ಎಲ್ಲರ ಕುತೂಹಲ ಡೊಮಿನಿಕಾ ದೇಶದ ಬಗ್ಗೆ…ಭಾರತಕ್ಕೆ ಚೋಕ್ಸಿಯನ್ನು ಗಡಿಪಾರು ಮಾಡಲು ಸಾಧ್ಯವೇ?

ಡೊಮಿನಿಕಾದ ಕಾಮನ್ ವೆಲ್ತ್ ಹೈಕೋರ್ಟ್ ವಜ್ರೋದ್ಯಮಿ ಮೆಹೂಲ್ ಜೋಕ್ಸಿಯನ್ನು ಭಾರತಕ್ಕೆ ಗಡಿಪಾರುವುದಕ್ಕೆ ತಡೆ ನೀಡಿದೆ.

Team Udayavani, May 28, 2021, 11:33 AM IST

ಎಲ್ಲರ ಕುತೂಹಲ ಡೊಮಿನಿಕಾ ದೇಶದ ಬಗ್ಗೆ…ಭಾರತಕ್ಕೆ ಚೋಕ್ಸಿಯನ್ನು ಗಡಿಪಾರು ಮಾಡಲು ಸಾಧ್ಯವೇ?

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಭಾರತದಿಂದ ಪರಾರಿಯಾಗಿ ಆ್ಯಂಟಿಗುವಾದಲ್ಲಿ ನೆಲೆಸಿದ್ದ ವಜ್ರೋದ್ಯಮಿ ಮೆಹೂಲ್ ಚೋಕ್ಸಿಯನ್ನು ದ್ವೀಪರಾಷ್ಟ್ರದಲ್ಲಿ ಬಂಧಿಸಿದ ತರುವಾಯ ಭಾರತದಲ್ಲಿ ಅತೀ ಹೆಚ್ಚು ಜನರು ಡೊಮಿನಿಕಾ ದೇಶದ ಬಗ್ಗೆ ಸರ್ಜ್ (ಶೋಧಿಸು) ಮಾಡಿರುವ ಅಂಶ ಬೆಳಕಿಗೆ ಬಂದಿದೆ.

ಇದನ್ನೂ ಓದಿ:ಕೋವಿಡ್ ನಿಂದ ದೂರವಿರಲು ಹಾವು ತಿಂದ ತಮಿಳುನಾಡಿನ ವ್ಯಕ್ತಿಯ ಬಂಧನ

62ವರ್ಷದ ಮೆಹೂಲ್ ಚೋಕ್ಸಿ ಭಾರತದಿಂದ ಪರಾರಿಯಾದ ನಂತರ 2018ರಿಂದ ಆ್ಯಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸ್ತವ್ಯ ಹೂಡಿದ್ದ. ಏತನ್ಮಧ್ಯೆ ಭಾನುವಾರ ಚೋಕ್ಸಿ ಆ್ಯಂಟಿಗುವಾದಿಂದ ನಿಗೂಢವಾಗಿ ಕಣ್ಮರೆಯಾಗಿದ್ದ. ಆದರೆ ದಿಢೀರ್ ಬೆಳವಣಿಗೆಯಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಚೋಕ್ಸಿಯನ್ನು ಡೋಮಿನಿಕಾ ಗಣರಾಜ್ಯದಲ್ಲಿ ಅಧಿಕಾರಿಗಳು ಬಂಧಿಸಿ ವಶಕ್ಕೆ ತೆಗೆದುಕೊಂಡಿದ್ದರು.

ಚೋಕ್ಸಿಯನ್ನು ಡೊಮಿನಿಕಾದಲ್ಲಿ ಬಂಧಿಸಿರುವ ಸುದ್ದಿ ಬಹಿರಂಗವಾಗುತ್ತಿದ್ದಂತೆಯೇ ಎಲ್ಲರ ಮನಸ್ಸಿನಲ್ಲಿ ಮೂಡಿದ್ದು, ಡೊಮಿನಿಕಾ ದೇಶ ಎಲ್ಲಿದೆ? ಅಲ್ಲಿನ ನೀತಿ, ನಿಯಮಗಳೇನು ಎಂಬ ಬಗ್ಗೆ ಜನರು ಗೂಗಲ್ ನಲ್ಲಿ ಹೆಚ್ಚು ಸರ್ಜ್ ಮಾಡಿ ಮಾಹಿತಿ ಕಲೆಹಾಕಿದ್ದರು ಎಂದು ವರದಿ ತಿಳಿಸಿದೆ.

“ಡೊಮಿನಿಕಾ ಪೂರ್ವ ಕೆರಿಬಿಯನ್ ಸಮುದ್ರ ಪ್ರದೇಶದಲ್ಲಿದೆ. ಈ ದ್ವೀಪ ರಾಷ್ಟ್ರ ಲೆಸ್ಸರ್ ಆ್ಯಂಟಿಲ್ಲೀಸ್ ದ್ವೀಪಸಮೂಹದಲ್ಲಿರುವ ವಿಂಡ್ವರ್ಡ್ ದ್ವೀಪ ಸಮೂಹಗಳ ಒಂದು ಭಾಗವಾಗಿದೆ. ಡೊಮಿನಿಕಾದ ರೋಸೌ ಈ ದೇಶದ ರಾಜಧಾನಿ ಮತ್ತು ಮುಖ್ಯ ಬಂದರು ಪ್ರದೇಶವಾಗಿದೆ. ಇದು ದ್ವೀಪದ ಪಶ್ಚಿಮಭಾಗದಲ್ಲಿದೆ”.

ಡೊಮಿನಿಕಾ ದ್ವೀಪ ರಾಷ್ಟ್ರ 750 ಚದರ ಕಿಲೋಮೀಟರ್ ನಷ್ಟು ವ್ಯಾಪ್ತಿ ಹೊಂದಿದೆ. ಅಂದಾಜು 75 ಸಾವಿರ ಜನಸಂಖ್ಯೆಯನ್ನು ಹೊಂದಿದೆ. ಇಲ್ಲಿ ಇಂಗ್ಲಿಷ್ ಭಾಷೆಯನ್ನು ಹೆಚ್ಚಾಗಿ ಬಳಸಲಾಗುತ್ತಿದೆ. ರೂಸ್ವೆ.ಲ್ಟ್ ಸ್ಕೆರಿಟ್ ಡೊಮಿನಿಕಾದ ಪ್ರಧಾನಿಯಾಗಿದ್ದಾರೆ. ಇವರು ಸತತ ನಾಲ್ಕು ಬಾರಿ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರಕ್ಕೆ ಏರಿದ್ದರು ಎಂದು ವರದಿ ತಿಳಿಸಿದೆ.

ಭಾರತದಿಂದ ಚೋಕ್ಸಿ ಪರಾರಿಯಾದ ನಂತರ ಕೆರಿಬಿಯನ್ ಸಮುದ್ರ ಪ್ರದೇಶವನ್ನು ಆವರಿಸಿಕೊಂಡಿರುವ ಆ್ಯಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸ್ತವ್ಯ ಹೂಡಿದ್ದ. ಪ್ರಮುಖ ದ್ವೀಪಪ್ರದೇಶವಾದ ಆ್ಯಂಟಿಗುವಾ ಮತ್ತು ಬಾರ್ಬುಡಾ ಇತರ ಪುಟ್ಟ ದ್ವೀಪಗಳನ್ನೂ ಒಳಗೊಂಡಿದ್ದು, ಸೇಂಟ್ ಜಾನ್ಸ್ ಇದರ ರಾಜಧಾನಿಯಾಗಿದೆ. ಆ್ಯಂಟಿಗುವಾದಿಂದ ಡೊಮಿನಿಕಾ ಸುಮಾರು 188.55 ಕಿಲೋ ಮೀಟರ್ ದೂರದಲ್ಲಿದೆ.

ಮೆಹೂಲ್ ಚೋಕ್ಸಿಯನ್ನು ಡೊಮಿನಿಕಾದಿಂದ ಭಾರತಕ್ಕೆ ಗಡಿಪಾರು ಮಾಡಲು ಸಾಧ್ಯವೇ?
ಡೊಮಿನಿಕಾದ ಕಾಮನ್ ವೆಲ್ತ್ ಹೈಕೋರ್ಟ್ ವಜ್ರೋದ್ಯಮಿ ಮೆಹೂಲ್ ಜೋಕ್ಸಿಯನ್ನು ಭಾರತಕ್ಕೆ ಗಡಿಪಾರುವುದಕ್ಕೆ ತಡೆ ನೀಡಿದೆ. ಡೊಮಿನಿಕಾದ ಅಧಿಕಾರಿಗಳ ಪ್ರಕಾರ, ಚೋಕ್ಸಿಯನ್ನು ಆ್ಯಂಟಿಗುವಾಕ್ಕೆ ವಾಪಸ್ ಕಳುಹಿಸಲಾಗುವುದು. ಚೋಕ್ಸಿ ಆ್ಯಂಟಿಗುವಾದ ಪ್ರಜೆಯಾಗಿದ್ದಾರೆ. ಕಾನೂನು ಬಾಹಿರವಾಗಿ ಡೊಮಿನಿಕಾ ಪ್ರವೇಶಿಸಿದ್ದ ಚೋಕ್ಸಿ ವಿರುದ್ಧ ಕಾನೂನು ಪ್ರಕಾರ ನಾವು ಆ್ಯಂಟಿಗುವಾ/ಬಾರ್ಬುಡಾಕ್ಕೆ ವಾಪಸ್ ಕಳುಹಿಸಬೇಕಾಗಿದೆ ಎಂದು ಡಬ್ಲ್ಯುಐಸಿ ನ್ಯೂಸ್ ಗೆ
ತಿಳಿಸಿದ್ದಾರೆ.

ಚೋಕ್ಸಿ ಪರ ವಕೀಲರು ಕೂಡಾ ಭಾರತಕ್ಕೆ ಗಡಿಪಾರು ಮಾಡುವ ಸಾಧ್ಯತೆಯನ್ನು ತಳ್ಳಿ ಹಾಕಿದ್ದರು. ಮೆಹೂಲ್ ಚೋಕ್ಸಿ ಈಗ ಭಾರತದ ಪ್ರಜೆಯಲ್ಲ, ಆತ ಆ್ಯಂಟಿಗುವಾದ ನಾಗರಿಕ. ಅಲ್ಲದೇ ವಲಸೆ ಮತ್ತು ಪಾಸ್ ಪೋರ್ಟ್ ಕಾಯ್ದೆ ಸೆಕ್ಷನ್ 17 ಮತ್ತು 23ರ ಪ್ರಕಾರ ಚೋಕ್ಸಿಯನ್ನು ಆ್ಯಂಟಿಗುವಾಕ್ಕೆ ಮಾತ್ರ ಗಡಿಪಾರು ಮಾಡಬಹುದೇ ವಿನಃ, ಭಾರತಕ್ಕೆ ಸಾಧ್ಯವಿಲ್ಲ ಎಂದು ವಕೀಲ ವಿಜಯ್ ಅಗರ್ವಾಲ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.