ಸಂಕಷ್ಟದಲ್ಲಿರುವ ನೇಕಾರರಿಗೆ ನೆರವಾಗಿ : ರಾಜ್ಯ ಸರಕಾರಕ್ಕೆ ಮಾಜಿ ಸಚಿವೆ ಉಮಾಶ್ರೀ ಮನವಿ


Team Udayavani, May 28, 2021, 7:03 PM IST

ಸಂಕಷ್ಟದಲ್ಲಿರುವ ನೇಕಾರರಿಗೆ ನೆರವಾಗಿ : ರಾಜ್ಯ ಸರಕಾರಕ್ಕೆ ಮಾಜಿ ಸಚಿವೆ ಉಮಾಶ್ರೀ ಮನವಿ

ಮಹಾಲಿಂಗಪುರ : ಕಾರ್ಮಿಕ ಇಲಾಖೆಯಲ್ಲಿ ನೇಕಾರರನ್ನು ಕಾರ್ಮಿಕರು ಅಂತಾ ಸೇರಿಸಿ. ಪಾವರ್‌ ಲೂಮ್ ನೇಕಾರರಿಗೆ ಕನಿಷ್ಠ ಮೂರು ವರ್ಷ ನಿರಂತರ ಉಚಿತ ವಿದ್ಯುತ್ ನೀಡಬೇಕು. ಆ ನಿಟ್ಟಿನಲ್ಲಿ ಸಂಕಷ್ಟದಲ್ಲಿರುವ ನೇಕಾರರಿಗೆ ನೆರವಾಗಿ ಎಂದು ಮಾಜಿ ಸಚಿವೆ ಉಮಾಶ್ರೀ ಸರಕಾರಕ್ಕೆ ಮನವಿ ಮಾಡಿದರು.

ಶುಕ್ರವಾರ ಪಟ್ಟಣದ ಬನಶಂಕರಿ ದೇವಸ್ಥಾನದ ಆವರಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬೃಹತ್ ಕೈಗಾರಿಕೆ ಹೊರತುಪಡಿಸಿ ಸಣ್ಣ ಮತ್ತು ಗುಡಿ ಕೈಗಾರಿಕೆಗಳು ನಿರ್ಜೀವವಾಗಿವೆ. ಅನೇಕರು ನೇಣಿಗೆ ಶರಣಾಗಿದ್ದಾರೆ. ಮಾಧ್ಯಮಗಳ ಮುಖಾಂತರ ಕೆಲವು ಮಾತ್ರ ಬೆಳಕಿಗೆ ಬಂದಿವೆ. ಆರ್ಥಿಕ ಹಿನ್ನೆಡೆ ದೇಶ ಮಾತ್ರ ಆನುಭವಿಸುತ್ತಿಲ್ಲ. ಜನಸಾಮಾನ್ಯರೂ ಅನುಭವಿಸುತ್ತಿದ್ದು ಅದರಲ್ಲಿ ವಿವಿಧ ನೇಕಾರರೂ ಕೂಡಾ ಇದ್ದಾರೆ. ನೇಕಾರಿಕೆ ಉದ್ಯಮ ಪುನಶ್ಚೇತನಕ್ಕೆ ಸರ್ಕಾರ ಮುಂದೆ ಬರಲಿಲ್ಲ ಎಂದು ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ವಿದ್ಯುತ್ ಚಾಲಿತ ಮಗ್ಗಗಳ ಮಾಲಿಕರು ಹಾಕಿದ ಬಂಡವಾಳ ತುಕ್ಕು ಹಿಡಿದಿದೆ. ಈಗಾಗಲೇ ನೇಯ್ದ ಬಟ್ಟೆಯನ್ನು ಯಾರೂ ಖರೀದಿಸುತ್ತಿಲ್ಲ. ಮೊದಲು ಪವರಲೂಮ್‌ನಲ್ಲಿ ದಿನಕ್ಕೆ 3 ಸೀರೆ ನೇಯುತ್ತಿದ್ದ ನೇಕಾರನಿಗೆ ಗಂಜಿಯಾದರೂ ಸಿಗಲಿ ಎಂದು ಮಾಲಿಕರು 1 ಸೀರೆಯನ್ನಾದರೂ ನೇಯಲಿ ಎಂದು ಹೇಳಬೇಕೆಂದರೆ ನೂಲು, ಚಮಕಾ, ಬಣ್ಣ ಸಿಗುತ್ತಿಲ್ಲಾ. ಇದನ್ನೇ ನಂಬಿ ಬದುಕುವ ನೇಕಾರ ಏನು ಮಾಡಬೇಕು ಎಂದು ಸರಕಾರದ ವಿರುದ್ಧ ಕಿಡಿಕಾರಿದರು.

ಇದನ್ನೂ ಓದಿ :ವೀಡಿಯೋ ಕಾನ್ಫರೆನ್ಸ್ ನಲ್ಲಿ 3ಡಿ ಅನುಭವ ನೀಡಲಿದೆ ಗೂಗಲ್ ಪ್ರಾಜೆಕ್ಟ್ ಸ್ಟಾರ್‌ ಲೈನ್

ಅನೇಕ ಅವಕಾಶಗಳಿದ್ದರೂ ಸರ್ಕಾರ ಉದ್ಯಮವನ್ನು ಪುನ:ಶ್ಚೇತನ ಮಾಡಲು ಮುಂದೆ ಬರಲಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸರ್ಕಾರದಲ್ಲಿ ಬರ, ಅತಿವೃಷ್ಠಿ, ಅನಾವೃಷ್ಠಿ ಇತ್ತಾದರೂ ಅವರು ಸಹಾಯಕ್ಕೆ ಧಾವಿಸಿದರು. ಸಾಲ ಮನ್ನಾ ಮಾಡಿದರು, ಖಾಸಗಿಯವರು ಯಾರೂ ಸಾಲ ವಾಪಸಾತಿಗೆ ಒತ್ತಾಯಿಸಬೇಡಿಯೆಂದು ತಾಕೀತು ಮಾಡಿದರು. ಆದರೆ ಇಂದು ಅದಕ್ಕಿಂತ ಕಠಿಣ ಪರಸ್ಥಿತಿ ರಾಜ್ಯದಲ್ಲಿ ಇದೆ. ಇಂದಿನ ಸರ್ಕಾರ ಏನು ಮಾಡ್ತಿದೆ. ಯಡಿಯೂರಪ್ಪನವರೆ ನೀವು ಮಹಾನ್ ನಾಯಕರು, ನೇಕಾರರ ಬಗ್ಗೆ ಬಹಳಷ್ಟು ಪ್ರೀತಿ ಉಳ್ಳವರು. ಆದರೆ ಪ್ಯಾಕೇಜ್ ಘೋಷಣೆ ಮಾಡುವಾಗ ನೇಕಾರರ ನೆನಪಾಗುವದಿಲ್ಲವೆ ಎಂದು ಸರಕಾರದ ವಿರುದ್ಧ ಗುಡುಗಿದರು. ಕಳೆದ ವರ್ಷವೂ ಹೀಗೆ ಮಾಡಿದ್ದೀರಿ. ಈ ಬಾರಿಯೂ ನೆನಪಾಗಲಿಲ್ಲ. ಶಾಸಕರು ಬಂದು ನಿಮಗೆ ನೆನಪು ಮಾಡಬೇಕು. ನಿಮ್ಮ ಭಾಷಣದಲ್ಲಿ ನೇಕಾರರ ಬಗ್ಗೆ ಎಷ್ಟು ಕನಿಕರ, ಪ್ರೀತಿ ತೋರಿಸುತ್ತೀರಿ ಅದೇ ಪ್ಯಾಕೇಜ್ ಘೋಷಣೆ ಮಾಡುವಾಗ ನೇಕಾರರ ನೆನಪಾಗಲಿಲ್ಲವೆ. ನಿಮ್ಮ ಸುತ್ತಲಿದ್ದವರು ಯಾಕೆ ನೆನಪಿಸಲಿಲ್ಲ. ಇದರ ಅರ್ಥ ಚುನಾವಣೆಯಲ್ಲಿ ಮತ ಗಳಿಸಲಿಲು ಮಾತ್ರ ನೇಕಾರರು ಬೇಕು ಆದರೆ ಕೃತಿಯಲ್ಲಿ ಅಲ್ಲ ಎಂದರು.

ನೇಕಾರರಿಗೆ ಈಗ 2 ಸಾವಿರ ಕೊಡ್ತೀನಿ ಅಂತಿರಿ. ಆದರೆ ಪ್ರತಿ ನೇಕಾರ ಕುಟುಂಬಕ್ಕೆ 10 ಸಾವಿರ ಕೊಡಬೇಕು. ನೇಕಾರರಿಗೆ ಮಾತ್ರ ಅಲ್ಲ. ಟ್ಯಾಕ್ಸಿ, ರಿಕ್ಷಾ ಚಾಲಕರಿಗೆ, ಅಸಂಘಟಿತ ಕಾರ್ಮಿಕರಿಗೆ ,ಸವಿತಾ ಸಮಾಜ, ಕುಂಬಾರ, ಕಮ್ಮಾರ ಸಮಾಜ ಹೀಗೆ ಎಲ್ಲ ಕಾಯಕ ಜೀವಿಗಳಿಗೆ 10 ಸಾವಿರ ರೂ.ಕೊಡಿ. ಕೈ ಮುಗಿದು ಕೇಳುತ್ತೇವೆ ಎಂದು ಮನವಿ ಮಾಡಿದರು.. ಎಲ್ಲ ತರಹದ ನೇಕಾರರಿಗೆ ಅಂದಾಜು ೮೦೦ ರಿಂದ ೯೦೦ ಕೋಟಿ ಘೋಷಣೆ ಮಾಡಿ ಅಥವಾ ಯೋಜನೆಗಳನ್ನು ಸೃಷ್ಠಿ ಮಾಡಿ, ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಬೇಕು, ಬಾಕಿ ಇರುವ ಸಬ್ಸಿಡಿ ಬಿಡುಗಡೆ ಮಾಡಬೇಕು. ಒಂದು ವರ್ಷದ ವರೆಗೆ ಸಾಲದ ಅಸಲು ಬಡ್ಡಿ ಕೇಳಬಾರದು ಎಂದು ಸರ್ಕಾರಕ್ಕೆ ಆಗ್ರಹಿಸಿದರು.

ರಬಕವಿಯ ವಿದ್ಯುತ್ ಚಾಲಿತ ಮಗ್ಗಗಳ ಅಧ್ಯಕ್ಷ ನೀಲಕಂಠ ಮುತ್ತೂರ, ಮಲ್ಲಪ್ಪ ಭಾವಿಕಟ್ಟಿ, ರಾಜೇಂದ್ರ ಭದ್ರನ್ನವರ, ಶಂಕರ ಸೊನ್ನದ, ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಪ್ಪ ಸಿಂಗಾಡಿ,ನಗರ ಘಟಕದ ಅಧ್ಯಕ್ಷ ಈಶ್ವರ ಚಮಕೇರಿ,ಪುರಸಭೆ ಸದಸ್ಯ ಜಾವೇದ ಬಾಗವಾನ, ರಾಜು ಭಾವಿಕಟ್ಟಿ, ಸತ್ಯಪ್ಪ ಮಗದುಮ್, ಹೊಳೆಪ್ಪ ಬಾಡಗಿ,ವಿಠ್ಠಲ ಸಂಶಿ, ಶಿವಾನಂದ ಗಾಳಿ ಮುಂತಾದವರು ಇದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.