದ್ದಿಯಾಗಿದ್ದ ಕಲ್ಲಮುಂಡ್ಕೂರು ಗ್ರಾ.ಪಂ. ವ್ಯಾಪ್ತಿ, ನಿಡ್ಡೋಡಿ ಗ್ರಾಮದ ಕೊಲತ್ತಾರುಪದವಿನಲ್ಲಿ ಸುರಂಗ ಮಾರ್ಗ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಇದು ನೈಸರ್ಗಿಕವಾಗಿ ನಿರ್ಮಿತವಾದುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಕೊಲತ್ತಾರಪದವು ಪ್ರದೇಶ ಮುರಕಲ್ಲನ್ನು ಹೊದ್ದು ಸಮತಟ್ಟಾಗಿದ್ದು, ಇಲ್ಲಿ ಬಹಳ ಸಂಖ್ಯೆಯಲ್ಲಿ ಕೆಂಪುಕಲ್ಲಿನ ಕೋರೆಗಳಿವೆ. ಇಂಥ ಒಂದು ಕಡೆಯಲ್ಲಿ ಕೋರೆಗೆಂದು ಅಗೆತ ನಡೆಸಿದಾಗ ಪುಟ್ಟ ಹೊಂಡವೊಂದು ಪತ್ತೆಯಾಗಿತ್ತು. ಇದನ್ನು ಬಿಡಿಸಿದಾಗ ಸುಮಾರು ಮೂರಡಿ ವೃತ್ತಾಕಾರದಲ್ಲಿ ಗೋಚರಿಸಿದ ಹೊಂಡದಲ್ಲಿ ಓರ್ವ ವ್ಯಕ್ತಿ ಕೊಂಚ ಕಷ್ಟ ಪಟ್ಟು ಇಳಿಯಬಹುದಾಗಿರುವುದು ಕಂಡುಬಂದಿತು. ಇದನ್ನು ಈ ಪರಿಸರದ ಕೃಷಿಕರಾದ ಮೆಲೊಯ್‌ ಮೊರಾಸ್‌, ಅಶ್ವತ್ಥಪುರ ಶ್ರೀನಿವಾಸ ಗೌಡ, ಜೋಯ್‌ ಡಿ’ಸೋಜಾ, ಸತೀಶ್‌ ವಂಟಿಮಾರ್‌ ಅವರು ಸ್ವತಃ ಹಗ್ಗ ಇಳಿಸಿ ಪರಿಶೀಲಿಸಿದಾಗ ಸುರಂಗ ಮಾರ್ಗದಂಥ ಸ್ವರೂಪ ಕಂಡು ಬಂದಿದೆ.

ಮೇಲ್ಭಾಗದಿಂದ ಸುಮಾರು 13 ಅಡಿ ಆಳಕ್ಕೆ ಇಳಿದಂತೆಲ್ಲ ಒಳಭಾಗದಲ್ಲಿ ಸುಮಾರು 5 ಅಡಿ ವಿಸ್ತೀರ್ಣದಲ್ಲಿ ಸುರಂಗಮಾರ್ಗ ಪೂರ್ವ-ಉತ್ತರ ದಿಕ್ಕಿನತ್ತ ಸಾಗಿದಂತೆ ಕಂಡುಬಂದಿದೆ ಎಂದೂ ಕೊಂಚ ದೂರದಲ್ಲಿ ಈ ಸುರಂಗ ಮಾರ್ಗಕ್ಕೆ ಅಡ್ಡಲಾಗಿ ದೊಡ್ಡ ಕಲ್ಲುಗಳು ಬಿದ್ದಿದ್ದು, ಇನ್ನು ಮಾರ್ಗವು ಮುಂದವರಿದಿರುವ ಸಾಧ್ಯತೆ ಇದೆ ಎಂದೂ ಟಾರ್ಚ್‌, ಮೊಬೈಲ್‌ ಲೈಟ್‌ ಸಹಿತ ಇಳಿದವರು ತಿಳಿಸಿದ್ದಾರೆ.

ಗುಡ್ಡ ಪ್ರದೇಶದಲ್ಲಿ ನೀರು ಇಂಗಿದ ಪರಿಣಾಮವಾಗಿ, ಇಲ್ಲವೇ ಒಳಗೊಳಗೇ ಹುಟ್ಟಿಕೊಂಡ ನೀರಿನ ಒರತೆಯ ಹಲವು ಮೂಲಗಳು ಒಂದಾಗಿ ಹರಿದ ರಭಸಕ್ಕೆ ನೈಸರ್ಗಿಕವಾಗಿ ಇದು ನಿರ್ಮಾಣವಾಗಿರುವ ಸಾಧ್ಯತೆ ಇದೆ ಎಂದು ಸ್ಥಳೀಯ ಹಿರಿಯರು ಅಭಿಪ್ರಾಯಪಡುತ್ತಿದ್ದಾರೆ.

ಕಂದಾಯ ಇಲಾಖೆ, ಭೂಗರ್ಭ ಇಲಾಖೆ, ಪುರಾತತ್ವ ಇಲಾಖೆಯವರು ಸೂಕ್ತವಾಗಿ ಈ ಹೊಂಡ, ಸುರಂಗ ಸ್ವರೂಪವನ್ನು ಪರಿಶೀಲಿಸಿ, ನಿಜ ಸ್ವರೂಪವನ್ನು ದಾಖಲಿಸಬಹುದಾಗಿದೆ.

ಅಪಾಯ
ಈ ಭಾಗದಲ್ಲಿ ಜನವಸತಿ ಇಲ್ಲದೇ ಇರುವುದರಿಂದ ಅಕಸ್ಮಾತ್‌ ಜಾನುವಾರು, ವಿಷಯ ಗೊತ್ತಿಲ್ಲದೆ ಸುಮ್ಮನೇ ಅಡ್ಡಾಡುವವರು ಈ ಹೊಂಡಕ್ಕೆ ಬಿದ್ದು ಪ್ರಾಣಾಪಾಯ ಉಂಟಾಗಬಹುದಾದ ಕಾರಣ ಕಲ್ಲಮುಂಡ್ಕೂರು ಪಂಚಾಯತ್‌ನವರು ತತ್‌ಕ್ಷಣ ಸ್ಥಳ ಪರಿಶೀಲನೆ ನಡೆಸಿ ಅಲ್ಲಿ ಸೂಕ್ತ ಬೇಲಿ ವ್ಯವಸ್ಥೆ ಮಾಡಬೇಕಾಗಿದೆ.

ಟಾಪ್ ನ್ಯೂಸ್

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.