ಬೆಳೆದ ಬಾಳೆಗೆ ಸಿಗದ ಬೆಲೆ: ಉಚಿತವಾಗಿ ಹಂಚಿದ ಎಂ.ಬಿ.ಪಾಟೀಲ ಅಭಿಮಾನಿ ರೈತ


Team Udayavani, May 31, 2021, 11:03 AM IST

ಬೆಳೆದ ಬಾಳೆಗೆ ಸಿಗದ ಬೆಲೆ: ಉಚಿತವಾಗಿ ಹಂಚಿದ ಎಂ.ಬಿ.ಪಾಟೀಲ ಅಭಿಮಾನಿ ರೈತ

ವಿಜಯಪುರ: ಕೋವಿಡ್ ಸಂಕಷ್ಟದ ಕಾರಣಕ್ಕೆ ತಾವು ಬೆಳೆದ ಬಾಳೆಗೆ ಮಾರುಕಟ್ಟೆ ಸಿಗದಿದ್ದಾಗ ತಿಪ್ಪೆಗೆ ಸುರಿಯದೇ, ಹಣ್ಣನ್ನು ಹಳ್ಳಿಗಳಲ್ಲಿ ಹಂಚುವ ಮೂಲಕ ತಮ್ಮ ಕ್ಷೇತ್ರದ ಶಾಸಕರ ಸೇವೆಗೆ ಕೃತಜ್ಞತೆ ಸಲ್ಲಿಸಿ ರೈತರೊಬ್ಬರು ಮಾದರಿ ಆಗಿದ್ದಾರೆ.

ಬಬಲೇಶ್ವರ ತಾಲೂಕಿನ ಸಂಗಾಪುರ ಎಸ್.ಎಚ್ ಗ್ರಾಮದ ರೈತ ಬಸವರಾಜ ಕಾತ್ರಾಳ ಕ್ಷೇತ್ರದ ಶಾಸಕರಾದ ಎಂ.ಬಿ.ಪಾಟೀಲ ಅವರ ಅಪ್ಪಟ ಅಭಿಮಾನಿ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ತಾವು ಲಕ್ಷಾಂತರ ರೂ. ಬಂಡವಾಳ ಹಾಕಿ, ಶ್ರಮ ವಹಿಸಿ 3 ಎಕರೆ ಜಮೀನಿನಲ್ಲಿ ಬೆಳೆದ 5 ಸಾವಿರ ಬಾಳೆ ಹಣ್ಣು ಬೆಳೆಗೆ ಕೋವಿಡ್ ಲಾಕ್‍ಡೌನ್ ಮಾರುಕಟ್ಟೆ ಕಿತ್ತುಕೊಂಡಿದೆ.

ಅದರೆ ಎಂ.ಬಿ.ಪಾಟೀಲ ಅಭಿಮಾನಿ ರೈತ, ಬಸವರಾಜ ಕಾತ್ರಾಳ ತಾವು ಬಂಡವಾಳ, ಶ್ರಮ ಹಾಕಿ ಬೆಳೆದ ಬಾಳೆಹಣ್ಣನ್ನು ಮಾರುಕಟ್ಟೆ ಸಿಗದಿದ್ದರೂ ಹತಾಶರಾಗದೇ ತಮ್ಮ‌ ಗ್ರಾಮದ ಹಳ್ಳಿಗರಿಗೆ ಉಚಿತವಾಗಿ ಹಂಚಿ, ತಮ್ಮ ಕ್ಷೇತ್ರದ ಶಾಸಕ ಎಂ.ಬಿ.ಪಾಟೀಲ ಅವರು ಮಾಡಿದ ನೀರಾವರಿ ಕ್ರಾಂತಿ, ಕೋವಿಡ್ ಸೇವೆಗೆ ಸಮರ್ಪಿಸುವುದಾಗಿ ತಮ್ಮ ಕಷ್ಟದಲ್ಲೂ ಅಭಿಮಾನದಿಂದ ಹೇಳುತ್ತಿದ್ದಾರೆ.

ಎಂ.ಬಿ.ಪಾಟೀಲ ಅವರು ನೀರಾವರಿ ಸಚಿವರಾಗಿ ಬಬಲೇಶ್ವರ ಕ್ಷೇತ್ರವನ್ನು ಮಾತ್ರವಲ್ಲ ವಿಜಯಪುರ ಜಿಲ್ಲೆಯನ್ನೇ ಸಮಗ್ರ ನೀರಾವರಿ ಮಾಡಿದ್ದಾರೆ. ಅವರ ರೈತ ಪರ ಪ್ರಾಮಾಣಿಕ ಕಾಳಜಿ, ಬದ್ಧತೆಯಿಂದಲೇ ಕುಡಿಯಲು ನೀರು ಸಿಗದ ಬರಪೀಡಿತ ವಿಜಯಪುರ ಜಿಲ್ಲೆಯ ರೈತರು ಸಮೃದ್ಧ ನೀರಾವರಿ ಮೂಲಕ ಸಮೃದ್ಧಿ ಪಡೆಯುವಂತೆ ಮಾಡಿದ್ದಾರೆ. ಹೀಗಾಗಿ ಪ್ರಕೃತಿ ಸೃಷ್ಡಿಸಿದ ಸಂಕಷ್ಟದಿಂದ ಆತ್ಮವಿಶ್ವಾಸ ಕಳೆದುಕೊಂಡು ಬೆಳೆದ ಬೆಳೆಯನ್ನು ತಿಪ್ಪೆಗೆ ಚೆಲ್ಲದೇ, ಎಂ.ಬಿ.ಪಾಟೀಲ್ ಅವರ ಸೇವಾ ಕಾರ್ಯಕ್ಕೆ ಕೃತಜ್ಞತೆ ಸಲ್ಲಿಸಲು ಜನರಿಗೆ ಉಚಿತವಾಗಿ ಬಾಳೆಹಣ್ಣು ಹಂಚಿ ವಿಶಿಷ್ಟ ಅಭಿಮಾನ ಮೆರೆದಿದ್ದಾರೆ.

ಕೋವಿಡ್ ಮಾರಕ ರೋಗ ಮನುಕುಲದ ಶರೀರದಲ್ಲಿ ತೊಂದರೆ ಮಾಡಿದೆ. ರೈತರಾಗಿರುವ ನಾವು ನಮ್ಮ ತೋಟದಲ್ಲಿ ಬಂದು ಪ್ರತ್ಯೇಕವಾಗಿ ಬದುಕಲು ಸಾಧ್ಯವಾಗಿದ್ದು ಕೂಡ ಎಂ.ಬಿ.ಪಾಟೀಲ ಅವರು ನೀರಾವರಿ ಸೌಲಭ್ಯ ಕಲ್ಪಿಸಿದ್ದರಿಂದಲೇ ಆಗಿದೆ ಎಂದು ಶೇಗುಣಿಸಿ, ಹಲಗಣಿ, ಬಬಲೇಶ್ವರ, ನಿಡೋಣಿ, ನಾಗರಾಳ, ಯಕ್ಕುಂಡಿ, ಹೊಕ್ಕುಂಡಿ ಹಾಗೂ ಅರ್ಜುನಗಿ ಭಾಗದ ಹಳ್ಳಿಗಳಲ್ಲಿ ಬಾಳೆ ಹಣ್ಣು ಹಂಚುತ್ತಿದ್ದಾರೆ.

ಈ ಬಾರಿ ಉತ್ತಮ ಫಸಲು ಬಂದರೂ ಲಾಕ್‍ಡೌನ್ ಕಾರಣದಿಂದ ಕೈಗೆಬಂದ ತುತ್ತು ಬಾಯಿಗೆ ಬರಲಿಲ್ಲ. ಅದರೆ ಶಾಸಕ ಎಂ.ಬಿ. ಪಾಟೀಲ ಅವರ ಸೇವೆ ನಮಗೆ ಮಾದರಿ ಆಗಲಿ. ಈ ಬಾರಿ ಹಾನಿ ಅನುಭವಿಸಿದರೂ, ಮುಂದಿನ ಬಾರಿ ಮತ್ತೆ ನಾನು ಉತ್ತಮ ಬೆಳೆ ಬೆಳೆಯುತ್ತೇನೆ. ಈ ಬಾರಿಯ ಕಷ್ಟ ಮುಂದೆ ಪರಿಹಾರವಾಗಲಿದೆ ಎಂದು ಬಸವರಾಜ ಕಾತ್ರಾಳ ಅಭಿಮಾನ, ಆತ್ಮವಿಶ್ವಾಸದಿಂದ ಹೇಳುತ್ತಿದ್ದಾರೆ.

ಕೋವಿಡ್ ಕಾರಣಕ್ಕೆ ಮಾರುಕಟ್ಟೆ ಸಿಗದೇ ಉಚಿತವಾಗಿ ಹಣ್ಣು ಹಂಚುತ್ತಿರುವ ರೈತನ ಕಷ್ಟದ ವಿಷಯ ಅರಿತ ಮಾಜಿ ಸಚಿವರಾದ ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ ಅವರು ನಷ್ಟಕ್ಕೆ ಸಿಲುಕಿರುವ ರೈತನಿಗೆ ಅಗತ್ಯ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಬಬಲೇಶ್ವರ ತಹಶೀಲ್ದಾರ್, ತಾಲೂಕಾ ತೋಟಗಾರಿಕೆ ಅಧಿಕಾರಿಗಳಿಗೆ ಮೊಬೈಲ್ ಮೂಲಕ ಸೂಚನೆ ನೀಡಿದ್ದಾರೆ. ರೈತ ಬಸವರಾಜ ಕಾತ್ರಾಳ ಅವರೊಂದಿಗೂ ಮಾತನಾಡಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದಾರೆ.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.