ಆದ್ಯತಾ ಗುಂಪಿಗೆ ಲಸಿಕೆ : ಜಿಲ್ಲಾಧಿಕಾರಿ ಜ್ಯೋತ್ಸ್ನಾ
Team Udayavani, May 29, 2021, 4:18 PM IST
ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಮುಂಚೂಣಿ ಕಾರ್ಯರ್ತರೊಂದಿಗೆ ಸರ್ಕಾರ ಸೂಚಿಸಿದ ಆದ್ಯತಾ ವಲಯ ಮತ್ತು ಗುಂಪುಗಳಿಗೆ ಕೊರೊನಾ ಲಸಿಕೆ ನೀಡಲು ಶುರು ಮಾಡಲಾಗಿದೆ. ಕೆಲವು ಕಡೆ ಕಾಮಗಾರಿ ಸ್ಥಳದಲ್ಲೇ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾದ್ಯಂತ ಈಗಾಗಲೇ 2.30 ಲಕ್ಷ ಜನರು ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ. 57 ಸಾವಿರ ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ಕೆಲ ದಿನಗಳ ಹಿಂದೆ ಲಸಿಕೆ ಕೊರತೆ ಇತ್ತು. ಆದರೆ, ಜಿಲ್ಲೆಯಲ್ಲಿ ಈಗ 20 ಸಾವಿರ ಡೋಸ್ ಕೋವಿಶೀಲ್ಡ್ ಮತ್ತು ಸುಮಾರು ಐದು ಸಾವಿರ ಡೋಸ್ ಕೋವ್ಯಾಕ್ಸಿನ್ ಲಸಿಕೆ ಲಭ್ಯ ಇದೆ ಎಂದು ಹೇಳಿದರು. ಕೋವಿಶೀಲ್ಡ್ ಎರಡನೇ ಡೋಸ್ ಪಡೆಯುವಿಕೆ ಅವಧಿಯನ್ನು 12 ವಾರಗಳಿಗೆ ವಿಸ್ತರಿಸಲಾಗಿದೆ. ಕೋವ್ಯಾಕ್ಸಿನ್ ಲಸಿಕೆಗೆ ನಾಲ್ಕು ವಾರಗಳ ಅಂತರವೇ ಮುಂದುವರಿದಿದೆ. ಹೀಗಾಗಿ ಸರ್ಕಾರದ ನಿರ್ದೇಶನದ ಪ್ರಕಾರದ ಎರಡನೇ ಡೋಸ್ ಲಸಿಕೆ ನೀಡಲು ಆದ್ಯತೆ ನೀಡಲಾಗುತ್ತಿದೆ.
ಮುಂಚೆಯೇ ಅನಗತ್ಯವಾಗಿ ಲಸಿಕಾ ಕೇಂದ್ರಕ್ಕೆ ಬಂದು ಸಾಲುಗಟ್ಟಿ ನಿಲ್ಲುವ ಅಗತ್ಯವಿಲ್ಲ. ಎರಡನೇ ಲಸಿಕೆ ಸಂಬಂಧ ನಿಮ್ಮ ಮೊಬೈಲ್ಗೆ ಸಂದೇಶ ಬಂದ ನಂತರವೇ ಕೇಂದ್ರಗಳಿಗೆ ಬನ್ನಿ ಎಂದು ಮನವಿ ಮಾಡಿದರು. ನೋಡಲ್ ಅಧಿಕಾರಿಗಳ ನೇಮಕ: ಮುಂಚೂಣಿ ಕಾರ್ಯರ್ತರೊಂದಿಗೆ ಆದ್ಯತಾ ಗುಂಪುಗಳಿಗೂ ಲಸಿಕೆ ನೀಡಲು ಸರ್ಕಾರ ಮಾರ್ಗಸೂಚಿ ನೀಡಿದೆ. ಅಂಗವಿಕಲರು, ಕೈದಿಗಳು, ಚಿತಾಗಾರ ಮತ್ತು ಸ್ಮಶಾನಗಳಲ್ಲಿ ಕೆಲಸ ಮಾಡುವರು, ಕ್ಯಾಬ್ ಚಾಲಕರು, ಆಟೋ ಚಾಲಕರು, ಬೀದಿ ವ್ಯಾಪಾರಿಗಳು, ಕೊರೊನಾ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು, ನೀರು ಸರಬರಾಜು ಮತ್ತು ವಿದ್ಯುತ್ ಪೂರೈಕೆ ಕಾರ್ಮಿಕರಿಗೆ ಆದ್ಯತೆ ಮೇಲೆ ಲಸಿಕೆ ಕೊಡಲಾಗುವುದು ಎಂದು ಜಿಲ್ಲಾಧಿಕಾರಿ ವಿವರಿಸಿದರು.
ಇವರಿಗೆ ಲಸಿಕೆ ನೀಡಲು ವಿಶೇಷ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು. ಅಲ್ಲದೇ, ಅವರು ಕಾಮಗಾರಿ ಸ್ಥಳದಲ್ಲೂ ಲಸಿಕೆ ನೀಡಲಾಗುವುದು. ಇದಕ್ಕಾಗಿ ಆಯಾ ವಲಯವಾರು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು. ಮುಂದೆ ಅಧಿಕ ಲಸಿಕೆ ಲಭ್ಯವಾದಲ್ಲಿ 18 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೂ ಲಸಿಕೆ ಕೊಡಲಾಗುವುದು ಎಂದರು. ಗ್ರಾಮೀಣದಲ್ಲಿ ಸೋಂಕು ನಿಯಂತ್ರಣಕ್ಕಾಗಿ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ಗಳಿಗೆ ದಾಖಲಿಸಲಾಗುತ್ತಿದೆ. ಕಳೆದ ಒಂದು ವಾರದಿಂದ ಹೋಂ ಐಸೋಲೇಷನ್ದಲ್ಲಿ ಇದ್ದವನ್ನು ಕೇರ್ ಸೆಂಟರ್ಗೆ ಸ್ಥಳಾಂತರ ಮಾಡಲಾಗುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್ ಖರ್ಗೆ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
Prajwal Revanna: ಪ್ರಜ್ವಲ್ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್
MUST WATCH
ಹೊಸ ಸೇರ್ಪಡೆ
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್ ಬೇಲಿ!
Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ
8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್ಐಟಿ? ಇನ್ನಷ್ಟು ಎಫ್ಐಆರ್ ಸಾಧ್ಯತೆ
Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ