ಆರೋಗ್ಯ ಸಂಜೀವಿನಿ: ರೋಗ ನಿರೋಧಕ ಚಹಾ


ಆದರ್ಶ ಕೊಡಚಾದ್ರಿ, May 31, 2021, 12:55 PM IST

Tea resistant

ಚಹಾ ಕುಡಿಯುವ ಅಭ್ಯಾಸ ಯಾರಿಗಿಲ್ಲ ಹೇಳಿ… ಬೆರಳೆಣಿಕೆಯಷ್ಟು ಜನರನ್ನು ಹೊರತುಪಡಿಸಿದರೆ ಉಳಿದವರೆಲ್ಲರೂ  ಚಹಾವನ್ನು ಸರ್ವೆ ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ. ಕೆಲವರು ದಿನದಲ್ಲಿ ಒಂದು ಬಾರಿ ಚಹಾ ಸೇವನೆ ಮಾಡಿದರೆ, ಇನ್ನೂ ಕೆಲವರು ದಿನದಲ್ಲಿ ಐದಾರು ಸಲ ಚಹಾ ಸೇವಿಸುತ್ತಾರೆ.

ಚಹಾ ಸೇವನೆ ಒಂದು ವಿಧವಾದ ಅಡಿಕ್ಷನ್ ಕೂಡಾ ಹೌದು. ನಿಗದಿತ ಸಮಯಕ್ಕೆ ಸರಿಯಾಗಿ ಚಹಾ ಸೇವೆನೆ ಮಾಡದಿದ್ದರೆ ಕೆಲ ವ್ಯಕ್ತಿಗಳ ಮನಸ್ಥಿತಿಗಳಲ್ಲಿ ಬದಲಾವಣೆಗಳಾಗುವುದನ್ನು ಗಮನಿಸಬಹುದಾಗಿದೆ. ರಾತ್ರಿ ವೇಳೆ ಚಹಾ ಸೇವನೆ ಮಾಡುವುದರಿಂದ  ನಿದ್ರೆಯನ್ನು ತಡೆಯಬಹುದೆಂದು ಹಲವರು ರಾತ್ರಿ ವೇಳೆ ಚಹಾ ಸೇವನೆ ಮಾಡುವುದನ್ನು ನೊಡಬಹುದು.

ಈ ಚಹಾದಲ್ಲಿಯೂ ಹಲವಾರು ವಿಧಗಳಿದ್ದು ಹಲವರು ಮಸಾಲಾ ಪದಾರ್ಥಗಳನ್ನು ಸೇರಿಸಿ ಸೇವಿಸುತ್ತಾರೆ. ಈ ನಡುವೆ ಚಹಾ ತಯಾರಿಸುವಾಗ ಕೆಲವು ನೈಸರ್ಗಿಕ ಗಿಡಮೂಲಿಕೆಗಳನ್ನು ಬಳಸುವುದರಿಂದ ನಮ್ಮ ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ.

ಚಹಾದೊಂದಿಗೆ ವಿಶ್ರಣ ಮಾಡಬಹುದಾದ ಗಿಡಮೂಲಿಕೆಗಳು

ತುಳಸಿ

ತುಳಸಿ ಸಾಮಾನ್ಯವಾಗಿ ವಿಟಮಿನ್ ಸಿ ಮತ್ತು ಸತುಗಳಿಂದ ತುಂಬಿರುತ್ತದೆ. ಈ ಸಸ್ಯವು ಆ್ಯಂಟಿ ವೈರಲ್ ಬ್ಯಾಕ್ಟೀರಿಯಾ ವಿರೋಧಿ ಮತ್ತು ಶಿಲೀಂಧ್ರ- ವಿರೋಧಿ ಗುಣಗಳಿಂದ ಕೂಡಿದೆ. ಇದನ್ನು ನಿತ್ಯದ ಚಹಾ ಅಥವಾ ಕಷಾಯದಲ್ಲಿ ಸೇರಿಸಿ ಕುಡಿಯಬಹುದಾಗಿದೆ. ಇದರಲ್ಲಿ ಆ್ಯಂಟಿ -ಆಕ್ಸಿಡೆಂಟ್ ಸಂಯುಕ್ತಗಳಾದ ರೋಸ್ಮರಿನಿಕ್ ಆಮ್ಲಗಳನ್ನು ಒಳಗೊಂಡಿದೆ. ಇದು ಉಸಿರಾಟದ ಸಮಸ್ಯೆ ಪರಿಹರಿಸಿ ಹಾಗೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಏಲಕ್ಕಿ

ಚಹಾದಲ್ಲಿ ಏಲಕ್ಕಿಯನ್ನು ಬೆರೆಸಿ ಸೇವನೆ ಮಾಡುವುದರಿಂದ  ನಮ್ಮಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.ಭಾರತೀಯ ಮಸಾಲೆಗಳಲ್ಲಿ ಅತ್ಯುನ್ನತ ಸ್ಥಾನವನ್ನು ಗಿಟ್ಟಿಸಿಕೊಂಡಿರುವ ಏಲಕ್ಕಿ ಪರಿಮಳವು ಆಹಾರ ಪದಾರ್ಥಗಳ ಪರಿಮಳವನ್ನು ಹೆಚ್ಚಿಸುತ್ತದೆ. ಜೊತೆಗೆ ಆರೋಗ್ಯ ಸುಧಾರಣೆಗೆ ಸಹಾಯ ಮಾಡುವುದು. ನಿತ್ಯದ ಚಹಾ ಅಥವಾ ನಿಯಮಿತ ಸೇವನೆಯಿಂದಾಗಿ ದೇಹದಲ್ಲಿ ವೈರಸ್ ನಿರೋಧಕ ಕೋಶಗಳ ಬೆಳವಣಿಗೆ ಆಗುವುದು. ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್ ಮತ್ತು ಖನಿಜಗಳು ಸಮೃದ್ಧವಾಗಿರುವುದರಿಂದ ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಒಂದೆಲಗ

ಒಂದೆಲಗವನ್ನು ಸಾಮಾನ್ಯವಾಗಿ  ಚಟ್ನಿ ಹಾಗೂ ಕಷಾಯವನ್ನು ಮಾಡಿ ಸೇವನೆ ಮಾಡುತ್ತಾರೆ. ಇದು ಸಹ ಸೋಂಕು ಮತ್ತು ರೋಗಾಣುಗಳನ್ನು ನಿವಾರಿಸುವ ಶಕ್ತಿಯನ್ನು ಪಡೆದುಕೊಂಡಿದೆ. ಪೋಷಕಾಂಶಗಳು ಮತ್ತು ಉತ್ಕರ್ಷಣ ನಿರೋಧಕಗಳೊಂದಿಗೆ ದೇಹವನ್ನು ಪೋಷಿಸುವ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುವುದು. ಹಾಗಾಗಿ ಒಂದೆಲಗವನ್ನು ನಿಯಮಿತವಾಗಿ ಸೇವಿಸಬಹುದು ಎಂದು ಹೇಳಲಾಗುವುದು. ಚಹಾವನ್ನು ತಯಾರಿಸುವಾಗ ಸ್ಪಲ್ಪ ಪ್ರಮಾಣದಲ್ಲಿ ಒಂದೆಲಗದ ಸೊಪ್ಪನ್ನು ಸೇರಿಸುವುರಿಂದ ಆರೋಗ್ಯಕ್ಕೆ ಪೂರಕವಾದ ಅಂಶಗಳನ್ನು ಪಡೆಯಬಹುದಾಗಿದೆ.

ಶುಂಠಿ

ಶುಂಠಿಯನ್ನು ಸಾಮಾನ್ಯವಾಗಿ ಸಾಂಬಾರು ಪದಾರ್ಥವಾಗಿ ಬಳಸಲಾಗುತ್ತದೆ. ಇದು ಕೇವಲ ಸಾಂಬಾರಿನಲ್ಲಿ ಬೆರೆತು ಬಾಯಿಗೆ ರುಚಿ ನೀಡುವುದು ಮಾತ್ರವಲ್ಲದೆ ಆರೋಗ್ಯಕ್ಕೆ ಪೂರಕವಾದ ಅಂಶಗಳನ್ನು ಕೂಡಾ ಇದು ಒಳಗೊಂಡಿದೆ. ಗಡ್ಡೆ ರೂಪದ ಈ ಗಿಡಮೂಲಿಕೆಯು ವಿಟಮಿನ್ ಬಿ ನಂತಹ ಪೋಷಕಾಂಶಗಳಿಂದ ತುಂಬಿರುತ್ತದೆ. ಯುಗಯುಗಾಂತರಗಳಿಂದಲೂ ಇದನ್ನು ಆಯುರ್ವೇದ ಚಿಕಿತ್ಸೆಯಲ್ಲಿ ಬಳಸಲಾಗುತ್ತಿದೆ. ಇದರಲ್ಲಿ ಇರುವ ಔಷಧೀಯ ಗುಣಗಳು ಸಾಕಷ್ಟು ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತವೆ. ಜೊತೆಗೆ ಪರಿಪೂರ್ಣವಾದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು.

ಶುಂಠಿಯನ್ನು ಚಹಾ ತಯಾರಿಸುವಾಗ ಬೆರೆಸಿದರೆ ಅದ್ಬುತ ಸ್ವಾದದ ಜೊತೆ ಜೊತೆಗೆ ದೇಹದಲ್ಲಿ ರೊಗ ನಿರೋಧಕ ಶಕ್ತಿಯನ್ನು ಉತ್ತಮಗೊಳಿಸುತ್ತದೆ. ಶೀತ, ಕಫದಂತಹಾ ಸಮಸ್ಯೆಯಿಂದ ಬಳಲುತ್ತಿರುವವರು ಶುಂಠಿಯನ್ನು ಸೇವನೆ ಮಾಡುವುದರಿಂದ ಬಹುಬೇಗ ಸಮಸ್ಯೆಯಿಂದ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ.

ಕಾಳುಮೆಣಸು

ಕಾಳುಮೆಣಸು ಭಾರತೀಯ ಸಾಂಬಾರು ಪದಾರ್ಥಗಳಲ್ಲಿ ಅತ್ಯಂತ ಬೇಡಿಕೆಯ ಮಸಾಲೆಯಾಗಿದ್ದು. ಮಸಾಲೆಯುಕ್ತ ಪದಾರ್ಥಗಳನ್ನು ತಯಾರಿಸುವಾಗ ಕಾಳುಮೆಣಸನ್ನು ಸರ್ವೆ ಸಾಮಾನ್ಯವಾಗಿ ಬಳಸಲಾಗುತ್ತದೆ.

ಚಹಾ ತಯಾರಿಸುವಾಗ ಒಂದೆರಡು ಚಿಟಿಕೆಯಷ್ಟು ಕಾಳುಮೆಣಸಿನ ಪುಡಿಯನ್ನು ಸೇರಿಸಿ ಸೇವನೆ ಮಾಡುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಾಮಾನ್ಯ ಶೀತದ ಸಮಸ್ಯೆಯಿಂದ ಬಳಲುತ್ತಿರುವವರು ಕಾಳು ಮೆಣಸನ್ನು ಸೇವನೆ ಮಾಡುವುದು ಉತ್ತಮ. ಕಾಳುಮೆಣಸಿನ ಪುಡಿ ಬೆರೆಸಿರುವ ಚಹಾ ಸೇವನೆಯಿಂದಾಗಿ ಗಂಟಲಿನಲ್ಲಿ ಕಿರಿ-ಕಿರಿ ಯಂತಹ ಸಮಸ್ಯೆಗಳಿಂದ ಬಹುಬೇಗ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ. ಮಳೆಗಾಲದ ಸಮಯದಲ್ಲಿ ಈ ಕಾಳುಮೆಣಸಿನ ಚಹಾ ಸೇವನೆ ದೇಹದ ಆರೋಗ್ಯಕ್ಕೆ ಬಹಳ  ಉತ್ತಮವಾದದ್ದು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.