ಎರಡನೇ ಅಲೆಯಲ್ಲಿ  105 ಜನ ಬಲಿ

ಈ ಬಾರಿ ಸತ್ತವರಲ್ಲಿ ಮಹಿಳೆಯರೇ ಹೆಚ್ಚು­, 2ನೇ ಅಲೆಯಲ್ಲಿ 12419 ಜನರಿಗೆ ಸೋಂಕು

Team Udayavani, May 31, 2021, 8:06 PM IST

45

ಗದಗ: ಜಿಲ್ಲೆಯಲ್ಲಿ ದಿನಕಳೆದಂತೆ ಕೊರೊನಾ ಸೊಂಕಿತರ ಸಂಖ್ಯೆ ಇಳಿಮುಖವಾಗಿದ್ದರೂ, ಎರಡನೇ ಅಲೆ ತೀವ್ರವಾಗಿ ಭಾದಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 2ನೇ ಅಲೆಯಲ್ಲಿ ಸೋಂಕಿನ ತೀವ್ರತೆ ಮತ್ತು ಮೃತರ ಸಂಖ್ಯೆಯೂ ಹೆಚ್ಚಿರುವುದು ಆತಂಕಕಾರಿ ಬೆಳವಣಿಗೆ.

ಕಳೆದ ವರ್ಷ ಅಕ್ಟೋಬರ್‌ ನಿಂದ 2021ರ ಏಪ್ರಿಲ್‌ವರೆಗೆ ತಿಂಗಳಿಗೆ ಬೆರಳೆಣಿಕೆಯಷ್ಟು ಸೋಂಕು ಕಂಡು ಬರುತ್ತಿತ್ತು. ಆದರೆ ಕೋವಿಡ್‌ ಸೋಂಕಿನಿಂದ ಯಾರೊಬ್ಬರೂ ಮೃತಪಟ್ಟಿರಲಿಲ್ಲ. ಆದರೆ ಜಿಲ್ಲೆಯಲ್ಲಿ ಕೊರೊನಾ 2ನೇ ಅಲೆ ಏಪ್ರಿಲ್‌ ನಿಂದ ಗಗನಮುಖೀಯಾಗಿದೆ. 2020ರ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ 6778 ಪುರುಷ ಮತ್ತು 4129 ಮಹಿಳೆಯರು ಸೇರಿದಂತೆ ಒಟ್ಟು 10907 ಜನರು ಸೋಂಕಿಗೆ ಒಳಗಾಗಿದ್ದರು. ಆದರೆ 2ನೇ ಅಲೆಯಲ್ಲಿ 12419 ಜನರಿಗೆ ಸೋಂಕು ಇರುವುದು ಪತ್ತೆಯಾಗಿದೆ. ಈ ಬಾರಿ ಗ್ರಾಮೀಣ ಭಾಗಕ್ಕೂ ವಿಸ್ತರಿಸಿದೆ.

ಜಿಲ್ಲೆಯ ಒಟ್ಟು ಸೋಂಕಿತರಲ್ಲಿ ಶೇ. 55ರಷ್ಟು ಜನರು ಗ್ರಾಮೀಣ ಭಾಗಕ್ಕೆ ಸೇರಿದವರು ಎನ್ನಲಾಗಿದೆ. ಮೃತರಲ್ಲಿ ಮಹಿಳೆಯರೇ ಹೆಚ್ಚು: ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಪೈಕಿ ಈ ಬಾರಿ ಮೃತರಲ್ಲಿ ಮಹಿಳೆಯರ ಸಂಖ್ಯೆಯೇ ಹೆಚ್ಚಿದೆ. 2020ರಲ್ಲಿ ಆರಂಭಗೊಂಡ ಮೊದಲ ಅಲೆಯಲ್ಲಿ ಒಟ್ಟು 141 ಜನರು ಕೊನೆಯುಸಿರೆಳೆದಿದ್ದಾರೆ. ಅದರಲ್ಲಿ ಶೇ.77 ಪುರುಷ, ಶೇ.23 ಮಹಿಳೆಯರು ಮೃತಪಟ್ಟಿದ್ದರು. ಕೊರೊನಾ 2ನೇ ಅಲೆಯಲ್ಲಿ ಏಪ್ರಿಲ್‌-ಮೇ ಈ ಎರಡು ತಿಂಗಳಲ್ಲಿ ಒಟ್ಟು 105 ಜನರು ಮೃತಪಟ್ಟಿದ್ದಾರೆ. ಈ ಪೈಕಿ ಶೇ.54 ಮಹಿಳೆಯರೇ ಮಹಾಮಾರಿಗೆ ಬಲಿಯಾಗಿದ್ದಾರೆ.

ಸೋಂಕಿನ ನಿರ್ಲಕ್ಷ್ಯದಿಂದ ಸಾವು: ಮೊದಲ ಅಲೆಯಲ್ಲಿ ಜನರಲ್ಲಿ ಸಾಮಾನ್ಯವಾಗಿ ಕೆಮ್ಮು, ನೆಗಡಿಯಂತಹ ಕೋವಿಡ್‌ ಲಕ್ಷಣಗಳು ಕಂಡು ಬರುತ್ತಿದ್ದವು. ಆದರೆ 2ನೇ ಅಲೆಯಲ್ಲಿ ಯಾವುದೇ ರೋಗ ಲಕ್ಷಣಗಳು ಕಂಡು ಬರದಿದ್ದರೂ ಸೋಂಕು ಖಚಿತವಾಗುತ್ತಿದೆ.

ಇನ್ನೂ ಕೆಲವರಿಗೆ ರೋಗ ಲಕ್ಷಣಗಳಿದ್ದರೂ, ಆರ್‌ಟಿಪಿಸಿಆರ್‌ನಲ್ಲಿ ವರದಿ ನೆಗೆಟಿವ್‌ ಆಗಿರುತ್ತದೆ. ಈ ಹಂತದಲ್ಲಿ ಅನೇಕರು ನಿರ್ಲಕ್ಷ್ಯ ತೋರುವುದರಿಂದ ಆಪತ್ತಿಗೊಳಗಾಗುತ್ತಿದ್ದಾರೆ. ಆನಂತರ ಸೋಂಕಿನ ಲಕ್ಷಣಗಳು ತೀವ್ರಗೊಂಡಾಗ ನಡೆಸುವ ಸಿಟಿ ಸ್ಕ್ಯಾನ್‌ನಲ್ಲಿ ಕೋವಿಡ್‌ ಕಂಡು ಬರುತ್ತಿದೆ. ಈ ಹಂತದಲ್ಲಿ ತಕ್ಷಣಕ್ಕೆ ಅಗತ್ಯ ಚಿಕಿತ್ಸೆ ದೊರೆಯದಿರುವುದು, ಚಿಕಿತ್ಸೆಗೆ ರೋಗಿ ಸ್ಪಂದಿಸದೇ ಸಾಯುತ್ತಿದ್ದಾರೆ.

ಇನ್ನು ಸಕ್ಕರೆ ಕಾಯಿಲೆಯಂತಹ ಗಂಭೀರ ಕಾಯಿಲೆ, ನಿಮೋನಿಯಾ ಹಾಗೂ ಹೃದಯ ಸಂಬಂ ಧಿತ ಕಾರಣಗಳಿಂದ ಸಾಯುತ್ತಿರುವವರ ಸಂಖ್ಯೆ ಹೆಚ್ಚಿದೆ ಎನ್ನುತ್ತಾರೆ ಜಿಮ್ಸ್‌ ಆಸ್ಪತ್ರೆ ವೈದ್ಯರು. ಕಳೆದ 10 ದಿನಗಳಿಂದ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಿದ್ದರೂ ಸಾವಿನ ಸರಣಿ ನಿಲ್ಲುತ್ತಿಲ್ಲ. ಪ್ರತಿನಿತ್ಯ ನಾಲ್ಕ್ಐದು ಜನರು ಕೊನೆಯುಸಿರೆಳೆಯುತ್ತಿರುವುದು ಸಾರ್ವಜನಿಕರಲ್ಲಿ ಆಂತಕ ಹೆಚ್ಚಿಸಿದೆ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.