ಯೋಗೇಶ್ವರ್ ಒಬ್ಬ 420, ಆತನನ್ನು ಸಂಪುಟದಿಂದ ವಜಾ ಮಾಡಿ ಬಂಧಿಸಬೇಕು: ರೇಣುಕಾಚಾರ್ಯ ವಾಗ್ದಾಳಿ


Team Udayavani, May 27, 2021, 5:59 PM IST

ಯೋಗೇಶ್ವರ್ ಒಬ್ಬ 420, ಆತನನ್ನು ಸಂಪುಟದಿಂದ ವಜಾ ಮಾಡಿ ಬಂಧಿಸಬೇಕು: ರೇಣುಕಾಚಾರ್ಯ ವಾಗ್ದಾಳಿ

ಹೊನ್ನಾಳಿ: ತನ್ನ ಕ್ಷೇತ್ರದಲ್ಲಿ ಅಸ್ತಿತ್ವ ಕಳೆದುಕೊಂಡು ಈಗ ದೆಹಲಿಗೆ ಓಡಾಡಿದರೆ ಫಲಪ್ರದವಾಗುವುದಿಲ್ಲ. ಸಚಿವ ಸಿ.ಪಿ. ಯೋಗೇಶ್ವರ ಒಬ್ಬ 420,  ಕಳ್ಳನಂತೆ ಕಾರ್ಯ ಮಾಡುತ್ತಿದ್ದಾನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ನೇರವಾಗಿ ಏಕವಚನದಲ್ಲಿ ಯೋಗೇಶ್ವರ ವಿರುದ್ಧ  ಹರಿಹಾಯ್ದರು.

ಗುರುವಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಪಿ ಯೋಗೇಶ್ವರ್‌ಗೆ ಲೂಟಿ ಮಾಡುವ ಖಾತೆ ಬೇಕಂತೆ. ಖಾತೆ ಹೆಸರಿನಲ್ಲಿ ಬ್ಲಾಕ್ ಮೇಲ್ ಮಾಡಲು ಬಂದರೆ, ನಾವು ಸುಮ್ಮನಿರಲ್ಲ. ಜನರ ರಕ್ಷಣೆ ಮಾಡುವ ಬದಲು ಈ ರೀತಿ ರಾಜಕಾರಣ ಮಾಡುವುದು ಸರಿಯಲ್ಲ. ಇಂಥವರಿಂದಲೇ ಪಕ್ಷಕ್ಕೆ ಧಕ್ಕೆಯಾಗುತ್ತದೆ. ನೇರಾನೇರ ನೀನು ಅಖಾಡಕ್ಕೆ ಬಾ. ನನಗೆ ಹೇಗೆ ಪಟ್ಟು ಹಾಕಬೇಕು ಎಂದು ಗೊತ್ತಿದೆ. ಸಚಿವನಾಗಲು ಕಾಲು ಹಿಡಿದವನು ಈಗ ಅವರ ವಿರುದ್ಧವೇ ಮಾತನಾಡುತ್ತೀಯಾ ಎಂದು ಆಕ್ರೋಶ ವ್ಯಕ್ತಪಡಿಸಿದ ರೇಣುಕಾಚಾರ್ಯ, ಯಡಿಯೂರಪ್ಪನವರು ನಿನಗೆ ಸಚಿವನನ್ನಾಗಿ ಮಾಡಿದ್ದೇ ದೊಡ್ಡ ತಪ್ಪು ಎಂದರು.

ವಜಾ ಮಾಡಿ ಬಂಧಿಸಬೇಕು: ಬಿಜೆಪಿ ಮೂರು ಭಾಗವಾಗಿದೆ ಎಂದು ಹೇಳಲು, ಶಾಸಕಾಂಗ ಪಕ್ಷದ ಸಭೆ ಕರೆಯಿರಿ ಎಂದು ಹೇಳಲು ಸಿ.ಪಿ. ಯೋಗೇಶ್ವರ್‌ಗೆ ಯಾವ ನೈತಿಕತೆಯೂ ಇಲ್ಲ. ಮೆಗಾಸಿಟಿ ಹಗರಣದಲ್ಲಿ ಕೂಡಲೇ ಅವರನ್ನು ಬಂಧಿಸಬೇಕು ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ ಎಂದ ಅವರು ಮುಖ್ಯಮಂತ್ರಿಯವರು ಕೂಡಲೇ ಅವರನ್ನು ಮಂತ್ರಿ ಮಂಡಲದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ:ಬಿಜೆಪಿ ಶುದ್ಧ ಸರ್ಕಾರವಾಗಿ ಉಳಿದಿಲ್ಲ, ಮೂರು ಗುಂಪಿನ ಸರ್ಕಾರವಾಗಿದೆ : ಸಿ.ಪಿ ಯೋಗೇಶ್ವರ್

ಯಾರು ಪಕ್ಷದಲ್ಲಿ ತಲೆ ಹರಟೆ ಮಾಡುತ್ತಾರೋ ಅವರನ್ನು ಉಚ್ಛಾಟಿಸಿ ಎಂದು 65 ಶಾಸಕರು ಸಹಿ ಮಾಡಿದ ಪತ್ರ ನನ್ನ ಬಳಿ ಇದೆ. ಅಗತ್ಯ ಬಿದ್ದಾಗ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರಿಗೆ ತಲುಪಿಸುತ್ತೇನೆ. ಸಿಪಿ ಯೋಗೇಶ್ವರ್ ಹಿಂಬಾಗಿಲಿನಿಂದ ವಿಧಾನಸೌಧ ಪ್ರವೇಶಿಸಿ ಮಂತ್ರಿಗಿರಿ ಗಿಟ್ಟಸಿಕೊಂಡಿದ್ದಾನೆ. ಈತನಿಗೆ ಬಿಜೆಪಿ ತತ್ವ ಸಿದ್ಧಾಂತ ಯಾವುದು ಬೇಡವಾಗಿ ಪಕ್ಷದಲ್ಲಿ ಹುಳಿ ಹಿಂಡುವ ಕೆಲಸ ಮಾಡುತ್ತಿದ್ದಾನೆ. ಮುಂದಿನ ದಿನಗಳಲ್ಲಿ ಜನರು ಪಾಠ ಕಲಿಸುತ್ತಾರೆ ಎಂದರು.

ಕೊರೊನಾದಿಂದ ಜನರು ನೊಂದು, ಬೆಂದು ಹೋಗಿದ್ದಾರೆ. ಈ ಸಮಯದಲ್ಲಿ ದೆಹಲಿಗೇಕೆ ಹೋಗಬೇಕಿತ್ತು. ಅನಾವಶ್ಯವಾಗಿ ಸಮಸ್ಯೆಗಳನ್ನು ಹುಟ್ಟು ಹಾಕುವುದು ಬೇಕಿತ್ತೇ? ಯೋಗೇಶ್ವರ್ ದೆಹಲಿಯಲ್ಲಿ ಯಾವ ನಾಯಕರನ್ನು ಭೇಟಿ ಮಾಡಿಲ್ಲ. ಅವರ ಗೇಟು ಮುಟ್ಟಿ ಬಂದು ಪೋಟೋ ತೆಗೆಸಿಕೊಂಡಿದ್ದಾನೆ. ಮನೆ ಗೆದ್ದು ಮಾರು ಗೆಲ್ಲು ಎಂದು ನಮ್ಮ ಹಿರಿಯರು ಹೇಳಿದ್ದಾರೆ. ತನ್ನ ಕ್ಷೇತ್ರದಲ್ಲಿ  ಗೆಲ್ಲಲಾಗದ ಸಿಪಿವೈ ದೆಹಲಿಗೆ ಹೋಗುತ್ತಾನೆ. ಈಗಲಾದರೂ ಒಣ ರಾಜಕೀಯ ಬಿಟ್ಟು ಕ್ಷೇತ್ರದಲ್ಲಿ ಸಂಚರಿಸಿ ಕೊರೊನಾ ಜಾಗೃತಿ ಮಾಡಲಿ ಎಂದು ತಾಕೀತು ಮಾಡಿದರು.

ಕೋವಿಡ್ ಮೊದಲ ಹಂತವನ್ನು ಪಿಎಂ ಹಾಗೂ ಸಿಎಂ ಸಮರ್ಥವಾಗಿ ನಿಭಾಯಿಸಿದ್ದು ಎರಡನೇ ಅಲೆ ಆರಂಭವಾಗಿದೆ.  ಮುಖ್ಯಮಂತ್ರಿ ಬಿಎಸ್‌ವೈ ಕೊರೊನಾ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಕ್ಷೇತ್ರದ ಶಾಸಕರು ಕ್ಷೇತ್ರದ ಕಾವಲುಗಾರನಾಗಿ ಕೆಲಸ ಮಾಡ ಬೇಕಿದೆ. ನಮ್ಮ ನಾಯಕರು ಯಾವತ್ತಿದ್ದರೂ ಯಡಿಯೂರಪ್ಪ. ನಾಯಕತ್ವ ಬದಲಾವಣೆ ಸಾಧ್ಯವಿಲ್ಲ. ಯಾವುದೇ ಕಾರಣಕ್ಕೂ ಶಾಸಕಾಂಗ ಸಭೆ ಕರೆಯುವ ಅವಶ್ಯಕತೆಯೂ ಇಲ್ಲ  ಎಂದರು.

ಮಂತ್ರಿ ಸ್ಥಾನಕ್ಕಾಗಿ ಕಾಲು ಹಿಡಿದವನು: ಬೇರೆ ಪಕ್ಷದಿಂದ ಬಂದು ಯಡಿಯೂರಪ್ಪನವರ ಆಶೀರ್ವಾದದಿಂದ ಶಾಸಕನಾಗಿದ್ದಾನೆ. ಸದಾನಂದ ಗೌಡರ ಅವಧಿಯಲ್ಲಿ ಅರಣ್ಯ ಸಚಿವರಾಗಿ ಲೂಟಿ ಹೊಡೆದಿದ್ದಾನೆ. ನಂತರ ನಮ್ಮ ಪಕ್ಷ ಬಿಟ್ಟು ಸೈಕಲ್ ಏರಿ ಮತ್ತೆ ಬಿಜೆಪಿ ಸೇರಿದ್ದಾನೆ. ಬೆಂಗಳೂರಿನ ಶಿವಾನಂದ ಸರ್ಕಲ್ ನಲ್ಲಿರುವ ಪ್ಲಾಟ್‌ನಲ್ಲಿ ವಿಜಯೇಂದ್ರ ಅವರ ಖಾಲಿಗೆ ಬಿದ್ದು “ವಿಜಯಣ್ಣ ನನ್ನ ಮಂತ್ರಿ ಮಾಡಿ” ಎಂದಿದ್ದು ನಾನು ನೋಡಿದ್ದೇನೆ, ಅದೇ ರೀತಿ ಕಾವೇರಿ ಭವನದಲ್ಲಿ ಯಡಿಯೂರಪ್ಪ ಕಾಲು ಹಿಡಿದಿದ್ದನ್ನು ನಾನೇ ನೋಡಿದ್ದೇನೆ ಎಂದು ರೇಣುಕಾಚಾರ್ಯ ಹೇಳಿದರು.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.