ರಾಜ್ಯದ ಮೊದಲ ಪಶುಸಂಗೋಪನಾ ವಾರ್ ರೂಮ್ ಸದ್ಯದಲ್ಲೇ ಲೋಕಾರ್ಪಣೆ : ಸಚಿವ ಪ್ರಭು ಚವ್ಹಾಣ್


Team Udayavani, May 25, 2021, 7:38 PM IST

ರಾಜ್ಯದ ಮೊದಲ ಪಶುಸಂಗೋಪನಾ ವಾರ್ ರೂಮ್ ಸದ್ಯದಲ್ಲೇ ಲೋಕಾರ್ಪಣೆ : ಸಚಿವ ಪ್ರಭು ಚವ್ಹಾಣ್

ಬೆಂಗಳೂರು : ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ ಜಾನುವಾರು ಸಾಕಾಣಿಕೆಯಲ್ಲಿ ತೊಡಗಿದವರಿಗೆ ಮಾರ್ಗದರ್ಶನ ನೀಡಲು ಸುಸಜ್ಜಿತವಾದ ವಾರ್ ರೂಮ್ ಅನುಷ್ಠಾನಗೊಳ್ಳಲಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವರು ಜಾನುವಾರು ಸಾಕಾಣೆಗೆ ಸಂಬಂಧಿಸಿದ ಸಮಗ್ರ ಮಾಹಿತಿಯನ್ನು ನೀಡಲು ಸುಸಜ್ಜಿತವಾದ ವಾರ್ ರೂಮ್ ರಾಜ್ಯದಲ್ಲಿ ಕಾರ್ಯನಿರ್ವಹಿಸಲು ತಯಾರಾಗಿದ್ದು ರೈತರು, ಜಾನುವಾರು ಸಾಕಾಣೆದಾರರು, ಪ್ರಾಣಿಪ್ರಿಯರು ಇದರ ಅನುಕೂಲ ಪಡೆಯಬಹುದಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಜಾನುವಾರುಗಳ ಆರೋಗ್ಯ, ಸಾಕುವ ವಿಧಾನ, ಆರೋಗ್ಯ ಸಮಸ್ಯೆ, ತಕ್ಷಣಕ್ಕೆ ಚಿಕಿತ್ಸೆ, ಔಷಧೋಪಚಾರ ಇತ್ಯಾದಿಗಳ ಬಗ್ಗೆ ವಿಷಯ ತಜ್ಞರು ವಾರ್ ರೂಮ್ ಮೂಲಕ ಮಾಹಿತಿ ನೀಡಲಿದ್ದಾರೆ ಎಂದರು.

ವಾರ್ ರೂಮ್, ದಿನದ 24 X 7 ಕಾರ್ಯನಿರ್ವಹಿಸಲಿದ್ದು, ವಿಪತ್ತು ನಿರ್ವಹಣಾ ನಿಯಂತ್ರಣ ಕೇಂದ್ರವು (ವಾರ್ ರೂಮ್)  ಪಶುಸಂಗೋಪನೆ ಇಲಾಖೆಯ 4212 ಸಂಸ್ಥೆಗಳು, 2900 ಪಶುವೈದ್ಯರು ಮತ್ತು 2200 ಪಶುವೈದ್ಯಕೀಯ ಸಿಬ್ಬಂದಿ ಹೆಚ್ಚಿನ ಸೇವೆ ಒದಗಿಸಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ :ಮಧುಮೇಹಿಗಳಿಗೆ ಬ್ಲ್ಯಾಕ್ ಫಂಗಸ್ ಅಪಾಯಕಾರಿ..!? ಮುನ್ನೆಚ್ಚರಿಕಾ ಕ್ರಮಗಳೇನು..?

ಪ್ರತಿಕ್ರಿಯಾ ತಂಡವು ಜಿಲ್ಲೆ, ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಕಾರ್ಯನಿರ್ವಹಿಸಲಿವೆ. ವಾರ್ ರೂಮ್ ಗೆ ಕರೆ ಬಂದ ಕೆಲವೆ ಗಂಟೆಗಳಲ್ಲಿ ತಂಡ ಮಾಹಿತಿ ಆಧಾರದ ಮೇಲೆ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಹಾರ ನೀಡಲಿದೆ ಎಂದರು.

ವಾರ್ ರೂಮ್ ವೈಶಿಷ್ಠ್ಯತೆಗಳು

– ದಿನದ 24 ಗಂಟೆ ಸೇವೆ ಲಭ್ಯವಾಗಲಿದೆ. ಟೋಲ್ ಫ್ರೀ ನಂಬರ್ ವ್ಯವಸ್ಥೆ ಒಳಗೊಂಡಿದೆ.
– ಪಶುಸಂಗೋಪನಾ ಕ್ಷೇತ್ರದಲ್ಲಿನ ಅಧುನಿಕ ವಿಧಾನಗಳ ಬಗ್ಗೆ ಈಮೇಲ್, ಹತ್ತಿರದ ಪಶುವೈದ್ಯ ಸಂಸ್ಥೆ, ಮುದ್ರಿತ ಪ್ರತಿ, ಆಡಿಯೋ ವಿಡಿಯೋ, ಸಾಮಾಜಿಕ ಜಾಲತಾಣಗಳ ಮೂಲಕ ರೈತರಿಗೆ ನಿರಂತರವಾಗಿ ಮಾಹಿತಿ ನೀಡುವುದು.
– ಇಲಾಖೆಯಲ್ಲಿ ಮೊಬೈಲ್ ಸಂಖ್ಯೆ ನೋಂದಾಯಿಸಿಕೊಳ್ಳುವ ರೈತರ ಮೊಬೈಲ್ ಗೆ ಪಶುಗಳಿಗೆ ನೀಡಲಾಗುವ ಲಸಿಕೆ, ರೋಗೊದ್ರೇಕ ಸಾಧ್ಯತೆ ಬಗ್ಗೆ ಮಾಹಿತಿ ನೀಡುವುದು.
– ಜಾನುವಾರುಗಳಿಗೆ ಚಿಕಿತ್ಸೆ ಅವಶ್ಯಕತೆ ಇದ್ದ ರೈತರ ವಾರ್ ರೂಮ್ ಸಂಪರ್ಕಿಸಿದಾಗ ಹತ್ತಿರದ ಪಶುವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಿ ಚಿಕಿತ್ಸೆಯ ವ್ಯವಸ್ಥೆ ಕಲ್ಪಿಸಿವುದು.
– ಬೀಡಾಡಿ ದನ ಹಾಗೂ ಇತರೆ ಪ್ರಾಣಿಗಳ ಬಗ್ಗೆ ಸಾರ್ವಜನಿಕರು ನೀಡುವ ದೂರನ್ನು ಆಧರಿಸಿ ಹತ್ತಿರದ ಪಶುವೈದ್ಯರು ಚಿಕಿತ್ಸೆ ನೀಡುವಂತೆ ನೋಡಿಕೊಳ್ಳುವುದು.
– ಇಲಾಖೆಯಿಂದ ಅನುಷ್ಟಾನಗೊಳ್ಳುತ್ತಿರುವ ಯೋಜನೆಗಳ ವಿವರ, ಅವುಗಳನ್ನು ಪಡೆಯಲು ಬಳಸಬೇಕಾದ ಪ್ರಕ್ರಿಯೆ, ಡೈರಿ, ಹಂದಿ ಸಾಕಾಣಿಕೆ, ಮೇಕೆ, ಕೋಳಿ ಇತ್ಯಾದಿಗಳ ಸಾಕಾಣಿಕೆ ವಿವರ ನೀಡುವುದು.
– ಪ್ರಕೃತಿ ವಿಕೋಪದ ಸಂದರ್ಭದಲ್ಲಿ ನೋಂದಾಯಿತ ರೈತರ ಮೋಬೈಲ್ ಗೇ ಎಸ್.ಎಮ್.ಎಸ್ ಅಲರ್ಟ್ ನೀಡುವುದು
– ವಿವಿಧ ಜಾನುವಾರುಗಳ ಮಾರುಕಟ್ಟೆ ಲಭ್ಯತೆ, ದರಗಳ ಕುರಿತು ಮಾಹಿತಿ ನೀಡುವುದು.
– ಸ್ಥಳಿಯ/ವಿದೇಶಿ ಪಶು ತಳಿಗಳ ಬಗ್ಗೆ ಮಾಹಿತಿ ನೀಡುವುದು.
– ಬ್ಯಾಂಕ್ ಗಳಿಂದ ಸಾಲದ ಸೌಲಭ್ಯದ ಮಾಹಿತಿ ನೀಡುವುದು
– ಮೇವಿನ ಉತ್ಪಾದನೆ, ಮೇವಿನ ಬೀಜಗಳ ಕಿಟ್ ಕುರಿತು ಮಾಹಿತಿ ನೀಡುವುದು.
– ತಂತ್ರಜ್ಞಾನ ಬಳಸಿ ಗೋಶಾಲೆಗಳ ನಿರ್ವಹಣೆ ಮತ್ತು ಮಾಹಿತಿ ನೀಡುವುದು.
– ಗೋಹತ್ಯೆ ಪ್ರತಿಬಂಧಕ ಕಾಯ್ದೆ ಅನುಷ್ಟಾನದ ಕುರಿತಾಗಿ ಸಾರ್ವಜನಿಕರಿಂದ ಬರುವ ದೂರುಗಳನ್ನು ಆಯಾ ಕ್ಷೇತ್ರದ ವ್ಯಾಪ್ತಿಗೆ ಬರುವ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದು.
– ಪಶುಸಂಜೀವಿನಿ, ಅಂಬುಲೇಟರಿ ಕ್ಲಿನಿಕ್ ಗಳನ್ನು ತಜ್ಞ ವೈದ್ಯರೊಂದಿಗೆ ಚಿಕಿತ್ಸೆಗೆ ವ್ಯವಸ್ಥೆ ಮಾಡುವುದು.
– ತಜ್ಞರೊಂದಿಗೆ ಜಾನುವಾರುಗಳ ಆರೋಗ್ಯ, ಆಹಾರ, ಔಷಧಿಗಳ ಕುರಿತು ಸಂವಹನ ನಡೆಸುವ ವ್ಯವಸ್ಥೆ
– ಚಿಕಿತ್ಸಾಲಯಗಳಲ್ಲಿ ವೈದ್ಯರ ಲಭ್ಯತೆಯನ್ನು ತಂತ್ರಜ್ಞಾನ ಆಧಾರಿತವಾಗಿ ತಿಳಿಸುವ ವ್ಯವಸ್ಥೆ.
– ಲಭ್ಯ ತಂತ್ರಜ್ಞಾನವನ್ನು ಬಳಸಿ ವಿವಿಧ ಮಾಧ್ಯಮಗಳ ಮೂಲಕ ರೈತರಿಗೆ ಮಾಹಿತಿ ತಲುಪಿಸುವುದು ಹಾಗೂ ರೈತರಿಗೆ ಅವರ ಕುಂದುಕೊರತೆಗಳ ಬಗ್ಗೆ ದೂರವಾಣಿ ಮೂಲಕ ನೀಡುವ ಮಾಹಿತಿಯನ್ನು ಸಂಬಂಧಿಸಿದ ಅಧಿಕಾರಿಗಳಿಗೆ ರವಾನಿಸಿ ಸೂಕ್ತ ಪರಿಹಾರವನ್ನು ಒದಗಿಸುವುದು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.