ಬಿಎಸ್‌ವೈ ಪೂರ್ಣಾವಧಿ ಸಿಎಂ: ಕಾರಜೋಳ

ಕೊರೊನಾ, ಪ್ರಕೃತಿ ವಿಕೋಪ ಸಮರ್ಥ ನಿರ್ವಹಣೆ ಮಾಡಿದ ಸರ್ಕಾರ ­ಟೀಕೆ-ಟಿಪ್ಪಣಿ ಬಿಟ್ಟು ಸಲಹೆ-ಸೂಚನೆ ನೀಡಲಿ

Team Udayavani, May 31, 2021, 6:49 PM IST

2222

ಬಾಗಲಕೋಟೆ: ಮುಖ್ಯಮಂತ್ರಿ ಬದಲಾವಣೆ ವಿಷಯ ಮಾಧ್ಯಮಗಳಲ್ಲಿ ಬಂದಿದ್ದು, ಇದಕ್ಕೆ ರೆಕ್ಕೆ-ಪುಕ್ಕ ಹಚ್ಚಲಾಗುತ್ತಿದೆ. ಯಡಿಯೂರಪ್ಪ ಅವರೇ ಪೂರ್ಣಾವಧಿ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ಬಗ್ಗೆ ಪದೆ ಪದೇ ಹೇಳುವ ಅವಶ್ಯಕತೆ ಇಲ್ಲ. ರಾಜ್ಯದಲ್ಲಿ ಯಡಿಯೂರಪ್ಪ ಪೂರ್ಣಾವ ಧಿ ಮುಖ್ಯಮಂತ್ರಿ ಆಗಿರ್ತಾರೆ. ಅವರ ಬದಲಾವಣೆ ಗಾಳಿ ಸುದ್ದಿ. ಮಾಧ್ಯಮಗಳಿಂದ ಗಾಳಿ ಸುದ್ದಿಗೆ ರೆಕ್ಕೆ-ಪುಕ್ಕ ಹಚ್ಚುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಕೊರೊನಾ ಸಂಕಷ್ಟ, ಪ್ರಕೃತಿ ವಿಕೋಪದಲ್ಲಿ ಯಡಿಯೂರಪ್ಪ ಸರಕಾರ ಅತ್ಯುತ್ತಮ ಕೆಲಸ ಮಾಡಿದೆ. ಬೇರೆ ರಾಜ್ಯಗಳಿಗೆ ಹೋಲಿಸಿ ನೋಡಿ. ನಮ್ಮ ಮುಖ್ಯಮಂತ್ರಿಗಳು ಕೊರೊನಾ ಸಂಕಷ್ಟದಲ್ಲಿ ಅನೇಕ ನೆರವು ನೀಡಿದ್ದಾರೆ. ಸದ್ಯ ಆರ್ಥಿಕ ಸಂಕಷ್ಟದಲ್ಲೂ ನೆರವು ನೀಡುತ್ತಿದ್ದಾರೆ ಎಂದು ಹೇಳಿದರು.

ಪ್ರಧಾನಿ ಕಾಯಿಸಿದ್ದು ಖಂಡನೀಯ: ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಕಾರಜೋಳ, ಪ್ರಧಾನಿಗಳು ಪ್ರಕೃತಿ ವಿಕೋಪ ವೀಕ್ಷಣೆಗೆ ಪಶ್ಚಿಮ ಬಂಗಾಳಕ್ಕೆ ತೆರಳಿದ್ದರು. ಪ್ರಧಾನಿಗಳನ್ನು ಅರ್ಧ ಗಂಟೆ ಕಾಯಿಸಿದ್ದು ಖಂಡನೀಯ. ಮಮತಾ ಬ್ಯಾನರ್ಜಿಯವರಿಗೆ ಸಾಮಾನ್ಯ ಜ್ಞಾನ ಕೂಡ ಇಲ್ಲ. ದೇಶದ ಪ್ರೊಟೊಕಾಲ್‌ ಏನು?, ರಾಷ್ಟ್ರಪತಿಗಳು, ಉಪ ರಾಷ್ಟ್ರಪತಿಗಳು, ಪ್ರಧಾನಿಗಳು ಬಂದಾಗ ಆಯಾ ರಾಜ್ಯದ ಸಿಎಂ ಅವರನ್ನು ಸ್ವಾಗತಿಸಬೇಕಾಗುತ್ತದೆ ಎಂದರು. ಬಿಜೆಪಿಯವರಿಗೆ ಸಿಎಂ ಬದಲಾವಣೆ ರೋಗ ಹತ್ತಿದೆ ಎಂಬ ಸಿದ್ದರಾಮಯ್ಯ ವ್ಯಂಗ್ಯ ಹೇಳಿಕೆಗೆ ಕಾರಜೋಳ ತಿರುಗೇಟು ನೀಡಿದ್ದು, ಸಿದ್ದರಾಮಯ್ಯ ಅವರಿಗೆ ಪಾಪ ತುರ್ತಾಗಿ ಸಿಎಂ ಆಗಬೇಕಂತಾರೆ. ಆದರೆ, ಅವಕಾಶವಿಲ್ಲ. ಈ ದೇಶದಲ್ಲಿ ಕಾಂಗ್ರೆಸ್‌ ಅವಸಾನದ ಕಾಲದಲ್ಲಿದೆ. ಮೊನ್ನೆ ನಡೆದ ಐದು ರಾಜ್ಯಗಳ ಚುನಾವಣೆ ಕಳಪೆಯಾಗಿದೆ ಎಂದು ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹೇಳಿದ್ದಾರೆ. ಸಿದ್ದರಾಮಯ್ಯ ವಿನಾಕಾರಣ ದೇಶದ ಪ್ರಧಾನಿಗಳನ್ನಾಗಲಿ, ರಾಜ್ಯದ ಸಿಎಂ ಅವರನ್ನಾಗಲಿ ಟೀಕೆ ಮಾಡಬಾರದು. ಟೀಕೆ ಮಾಡೋದನ್ನು ಬಿಟ್ಟು ಸಲಹೆ ಸೂಚನೆಗಳನ್ನು ಇಂತಹ ಕಠಿಣ ಪರಿಸ್ಥಿತಿಗಳಲ್ಲಿ ಕೊಡಬೇಕು. ಅವರ ಸಲಹೆ ಸೂಚನೆ ಪಾಲಿಸುತ್ತೇವೆ ಎಂದು ತಿಳಿಸಿದರು. ವಿರೋಧ ಪಕ್ಷ ಎಂದಾಗ, ಬರಿ ಟೀಕೆ ಮಾಡೋದೆ ಗುರಿ. ಆದರೆ, ಟೀಕೆ ಮಾಡೋದಕ್ಕೆನೆ ವಿರೋಧ ಪಕ್ಷನಾ ಅಂತ ಪ್ರಶ್ನೆ ಮಾಡಬೇಕಾಗುತ್ತದೆ ಎಂದರು.

ಲಾಕ್‌ಡೌನ್‌ ಮುಂದೂಡಿಕೆ ವಿಚಾರ ಮಾಡಿಲ್ಲ : ಜೂನ್‌ 7ರ ನಂತರ ಲಾಕ್‌ ಡೌನ್‌ ಮುಂದುವರಿಕೆ ಕುರಿತು ಇನ್ನು ಆ ಬಗ್ಗೆ ಆಲೋಚನೆ ಮಾಡಿಲ್ಲ. ಜೂನ್‌ 7ರವರೆಗೂ ಲಾಕ್‌ ಡೌನ್‌ ಇದೆ. ನಂತರ ನೋಡೋಣ ಎಂದು ಹೇಳಿದರು.

ಹಕ್ಕುಚ್ಯುತಿ ಮಂಡಿಸುವ ಮುನ್ನ ಅ ಧಿಕಾರಿಗಳ ಜೊತೆ ರಿವ್ಯೂವ್‌ ಮಾಡೋಕೆ ಅವಕಾಶ ಕೊಡಲಿಲ್ಲ, ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅವರ ಸರ್ಕಾರ ಇದ್ದಾಗ, ಸಿದ್ದರಾಮಯ್ಯ ಅವ್ರೇ ಸಿಎಂ ಇದ್ದ ಸಂದರ್ಭದಲ್ಲಿ ಯಾವ ಆದೇಶಗಳನ್ನು ನೀಡಿದ್ದಾರೆ ಎಂಬುದನ್ನು ಇನ್ನೊಂದು ಸಾರಿ ಓದಲಿ. ಅವರ ಪಕ್ಷದ ಉಪ ಮುಖ್ಯಮಂತ್ರಿ ಪರಮೇಶ್ವರ ಅವರು ರೀವಿವ್‌ ಮಾಡ್ತೀನಿ ಅಂದಾಗಲೇ ಅವಕಾಶ ಕೊಟ್ಟಿಲ್ಲ. ಯಡಿಯೂರಪ್ಪ, ನಾವು ವಿಪಕ್ಷದಲ್ಲಿ ಇದ್ದಾಗ ಬಾಗಲಕೋಟೆ ಡಿಸಿ ಆμàಸ್‌ ಮುಂಭಾಗ ಮಲಗಿದ್ವಿ. ಆಗ ನಮಗೆ ಒಂದೇ ಒಂದು ಮಾಹಿತಿ ಕೊಡಲಿಲ್ಲ. ಒಂದು ಪೀಸ್‌ ಪೇಪರು ಕೂಡಾ ಕೊಡಲಿಲ್ಲ. ಆ ರೀತಿಯ ನಡವಳಿಕೆ ಯಾವಾಗಲೂ ಕಾಂಗ್ರೆಸ್‌ ಸರ್ಕಾರದ್ದು. ಅವರಿಗೆ ಆ ಹುಚ್ಚು ಯಾಕೆ ಗೊತ್ತಿಲ್ಲ. ಎಲ್ಲ ಡಿಸಿಗಳ ಮೀಟಿಂಗ್‌ ತಗೊಂಡು ರಿವೀವ್‌ ಮಾಡ್ತೀನಿ ಅಂದ್ರೆ ಅದಕ್ಕೆ ಅವಕಾಶ ಇಲ್ಲ.ಮಾಹಿತಿ ತಗೊಳ್ಳಬಹುದು. ನಾವು ಒದಗಿಸೋದಕ್ಕೆ ಸೂಚನೆ ಕೊಡುತ್ತೇವೆ ಎಂದರು.

ಅನಾಥ ಮಕ್ಕಳಿಗೆ ಪಿಂಚಣಿ: ಕೊರೊನಾದಿಂದ ತಂದೆ-ತಾಯಿ ಮೃತರಾಗಿ ಮಕ್ಕಳ ಅನಾಥರಾಗಿದ್ದರೆ ರಾಜ್ಯ ಮತ್ತು ಕೇಂದ್ರದ ನೆರವಿಗೆ ಬರಲಿವೆ. ಈ ಕುರಿತು ಬಾಗಲಕೋಟೆ ಜಿಲ್ಲೆಯಲ್ಲಿ ಸರ್ವೇ ಮಾಡಲು ಮಹಿಳಾ ಮತ್ತು ಮಕ್ಕಳ ಇಲಾಖೆಗೆ ಸೂಚನೆ ನೀಡಲಾಗಿದೆ. ಎಲ್ಲ ಸಿಡಿಪಿಒಗಳಿಗೆ ಹೇಳಿದ್ದೇವೆ. ಯಾರಾದ್ರೂ ಅನಾಥ ಮಕ್ಕಳು ಇದ್ರೆ ಅಂತವರ ವ್ಯವಸ್ಥೆಯನ್ನು ಸರ್ಕಾರ ಮಾಡುತ್ತೆ. ಸರ್ಕಾರದ ವ್ಯವಸ್ಥೆಯಲ್ಲಿ ಅವರನ್ನ ಜೋಪಾನ ಮಾಡ್ತೇವೆ. ಅವರಿಗೆ ಮೂರುವರೆ ಸಾವಿರ ರೂ. ಪೆನ್ಶನ್‌ ಕೊಡುತ್ತೇವೆ.

ಕೇಂದ್ರ ಸರ್ಕಾರ ಕೂಡ 10 ಲಕ್ಷ ರೂ. ವಿಮಾ ವ್ಯವಸ್ಥೆ ಮಾಡಿದೆ. 18 ವರ್ಷಗಳ ನಂತರ ಉನ್ನತ ಶಿಕ್ಷಣಕ್ಕೆ ಉಪಯೋಗಕ್ಕೆ ವ್ಯವಸ್ಥೆ ಮಾಡಲಾಗುವುದು. ಅಲ್ಲದೇ ನಮ್ಮ ಕೇಂದ್ರೀಯ ವಿದ್ಯಾಲಯ, ವಸತಿ ಶಾಲೆಗಳಲ್ಲಿ ಅವರಿಗೆ ವ್ಯವಸ್ಥೆ ಮಾಡಲಿದ್ದು, ಅಂತ ಮಕ್ಕಳು ಇದ್ರೆ, ಗುರುತಿಸಿ ನಮ್ಮ ಸರ್ಕಾರಕ್ಕೆ ಒಪ್ಪಿಸುವ ಕೆಲಸ ಮಾಡಲಿ ಎಂದು ಹೇಳಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.