ವಿದೇಶಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಲಸಿಕೆ ನೀಡಿ
Team Udayavani, May 30, 2021, 4:28 PM IST
ಬೆಂಗಳೂರು: ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆತೆರಳುವ ಯುವ ಕನ್ನಡಿಗರಿಗೆ ತ್ವರಿತವಾಗಿ ಲಸಿಕೆ ನೀಡಲು ಸರ್ಕಾರ ಕ್ರಮಕೈಗೊಳ್ಳಬೇಕೆಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಈ ಸಂಬಂಧ ಶನಿವಾರ ಸರಣಿ ಟ್ವೀಟ್ಮಾಡಿದ್ದಾರೆ. ಮುಂದಿನ 2- 3 ತಿಂಗಳಲ್ಲಿಸಾವಿರಾರು ಯುವ ಕನ್ನಡಿ ಗರು ವಿದ್ಯಾಭ್ಯಾಸಕ್ಕಾಗಿಹೊರದೇಶಗಳಿಗೆ ಹೋಗುವವ ರಿದ್ದಾರೆ. ಹಲವುದೇಶಗಳು, ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳು ಕೊರೊನಾ ಲಸಿಕೆ ತೆಗೆದುಕೊಂಡಿ ರಬೇಕೆಂಬ ಷರತ್ತು ವಿಧಿಸಿವೆ. ಇಂತಹ ವಿದ್ಯಾಥಿìಗಳಿಗೆ ಶೀಘ್ರವಾಗಿ ಲಸಿಕೆ ನೀಡುವುದು ಸರ್ಕಾರದ ಕರ್ತವ್ಯಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಮುಖ್ಯಮಂತ್ರಿಗಳು, ಮುಖ್ಯ ಕಾರ್ಯದರ್ಶಿಗಳುಕೂಡಲೇ ಇತ್ತ ಗಮನ ಹರಿಸಿ ನಮ್ಮ ರಾಜ್ಯದಲ್ಲೂಆದ್ಯತೆಯ ಮೇರೆಗೆ ಲಸಿಕೆ ನೀಡಿ ವಿದ್ಯಾಭ್ಯಾಸಕ್ಕೆ ತೆರಳುವಮಕ್ಕಳಿಗೆ ನೆರವಾಗಬೇಕು ಎಂದು ಒತ್ತಾಯಿಸಿದ್ದಾರೆ.