ಕಾಂಗ್ರೆಸ್ ಇಂದಲ್ಲ ನಾಳೆ ನಿಧಾನಕ್ಕೆ ಸಾಯುವಂತಹ ಪಕ್ಷ : ಕೆ ಎಸ್ ಈಶ್ವರಪ್ಪ


Team Udayavani, May 29, 2021, 2:29 PM IST

dghhgfdsa

ಶಿವಮೊಗ್ಗ : ಬಿಜೆಪಿಗೆ ನಾಯಕತ್ವ ಬದಲಾವಣೆಯ ರೋಗ ಹಿಡಿದಿದೆ ಎಂಬ  ಸಿದ್ದರಾಮಯ್ಯ ಹೇಳಿಕೆಗೆ ಈಶ್ವರಪ್ಪ ಕಿಡಿಕಾರಿದ್ದಾರೆ. ಕಾಂಗ್ರೆಸ್ ಗೆ ಕ್ಯಾನ್ಸರ್ ರೋಗ, ಆ ಕ್ಯಾನ್ಸರ್ ರೋಗ ಗುಣವೇ ಆಗಲ್ಲ. ಹೊಸ ಔಷಧಿ ಕಂಡು ಹಿಡಿಯುತ್ತಿದ್ದಾರೆ. ನಿಮ್ಮ ಕ್ಯಾನ್ಸರ್ ರೋಗಕ್ಕೆ ಇವತ್ತಿನವರೆಗೆ ಔಷಧಿ ಇಲ್ಲ. ನಿಮ್ಮ ಪಕ್ಷದ ಕ್ಯಾನ್ಸರ್ ರೋಗದಿಂದಲೇ ಅನೇಕ ನಿಮ್ಮ ಶಾಸಕರು ಪಕ್ಷ ಬಿಟ್ಟು ಹೊರ ಬಂದಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಈಶ್ವರಪ್ಪ ಗುಡುಗಿದ್ದಾರೆ.

ನಿಮ್ಮಲ್ಲಿ ಕ್ಯಾನ್ಸರ್ ರೋಗ ಇಟ್ಟುಕೊಂಡು ಬಿಜೆಪಿಯಲ್ಲಿ ರೋಗ ಇದೆ ಅಂತಾ ಹುಡುಕುವಂತಹ ಪ್ರಯತ್ನ ಮಾಡುತ್ತಿದ್ದಾರೆ. ಈ ರೋಗಕ್ಕೆ ನಮ್ಮಲ್ಲಿ ಕೇಂದ್ರದ ನಾಯಕರು ಇದ್ದಾರೆ. ಅದಕ್ಕೆ ಪರಿಹಾರ ಕಂಡು ಹಿಡಿದಿದ್ದಾರೆ. ಕೇಂದ್ರದ ನಾಯಕರಲ್ಲಿ ಔಷಧಿ ಇದೆ. ಆ ಔಷಧಿಯಿಂದ ಬಿಜೆಪಿ ಪಕ್ಷ ಏನು ಸಮಸ್ಯೆ ಇಲ್ಲದ ಹಾಗೆ ಅಧಿಕಾರ ಅವಧಿ ಪೂರೈಸುತ್ತೇವೆ. ಇದರಲ್ಲಿ ಯಾವ ಅನುಮಾನ ಇಲ್ಲ ಎಂದರು.

ಕಾಂಗ್ರೆಸ್ ನಲ್ಲಿರುವ ಕ್ಯಾನ್ಸರ್ ರೋಗಕ್ಕೆ ಔಷಧಿ ಇಲ್ಲ. ಕಾಂಗ್ರೆಸ್ ಇಂದಲ್ಲ ನಾಳೆ ನಿಧಾನಕ್ಕೆ ಸಾಯುವಂತಹ ಪಕ್ಷವೇ ಇದು. ಕಾಂಗ್ರೆಸ್ ಇತಿಹಾಸ ನೋಡಿದರೆ ಮೂರು ಮೂರು ಮುಖ್ಯಮಂತ್ರಿಗಳು ಯಾರು ಬದಲಾಗಿದ್ದರು ಅಂತಾ ಗೊತ್ತಾಗುತ್ತೆ.. ವೀರೇಂದ್ರ ಪಾಟೀಲ್ ಅವರಂತಹ ಪ್ರಾಮಾಣಿಕ ಮುಖ್ಯಮಂತ್ರಿ ಅವರನ್ನು ಏರ್ ಪೋರ್ಟ್ ನಲ್ಲೇ ಬದಲಾವಣೆ ಮಾಡಿದ್ರು. ಕಾಂಗ್ರೆಸ್ ಪಕ್ಷದಲ್ಲಿರುವ ಗುಂಪುಗಾರಿಕೆ, ಸಿದ್ದರಾಮಯ್ಯ ಅವರ ಕಾಲದಲ್ಲಿ ಇದ್ದಷ್ಟು ಯಾವ ಕಾಲದಲ್ಲಿ ಇರಲಿಲ್ಲ. ಅದಕ್ಕೆ ಸಾಕ್ಷಿಯೇ 2018 ರ ಚುನಾವಣಾ ಫಲಿತಾಂಶ..

ಮುಖ್ಯಮಂತ್ರಿ ಆಗಿದ್ದಂತಹ ಸಿದ್ದರಾಮಯ್ಯ ಸೋತು, ಅನೇಕ ಕಾಂಗ್ರೆಸ್ಸಿನ ಮಂತ್ರಿಗಳು ಸೋತರು. ರಾಜ್ಯದಲ್ಲಿ ಕಾಂಗ್ರೆಸ್ ಅಡ್ರೆಸ್ ಇಲ್ಲದಾಗೆ ಮಾಡಿದರು. 28 ಲೋಕಾಸಭಾ ಕ್ಷೇತ್ರದಲ್ಲಿ ಒಂದೇ ಒಂದು ಸ್ಥಾನ ಗೆಲ್ಲಲ್ಲು ಸಾಧ್ಯವಾಯ್ತು. ಕಾಂಗ್ರೆಸ್ ಗೆ ಗುಂಪುಗಾರಿಕೆಯ ರೋಗ ಇದೆ. ಬಿಜೆಪಿಯಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾರೆ. ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಿದ್ದಾರೆ.

ಇದೇ ವೇಳೆ ರಮೇಶ್ ಜಾರಕಿಹೊಳಿ ಪ್ರಕರಣದ ಬಗ್ಗೆ ಮಾತನಾಡಿದ ಈಶ್ವರಪ್ಪ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಅವರ ಪಕ್ಷದ ಮಂತ್ರಿಗಳು ಶಾಸಕರು ಸೆಕ್ಸ್ ಸ್ಕ್ಯಾಂಡಲ್ ನಲ್ಲಿ ಸಿಕ್ಕಿ ಹಾಕಿಕೊಂಡಿಲ್ಲವಾ.. ಮುಖ್ಯಮಂತ್ರಿ ಅವರೇ ಸ್ವತಃ ಮೇಟಿಯವರನ್ನು ರಕ್ಷಣೆ ಮಾಡಿದ್ರಲ್ಲಾ. ನಾನು ಮುಖ್ಯಮಂತ್ರಿ ಆಗಿದ್ದ ವೇಳೆ ಮೇಟಿಯನ್ನು ರಕ್ಷಣೆ ಮಾಡಿಲ್ಲ ಅಂತಾ ಬಹಿರಂಗವಾಗಿ ಹೇಳಿ ನೋಡೋಣ. ಅವರು ಮಾಡಿರುವ ತಪ್ಪುಗಳನ್ನು ಬಿಜೆಪಿಯಲ್ಲಿ ಆಗಿದೆ ಅಂತಾ ತೋರಿಸುವ ಪ್ರಯತ್ನ ಮಾಡ್ತಿದ್ದಾರೆ. ಆಗದೇ ಇರುವಂತಹದ್ದನ್ನು ಸೃಷ್ಟಿ ಮಾಡ್ತಿದ್ದಾರೆ. ರಾಜ್ಯ ಸರಕಾರದ ಕೋವಿಡ್ ನಿರ್ವಹಣೆಯ ಬಗ್ಗೆ ರಾಜ್ಯದ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ ಕಾಂಗ್ರೆಸ್ ನವರಿಗೆ ತೃಪ್ತಿ ಇಲ್ಲ. ಡಿಕೆಶಿ, ಸಿದ್ದರಾಮಯ್ಯ ಇಬ್ಬರಿಗೂ ಸಮಾಧಾನ ಇಲ್ಲ ಎಂದರು.

ಪ್ರತಿದಿನ ಎಲ್ಲದರಲ್ಲೂ ಹುಳುಕು ಹುಡುಕುತ್ತಿದ್ದಾರೆ. ಸಿದ್ದರಾಮಯ್ಯ ಅವರು ಭಗವಂತನ ಮುಂದೆ ಪ್ರಮಾಣ ಮಾಡಿಬಿಡಲಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಮೇಲೆ ಪ್ರಮಾಣ ಮಾಡಿ ಬಿಡಲಿ. ನರೇಂದ್ರ ಮೋದಿಯವರು ವ್ಯಾಕ್ಸಿನ್ ತಂದಾಗ ಈ ವ್ಯಾಕ್ಸಿನ್ ಹಾಕೋಬೇಡಿ ಅಂತಾ ತಾನು ಹೇಳಿಲ್ಲ ಅಂತಾ ಪ್ರಮಾಣ ಮಾಡಿ ಬಿಡಲಿ. ಜನರನ್ನು ಗೊಂದಲದಲ್ಲಿ ಇಡುವ ಪ್ರಯತ್ನ ಮಾಡಿದರು. ಈ ವ್ಯಾಕ್ಸಿನ್ ನಲ್ಲಿ ಡಿಸ್ಟಿಲರಿ ವಾಟರ್ ಇದೆ. ಪುರುಷತ್ವ ಹೋಗುತ್ತೆ ಅಂತಾ ಸುಳ್ಳು ಹೇಳಿಲ್ಲ ಅಂತಾ ಹೇಳಿ ನೋಡೋಣ.

ಎಲ್ಲಾ ಕಾಂಗ್ರೆಸ್ ನಾಯಕರು ವ್ಯಾಕ್ಸಿನ್ ವಿರುದ್ದ ಅಪ ಪ್ರಚಾರ ಮಾಡಿದರು. ಈ ವ್ಯಾಕ್ಸಿನ್ ಹಾಕಿಸಿಕೊಂಡರೆ ದೇಶದಿಂದ ಕೋವಿಡ್ ಬೇಗ ಹೋಗುತ್ತೆ. ಕಾಂಗ್ರೆಸ್ ನವರಿಗೆ ಇನ್ನು ಉದ್ಯೋಗ ಇರುವುದಿಲ್ಲ. ಟೀಕೆ ಮಾಡಲು ಅವಕಾಶ ತಪ್ಪುತ್ತದೆ ಎನ್ನುವ ಒಂದೇ ಕಾರಣಕ್ಕೆ ಅಪ ಪ್ರಚಾರ ಮಾಡಿದ್ರು. ಇಡಿ ದೇಶದಲ್ಲಿ ಕೋವಿಡ್ ಹೆಚ್ಚಾಗಲು ಕಾರಣವೇ ಕಾಂಗ್ರೆಸ್ ಎಂದು ಈಶ್ವರಪ್ಪ ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.